Homeಮುಖಪುಟಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

- Advertisement -
- Advertisement -

ಅದಾನಿ ಗ್ರೂಪ್ ಸ್ಟಾಕ್‌ನಲ್ಲಿನ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್‌ನಷ್ಟು ಹೂಡಿಕೆ ಮಾಡಿರುವ ಮಾರಿಷಸ್ ಫಂಡ್ ಮಾಲೀಕರ ಬಗ್ಗೆ ಸೆಬಿ (SEBI) ಯಾಕೆ ಇನ್ನೂ ಪ್ರಶ್ನೆ ಮಾಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕೇಳಿದ್ದಾರೆ.

ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್‌ವೆಸ್ಟ್‌ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್‌ವೆಸ್ಟ್‌ಮೆಂಟ್ ಫಂಡ್‌ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಕಣ್ಮರೆಯಾಗಿದ್ದವು. ಶೆಲ್‌ ಸಂಸ್ಥೆ ಎಂದರೆ ತೆರಿಗೆ ವಂಚಿಸುವುದಕ್ಕಾಗಿ ತೆರಿಗೆ ಮುಕ್ತ ರಾಷ್ಟ್ರಗಳಲ್ಲಿ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಅದಾನಿ ಸಮೂಹವು ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿಕೊಳ್ಳಲು ಈ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಿದ್ದಾರೆ ಎಂದು ಹಿಂಡನ್‌ಬರ್ಗ್ ವರದಿ ಆರೋಪಿಸಿದೆ.

ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಬಂಧದ ಕುರಿತು ಪಾರದರ್ಶಕತೆ ಇಲ್ಲದಿದ್ದಾಗ ಸೆಬಿಯಂತಹ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುವುದನ್ನು ಉತ್ತೇಜಿಸಬೇಕು. ಮಾರಿಷಸ್‌ನಿಂದ ಅದಾನಿ ಕಂಪನಿ ಷೇರುಗಳನ್ನು ಮಾರುತ್ತಿರುವ ಮತ್ತು ಹೋಲ್ಡಿಂಗ್ ಮಾಡುತ್ತಿರುವ ಕಂಪನಿಗಳ ಮಾಲೀಕರು ಯಾರು ಎಂಬುದನ್ನು ಏಕೆ ಸೆಬಿ ಪತ್ತೆ ಹಚ್ಚುತ್ತಿಲ್ಲ. ಏಕೆಂದರೆ ಅವುಗಳ ಮಾಲೀಕತ್ವ ನಿಗೂಢವಾಗಿದ್ದು, ಅದಾನಿ ಕುಟುಂಬದವರೆ ಆ ಕಂಪನಿಗಳನ್ನು ನಡೆಸುತ್ತಿವೆ ಎಂದು ಹಿಂಡೆನ್‌ ಬರ್ಗ್ ವರದಿ ಆರೋಪಿಸಿದೆ ಎಂದು ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆಯ ದರ ಕುಸಿತ

ಭಾರತದ ಆರ್ಥಿಕ ಬೆಳವಣಿಗೆಯ ದರವು ಮೂರನೇ ತ್ರೈಮಾಸಿಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಭಾರತವು ಅಪಾಯಕಾರಿ ಹಂತದ ಹತ್ತಿರದಲ್ಲಿದೆ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ)ಯು ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ತ್ರೈಮಾಸಿಕ ಬೆಳವಣಿಗೆಯಲ್ಲಿ ಅನುಕ್ರಮವಾದ ನಿಧಾನಗತಿಯನ್ನು ನೋಡಿದರೆ ಬಹಳ ಕಳವಳಕಾರಿಯಾಗಿದೆ ಎಂದು ರಾಜನ್ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ಯು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 4.4%ಕ್ಕೆ ಕಡಿಮೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) 6.3% ಮತ್ತು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 13.2% ಇತ್ತು. ಈ ರೀತಿ ಅನುಕ್ರಮವಾದ ನಿಧಾನಗತಿಯ ಬೆಳವಣಿಗೆಯು ಆತಂಕ ಸೃಷ್ಟಿಸುತ್ತದೆ ಎಂದಿದ್ದಾರೆ.

”ಆಶಾವಾದಿಗಳು GDP [ಒಟ್ಟು ದೇಶೀಯ ಉತ್ಪನ್ನ] ಹೆಚ್ಚಳದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅನುಕ್ರಮವಾದ ನಿಧಾನಗತಿಯ ಬಗ್ಗೆ ನಾನು ಚಿಂತಿತನಾಗಿದ್ದೇನೆ” ಎಂದು ರಾಜನ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

”ಖಾಸಗಿ ವಲಯವು ಹೂಡಿಕೆ ಮಾಡಲು ಇಷ್ಟವಿಲ್ಲದ ಕಾರಣ RBI ಇನ್ನೂ ದರಗಳನ್ನು ಹೆಚ್ಚಿಸುತ್ತಿದೆ ಮತ್ತು ಜಾಗತಿಕ ಬೆಳವಣಿಗೆಯು ವರ್ಷದ ನಂತರ ನಿಧಾನಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿ ಬೆಳವಣಿಗೆಯ ಆವೇಗವನ್ನು ನಾವು ಎಲ್ಲಿ ಕಂಡುಕೊಳ್ಳುತ್ತೇವೆ ಎಂದು ನನಗೆ ಖಚಿತವಿಲ್ಲ” ಎಂದು ಹೇಳಿದ್ದಾರೆ.

“ಈ ಹಂತದಲ್ಲಿ, ಮೂರು ವರ್ಷಗಳ ಹಿಂದೆ ಅಂದರೆ ಕೊರೊನಾ ಸಾಂಕ್ರಾಮಿಕ ಬರುವ ಮುಂಚೆ ಹೋಲಿಸಿದರೆ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಸರಾಸರಿ ವಾರ್ಷಿಕ ಬೆಳವಣಿಗೆಯು 3.7% ಆಗಿದೆ. ಇದು ದೇಶಕ್ಕೆ ಅಪಾಯಕಾರಿಯಾದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. MY OPINION …As Governer OF RBI this route WAS THERE via MAURITIOUS . AT HIS WATCH HE NEVER FOUND ANYTHING WRONG. WHY NOW? WHY WAS THIS ROUTE CREATED What was the need

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...