Homeಮುಖಪುಟಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

- Advertisement -
- Advertisement -

ಅದಾನಿ ಗ್ರೂಪ್ ಸ್ಟಾಕ್‌ನಲ್ಲಿನ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್‌ನಷ್ಟು ಹೂಡಿಕೆ ಮಾಡಿರುವ ಮಾರಿಷಸ್ ಫಂಡ್ ಮಾಲೀಕರ ಬಗ್ಗೆ ಸೆಬಿ (SEBI) ಯಾಕೆ ಇನ್ನೂ ಪ್ರಶ್ನೆ ಮಾಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕೇಳಿದ್ದಾರೆ.

ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್‌ವೆಸ್ಟ್‌ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್‌ವೆಸ್ಟ್‌ಮೆಂಟ್ ಫಂಡ್‌ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಕಣ್ಮರೆಯಾಗಿದ್ದವು. ಶೆಲ್‌ ಸಂಸ್ಥೆ ಎಂದರೆ ತೆರಿಗೆ ವಂಚಿಸುವುದಕ್ಕಾಗಿ ತೆರಿಗೆ ಮುಕ್ತ ರಾಷ್ಟ್ರಗಳಲ್ಲಿ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಅದಾನಿ ಸಮೂಹವು ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿಕೊಳ್ಳಲು ಈ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಿದ್ದಾರೆ ಎಂದು ಹಿಂಡನ್‌ಬರ್ಗ್ ವರದಿ ಆರೋಪಿಸಿದೆ.

ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಬಂಧದ ಕುರಿತು ಪಾರದರ್ಶಕತೆ ಇಲ್ಲದಿದ್ದಾಗ ಸೆಬಿಯಂತಹ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುವುದನ್ನು ಉತ್ತೇಜಿಸಬೇಕು. ಮಾರಿಷಸ್‌ನಿಂದ ಅದಾನಿ ಕಂಪನಿ ಷೇರುಗಳನ್ನು ಮಾರುತ್ತಿರುವ ಮತ್ತು ಹೋಲ್ಡಿಂಗ್ ಮಾಡುತ್ತಿರುವ ಕಂಪನಿಗಳ ಮಾಲೀಕರು ಯಾರು ಎಂಬುದನ್ನು ಏಕೆ ಸೆಬಿ ಪತ್ತೆ ಹಚ್ಚುತ್ತಿಲ್ಲ. ಏಕೆಂದರೆ ಅವುಗಳ ಮಾಲೀಕತ್ವ ನಿಗೂಢವಾಗಿದ್ದು, ಅದಾನಿ ಕುಟುಂಬದವರೆ ಆ ಕಂಪನಿಗಳನ್ನು ನಡೆಸುತ್ತಿವೆ ಎಂದು ಹಿಂಡೆನ್‌ ಬರ್ಗ್ ವರದಿ ಆರೋಪಿಸಿದೆ ಎಂದು ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆಯ ದರ ಕುಸಿತ

ಭಾರತದ ಆರ್ಥಿಕ ಬೆಳವಣಿಗೆಯ ದರವು ಮೂರನೇ ತ್ರೈಮಾಸಿಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಭಾರತವು ಅಪಾಯಕಾರಿ ಹಂತದ ಹತ್ತಿರದಲ್ಲಿದೆ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ)ಯು ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ತ್ರೈಮಾಸಿಕ ಬೆಳವಣಿಗೆಯಲ್ಲಿ ಅನುಕ್ರಮವಾದ ನಿಧಾನಗತಿಯನ್ನು ನೋಡಿದರೆ ಬಹಳ ಕಳವಳಕಾರಿಯಾಗಿದೆ ಎಂದು ರಾಜನ್ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ಯು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 4.4%ಕ್ಕೆ ಕಡಿಮೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) 6.3% ಮತ್ತು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 13.2% ಇತ್ತು. ಈ ರೀತಿ ಅನುಕ್ರಮವಾದ ನಿಧಾನಗತಿಯ ಬೆಳವಣಿಗೆಯು ಆತಂಕ ಸೃಷ್ಟಿಸುತ್ತದೆ ಎಂದಿದ್ದಾರೆ.

”ಆಶಾವಾದಿಗಳು GDP [ಒಟ್ಟು ದೇಶೀಯ ಉತ್ಪನ್ನ] ಹೆಚ್ಚಳದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅನುಕ್ರಮವಾದ ನಿಧಾನಗತಿಯ ಬಗ್ಗೆ ನಾನು ಚಿಂತಿತನಾಗಿದ್ದೇನೆ” ಎಂದು ರಾಜನ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

”ಖಾಸಗಿ ವಲಯವು ಹೂಡಿಕೆ ಮಾಡಲು ಇಷ್ಟವಿಲ್ಲದ ಕಾರಣ RBI ಇನ್ನೂ ದರಗಳನ್ನು ಹೆಚ್ಚಿಸುತ್ತಿದೆ ಮತ್ತು ಜಾಗತಿಕ ಬೆಳವಣಿಗೆಯು ವರ್ಷದ ನಂತರ ನಿಧಾನಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿ ಬೆಳವಣಿಗೆಯ ಆವೇಗವನ್ನು ನಾವು ಎಲ್ಲಿ ಕಂಡುಕೊಳ್ಳುತ್ತೇವೆ ಎಂದು ನನಗೆ ಖಚಿತವಿಲ್ಲ” ಎಂದು ಹೇಳಿದ್ದಾರೆ.

“ಈ ಹಂತದಲ್ಲಿ, ಮೂರು ವರ್ಷಗಳ ಹಿಂದೆ ಅಂದರೆ ಕೊರೊನಾ ಸಾಂಕ್ರಾಮಿಕ ಬರುವ ಮುಂಚೆ ಹೋಲಿಸಿದರೆ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಸರಾಸರಿ ವಾರ್ಷಿಕ ಬೆಳವಣಿಗೆಯು 3.7% ಆಗಿದೆ. ಇದು ದೇಶಕ್ಕೆ ಅಪಾಯಕಾರಿಯಾದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. MY OPINION …As Governer OF RBI this route WAS THERE via MAURITIOUS . AT HIS WATCH HE NEVER FOUND ANYTHING WRONG. WHY NOW? WHY WAS THIS ROUTE CREATED What was the need

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...