Homeಮುಖಪುಟಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

- Advertisement -
- Advertisement -

ಅದಾನಿ ಗ್ರೂಪ್ ಸ್ಟಾಕ್‌ನಲ್ಲಿನ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್‌ನಷ್ಟು ಹೂಡಿಕೆ ಮಾಡಿರುವ ಮಾರಿಷಸ್ ಫಂಡ್ ಮಾಲೀಕರ ಬಗ್ಗೆ ಸೆಬಿ (SEBI) ಯಾಕೆ ಇನ್ನೂ ಪ್ರಶ್ನೆ ಮಾಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕೇಳಿದ್ದಾರೆ.

ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್‌ವೆಸ್ಟ್‌ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್‌ವೆಸ್ಟ್‌ಮೆಂಟ್ ಫಂಡ್‌ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಕಣ್ಮರೆಯಾಗಿದ್ದವು. ಶೆಲ್‌ ಸಂಸ್ಥೆ ಎಂದರೆ ತೆರಿಗೆ ವಂಚಿಸುವುದಕ್ಕಾಗಿ ತೆರಿಗೆ ಮುಕ್ತ ರಾಷ್ಟ್ರಗಳಲ್ಲಿ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಅದಾನಿ ಸಮೂಹವು ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿಕೊಳ್ಳಲು ಈ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಿದ್ದಾರೆ ಎಂದು ಹಿಂಡನ್‌ಬರ್ಗ್ ವರದಿ ಆರೋಪಿಸಿದೆ.

ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಬಂಧದ ಕುರಿತು ಪಾರದರ್ಶಕತೆ ಇಲ್ಲದಿದ್ದಾಗ ಸೆಬಿಯಂತಹ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುವುದನ್ನು ಉತ್ತೇಜಿಸಬೇಕು. ಮಾರಿಷಸ್‌ನಿಂದ ಅದಾನಿ ಕಂಪನಿ ಷೇರುಗಳನ್ನು ಮಾರುತ್ತಿರುವ ಮತ್ತು ಹೋಲ್ಡಿಂಗ್ ಮಾಡುತ್ತಿರುವ ಕಂಪನಿಗಳ ಮಾಲೀಕರು ಯಾರು ಎಂಬುದನ್ನು ಏಕೆ ಸೆಬಿ ಪತ್ತೆ ಹಚ್ಚುತ್ತಿಲ್ಲ. ಏಕೆಂದರೆ ಅವುಗಳ ಮಾಲೀಕತ್ವ ನಿಗೂಢವಾಗಿದ್ದು, ಅದಾನಿ ಕುಟುಂಬದವರೆ ಆ ಕಂಪನಿಗಳನ್ನು ನಡೆಸುತ್ತಿವೆ ಎಂದು ಹಿಂಡೆನ್‌ ಬರ್ಗ್ ವರದಿ ಆರೋಪಿಸಿದೆ ಎಂದು ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆಯ ದರ ಕುಸಿತ

ಭಾರತದ ಆರ್ಥಿಕ ಬೆಳವಣಿಗೆಯ ದರವು ಮೂರನೇ ತ್ರೈಮಾಸಿಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಭಾರತವು ಅಪಾಯಕಾರಿ ಹಂತದ ಹತ್ತಿರದಲ್ಲಿದೆ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ)ಯು ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ತ್ರೈಮಾಸಿಕ ಬೆಳವಣಿಗೆಯಲ್ಲಿ ಅನುಕ್ರಮವಾದ ನಿಧಾನಗತಿಯನ್ನು ನೋಡಿದರೆ ಬಹಳ ಕಳವಳಕಾರಿಯಾಗಿದೆ ಎಂದು ರಾಜನ್ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ಯು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 4.4%ಕ್ಕೆ ಕಡಿಮೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) 6.3% ಮತ್ತು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 13.2% ಇತ್ತು. ಈ ರೀತಿ ಅನುಕ್ರಮವಾದ ನಿಧಾನಗತಿಯ ಬೆಳವಣಿಗೆಯು ಆತಂಕ ಸೃಷ್ಟಿಸುತ್ತದೆ ಎಂದಿದ್ದಾರೆ.

”ಆಶಾವಾದಿಗಳು GDP [ಒಟ್ಟು ದೇಶೀಯ ಉತ್ಪನ್ನ] ಹೆಚ್ಚಳದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅನುಕ್ರಮವಾದ ನಿಧಾನಗತಿಯ ಬಗ್ಗೆ ನಾನು ಚಿಂತಿತನಾಗಿದ್ದೇನೆ” ಎಂದು ರಾಜನ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

”ಖಾಸಗಿ ವಲಯವು ಹೂಡಿಕೆ ಮಾಡಲು ಇಷ್ಟವಿಲ್ಲದ ಕಾರಣ RBI ಇನ್ನೂ ದರಗಳನ್ನು ಹೆಚ್ಚಿಸುತ್ತಿದೆ ಮತ್ತು ಜಾಗತಿಕ ಬೆಳವಣಿಗೆಯು ವರ್ಷದ ನಂತರ ನಿಧಾನಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿ ಬೆಳವಣಿಗೆಯ ಆವೇಗವನ್ನು ನಾವು ಎಲ್ಲಿ ಕಂಡುಕೊಳ್ಳುತ್ತೇವೆ ಎಂದು ನನಗೆ ಖಚಿತವಿಲ್ಲ” ಎಂದು ಹೇಳಿದ್ದಾರೆ.

“ಈ ಹಂತದಲ್ಲಿ, ಮೂರು ವರ್ಷಗಳ ಹಿಂದೆ ಅಂದರೆ ಕೊರೊನಾ ಸಾಂಕ್ರಾಮಿಕ ಬರುವ ಮುಂಚೆ ಹೋಲಿಸಿದರೆ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಸರಾಸರಿ ವಾರ್ಷಿಕ ಬೆಳವಣಿಗೆಯು 3.7% ಆಗಿದೆ. ಇದು ದೇಶಕ್ಕೆ ಅಪಾಯಕಾರಿಯಾದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. MY OPINION …As Governer OF RBI this route WAS THERE via MAURITIOUS . AT HIS WATCH HE NEVER FOUND ANYTHING WRONG. WHY NOW? WHY WAS THIS ROUTE CREATED What was the need

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...