Homeಮುಖಪುಟಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

- Advertisement -
- Advertisement -

ಅದಾನಿ ಗ್ರೂಪ್ ಸ್ಟಾಕ್‌ನಲ್ಲಿನ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್‌ನಷ್ಟು ಹೂಡಿಕೆ ಮಾಡಿರುವ ಮಾರಿಷಸ್ ಫಂಡ್ ಮಾಲೀಕರ ಬಗ್ಗೆ ಸೆಬಿ (SEBI) ಯಾಕೆ ಇನ್ನೂ ಪ್ರಶ್ನೆ ಮಾಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕೇಳಿದ್ದಾರೆ.

ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್‌ವೆಸ್ಟ್‌ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್‌ವೆಸ್ಟ್‌ಮೆಂಟ್ ಫಂಡ್‌ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಕಣ್ಮರೆಯಾಗಿದ್ದವು. ಶೆಲ್‌ ಸಂಸ್ಥೆ ಎಂದರೆ ತೆರಿಗೆ ವಂಚಿಸುವುದಕ್ಕಾಗಿ ತೆರಿಗೆ ಮುಕ್ತ ರಾಷ್ಟ್ರಗಳಲ್ಲಿ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಅದಾನಿ ಸಮೂಹವು ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿಕೊಳ್ಳಲು ಈ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಿದ್ದಾರೆ ಎಂದು ಹಿಂಡನ್‌ಬರ್ಗ್ ವರದಿ ಆರೋಪಿಸಿದೆ.

ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಬಂಧದ ಕುರಿತು ಪಾರದರ್ಶಕತೆ ಇಲ್ಲದಿದ್ದಾಗ ಸೆಬಿಯಂತಹ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುವುದನ್ನು ಉತ್ತೇಜಿಸಬೇಕು. ಮಾರಿಷಸ್‌ನಿಂದ ಅದಾನಿ ಕಂಪನಿ ಷೇರುಗಳನ್ನು ಮಾರುತ್ತಿರುವ ಮತ್ತು ಹೋಲ್ಡಿಂಗ್ ಮಾಡುತ್ತಿರುವ ಕಂಪನಿಗಳ ಮಾಲೀಕರು ಯಾರು ಎಂಬುದನ್ನು ಏಕೆ ಸೆಬಿ ಪತ್ತೆ ಹಚ್ಚುತ್ತಿಲ್ಲ. ಏಕೆಂದರೆ ಅವುಗಳ ಮಾಲೀಕತ್ವ ನಿಗೂಢವಾಗಿದ್ದು, ಅದಾನಿ ಕುಟುಂಬದವರೆ ಆ ಕಂಪನಿಗಳನ್ನು ನಡೆಸುತ್ತಿವೆ ಎಂದು ಹಿಂಡೆನ್‌ ಬರ್ಗ್ ವರದಿ ಆರೋಪಿಸಿದೆ ಎಂದು ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆಯ ದರ ಕುಸಿತ

ಭಾರತದ ಆರ್ಥಿಕ ಬೆಳವಣಿಗೆಯ ದರವು ಮೂರನೇ ತ್ರೈಮಾಸಿಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಭಾರತವು ಅಪಾಯಕಾರಿ ಹಂತದ ಹತ್ತಿರದಲ್ಲಿದೆ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ)ಯು ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ತ್ರೈಮಾಸಿಕ ಬೆಳವಣಿಗೆಯಲ್ಲಿ ಅನುಕ್ರಮವಾದ ನಿಧಾನಗತಿಯನ್ನು ನೋಡಿದರೆ ಬಹಳ ಕಳವಳಕಾರಿಯಾಗಿದೆ ಎಂದು ರಾಜನ್ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ಯು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 4.4%ಕ್ಕೆ ಕಡಿಮೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) 6.3% ಮತ್ತು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 13.2% ಇತ್ತು. ಈ ರೀತಿ ಅನುಕ್ರಮವಾದ ನಿಧಾನಗತಿಯ ಬೆಳವಣಿಗೆಯು ಆತಂಕ ಸೃಷ್ಟಿಸುತ್ತದೆ ಎಂದಿದ್ದಾರೆ.

”ಆಶಾವಾದಿಗಳು GDP [ಒಟ್ಟು ದೇಶೀಯ ಉತ್ಪನ್ನ] ಹೆಚ್ಚಳದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅನುಕ್ರಮವಾದ ನಿಧಾನಗತಿಯ ಬಗ್ಗೆ ನಾನು ಚಿಂತಿತನಾಗಿದ್ದೇನೆ” ಎಂದು ರಾಜನ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

”ಖಾಸಗಿ ವಲಯವು ಹೂಡಿಕೆ ಮಾಡಲು ಇಷ್ಟವಿಲ್ಲದ ಕಾರಣ RBI ಇನ್ನೂ ದರಗಳನ್ನು ಹೆಚ್ಚಿಸುತ್ತಿದೆ ಮತ್ತು ಜಾಗತಿಕ ಬೆಳವಣಿಗೆಯು ವರ್ಷದ ನಂತರ ನಿಧಾನಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿ ಬೆಳವಣಿಗೆಯ ಆವೇಗವನ್ನು ನಾವು ಎಲ್ಲಿ ಕಂಡುಕೊಳ್ಳುತ್ತೇವೆ ಎಂದು ನನಗೆ ಖಚಿತವಿಲ್ಲ” ಎಂದು ಹೇಳಿದ್ದಾರೆ.

“ಈ ಹಂತದಲ್ಲಿ, ಮೂರು ವರ್ಷಗಳ ಹಿಂದೆ ಅಂದರೆ ಕೊರೊನಾ ಸಾಂಕ್ರಾಮಿಕ ಬರುವ ಮುಂಚೆ ಹೋಲಿಸಿದರೆ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಸರಾಸರಿ ವಾರ್ಷಿಕ ಬೆಳವಣಿಗೆಯು 3.7% ಆಗಿದೆ. ಇದು ದೇಶಕ್ಕೆ ಅಪಾಯಕಾರಿಯಾದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. MY OPINION …As Governer OF RBI this route WAS THERE via MAURITIOUS . AT HIS WATCH HE NEVER FOUND ANYTHING WRONG. WHY NOW? WHY WAS THIS ROUTE CREATED What was the need

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...