Homeಮುಖಪುಟಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

- Advertisement -
- Advertisement -

ಅದಾನಿ ಗ್ರೂಪ್ ಸ್ಟಾಕ್‌ನಲ್ಲಿನ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್‌ನಷ್ಟು ಹೂಡಿಕೆ ಮಾಡಿರುವ ಮಾರಿಷಸ್ ಫಂಡ್ ಮಾಲೀಕರ ಬಗ್ಗೆ ಸೆಬಿ (SEBI) ಯಾಕೆ ಇನ್ನೂ ಪ್ರಶ್ನೆ ಮಾಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕೇಳಿದ್ದಾರೆ.

ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್‌ವೆಸ್ಟ್‌ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್‌ವೆಸ್ಟ್‌ಮೆಂಟ್ ಫಂಡ್‌ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಕಣ್ಮರೆಯಾಗಿದ್ದವು. ಶೆಲ್‌ ಸಂಸ್ಥೆ ಎಂದರೆ ತೆರಿಗೆ ವಂಚಿಸುವುದಕ್ಕಾಗಿ ತೆರಿಗೆ ಮುಕ್ತ ರಾಷ್ಟ್ರಗಳಲ್ಲಿ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಅದಾನಿ ಸಮೂಹವು ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿಕೊಳ್ಳಲು ಈ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಿದ್ದಾರೆ ಎಂದು ಹಿಂಡನ್‌ಬರ್ಗ್ ವರದಿ ಆರೋಪಿಸಿದೆ.

ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಬಂಧದ ಕುರಿತು ಪಾರದರ್ಶಕತೆ ಇಲ್ಲದಿದ್ದಾಗ ಸೆಬಿಯಂತಹ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುವುದನ್ನು ಉತ್ತೇಜಿಸಬೇಕು. ಮಾರಿಷಸ್‌ನಿಂದ ಅದಾನಿ ಕಂಪನಿ ಷೇರುಗಳನ್ನು ಮಾರುತ್ತಿರುವ ಮತ್ತು ಹೋಲ್ಡಿಂಗ್ ಮಾಡುತ್ತಿರುವ ಕಂಪನಿಗಳ ಮಾಲೀಕರು ಯಾರು ಎಂಬುದನ್ನು ಏಕೆ ಸೆಬಿ ಪತ್ತೆ ಹಚ್ಚುತ್ತಿಲ್ಲ. ಏಕೆಂದರೆ ಅವುಗಳ ಮಾಲೀಕತ್ವ ನಿಗೂಢವಾಗಿದ್ದು, ಅದಾನಿ ಕುಟುಂಬದವರೆ ಆ ಕಂಪನಿಗಳನ್ನು ನಡೆಸುತ್ತಿವೆ ಎಂದು ಹಿಂಡೆನ್‌ ಬರ್ಗ್ ವರದಿ ಆರೋಪಿಸಿದೆ ಎಂದು ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆಯ ದರ ಕುಸಿತ

ಭಾರತದ ಆರ್ಥಿಕ ಬೆಳವಣಿಗೆಯ ದರವು ಮೂರನೇ ತ್ರೈಮಾಸಿಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಭಾರತವು ಅಪಾಯಕಾರಿ ಹಂತದ ಹತ್ತಿರದಲ್ಲಿದೆ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ)ಯು ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ತ್ರೈಮಾಸಿಕ ಬೆಳವಣಿಗೆಯಲ್ಲಿ ಅನುಕ್ರಮವಾದ ನಿಧಾನಗತಿಯನ್ನು ನೋಡಿದರೆ ಬಹಳ ಕಳವಳಕಾರಿಯಾಗಿದೆ ಎಂದು ರಾಜನ್ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ಯು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 4.4%ಕ್ಕೆ ಕಡಿಮೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) 6.3% ಮತ್ತು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 13.2% ಇತ್ತು. ಈ ರೀತಿ ಅನುಕ್ರಮವಾದ ನಿಧಾನಗತಿಯ ಬೆಳವಣಿಗೆಯು ಆತಂಕ ಸೃಷ್ಟಿಸುತ್ತದೆ ಎಂದಿದ್ದಾರೆ.

”ಆಶಾವಾದಿಗಳು GDP [ಒಟ್ಟು ದೇಶೀಯ ಉತ್ಪನ್ನ] ಹೆಚ್ಚಳದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅನುಕ್ರಮವಾದ ನಿಧಾನಗತಿಯ ಬಗ್ಗೆ ನಾನು ಚಿಂತಿತನಾಗಿದ್ದೇನೆ” ಎಂದು ರಾಜನ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

”ಖಾಸಗಿ ವಲಯವು ಹೂಡಿಕೆ ಮಾಡಲು ಇಷ್ಟವಿಲ್ಲದ ಕಾರಣ RBI ಇನ್ನೂ ದರಗಳನ್ನು ಹೆಚ್ಚಿಸುತ್ತಿದೆ ಮತ್ತು ಜಾಗತಿಕ ಬೆಳವಣಿಗೆಯು ವರ್ಷದ ನಂತರ ನಿಧಾನಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿ ಬೆಳವಣಿಗೆಯ ಆವೇಗವನ್ನು ನಾವು ಎಲ್ಲಿ ಕಂಡುಕೊಳ್ಳುತ್ತೇವೆ ಎಂದು ನನಗೆ ಖಚಿತವಿಲ್ಲ” ಎಂದು ಹೇಳಿದ್ದಾರೆ.

“ಈ ಹಂತದಲ್ಲಿ, ಮೂರು ವರ್ಷಗಳ ಹಿಂದೆ ಅಂದರೆ ಕೊರೊನಾ ಸಾಂಕ್ರಾಮಿಕ ಬರುವ ಮುಂಚೆ ಹೋಲಿಸಿದರೆ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಸರಾಸರಿ ವಾರ್ಷಿಕ ಬೆಳವಣಿಗೆಯು 3.7% ಆಗಿದೆ. ಇದು ದೇಶಕ್ಕೆ ಅಪಾಯಕಾರಿಯಾದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. MY OPINION …As Governer OF RBI this route WAS THERE via MAURITIOUS . AT HIS WATCH HE NEVER FOUND ANYTHING WRONG. WHY NOW? WHY WAS THIS ROUTE CREATED What was the need

LEAVE A REPLY

Please enter your comment!
Please enter your name here

- Advertisment -

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...