Homeಮುಖಪುಟಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

- Advertisement -
- Advertisement -

ಅದಾನಿ ಗ್ರೂಪ್ ಸ್ಟಾಕ್‌ನಲ್ಲಿನ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್‌ನಷ್ಟು ಹೂಡಿಕೆ ಮಾಡಿರುವ ಮಾರಿಷಸ್ ಫಂಡ್ ಮಾಲೀಕರ ಬಗ್ಗೆ ಸೆಬಿ (SEBI) ಯಾಕೆ ಇನ್ನೂ ಪ್ರಶ್ನೆ ಮಾಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕೇಳಿದ್ದಾರೆ.

ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್‌ವೆಸ್ಟ್‌ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್‌ವೆಸ್ಟ್‌ಮೆಂಟ್ ಫಂಡ್‌ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಕಣ್ಮರೆಯಾಗಿದ್ದವು. ಶೆಲ್‌ ಸಂಸ್ಥೆ ಎಂದರೆ ತೆರಿಗೆ ವಂಚಿಸುವುದಕ್ಕಾಗಿ ತೆರಿಗೆ ಮುಕ್ತ ರಾಷ್ಟ್ರಗಳಲ್ಲಿ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಅದಾನಿ ಸಮೂಹವು ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿಕೊಳ್ಳಲು ಈ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಿದ್ದಾರೆ ಎಂದು ಹಿಂಡನ್‌ಬರ್ಗ್ ವರದಿ ಆರೋಪಿಸಿದೆ.

ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಬಂಧದ ಕುರಿತು ಪಾರದರ್ಶಕತೆ ಇಲ್ಲದಿದ್ದಾಗ ಸೆಬಿಯಂತಹ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುವುದನ್ನು ಉತ್ತೇಜಿಸಬೇಕು. ಮಾರಿಷಸ್‌ನಿಂದ ಅದಾನಿ ಕಂಪನಿ ಷೇರುಗಳನ್ನು ಮಾರುತ್ತಿರುವ ಮತ್ತು ಹೋಲ್ಡಿಂಗ್ ಮಾಡುತ್ತಿರುವ ಕಂಪನಿಗಳ ಮಾಲೀಕರು ಯಾರು ಎಂಬುದನ್ನು ಏಕೆ ಸೆಬಿ ಪತ್ತೆ ಹಚ್ಚುತ್ತಿಲ್ಲ. ಏಕೆಂದರೆ ಅವುಗಳ ಮಾಲೀಕತ್ವ ನಿಗೂಢವಾಗಿದ್ದು, ಅದಾನಿ ಕುಟುಂಬದವರೆ ಆ ಕಂಪನಿಗಳನ್ನು ನಡೆಸುತ್ತಿವೆ ಎಂದು ಹಿಂಡೆನ್‌ ಬರ್ಗ್ ವರದಿ ಆರೋಪಿಸಿದೆ ಎಂದು ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆಯ ದರ ಕುಸಿತ

ಭಾರತದ ಆರ್ಥಿಕ ಬೆಳವಣಿಗೆಯ ದರವು ಮೂರನೇ ತ್ರೈಮಾಸಿಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಭಾರತವು ಅಪಾಯಕಾರಿ ಹಂತದ ಹತ್ತಿರದಲ್ಲಿದೆ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ)ಯು ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ತ್ರೈಮಾಸಿಕ ಬೆಳವಣಿಗೆಯಲ್ಲಿ ಅನುಕ್ರಮವಾದ ನಿಧಾನಗತಿಯನ್ನು ನೋಡಿದರೆ ಬಹಳ ಕಳವಳಕಾರಿಯಾಗಿದೆ ಎಂದು ರಾಜನ್ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ಯು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 4.4%ಕ್ಕೆ ಕಡಿಮೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) 6.3% ಮತ್ತು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 13.2% ಇತ್ತು. ಈ ರೀತಿ ಅನುಕ್ರಮವಾದ ನಿಧಾನಗತಿಯ ಬೆಳವಣಿಗೆಯು ಆತಂಕ ಸೃಷ್ಟಿಸುತ್ತದೆ ಎಂದಿದ್ದಾರೆ.

”ಆಶಾವಾದಿಗಳು GDP [ಒಟ್ಟು ದೇಶೀಯ ಉತ್ಪನ್ನ] ಹೆಚ್ಚಳದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅನುಕ್ರಮವಾದ ನಿಧಾನಗತಿಯ ಬಗ್ಗೆ ನಾನು ಚಿಂತಿತನಾಗಿದ್ದೇನೆ” ಎಂದು ರಾಜನ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

”ಖಾಸಗಿ ವಲಯವು ಹೂಡಿಕೆ ಮಾಡಲು ಇಷ್ಟವಿಲ್ಲದ ಕಾರಣ RBI ಇನ್ನೂ ದರಗಳನ್ನು ಹೆಚ್ಚಿಸುತ್ತಿದೆ ಮತ್ತು ಜಾಗತಿಕ ಬೆಳವಣಿಗೆಯು ವರ್ಷದ ನಂತರ ನಿಧಾನಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿ ಬೆಳವಣಿಗೆಯ ಆವೇಗವನ್ನು ನಾವು ಎಲ್ಲಿ ಕಂಡುಕೊಳ್ಳುತ್ತೇವೆ ಎಂದು ನನಗೆ ಖಚಿತವಿಲ್ಲ” ಎಂದು ಹೇಳಿದ್ದಾರೆ.

“ಈ ಹಂತದಲ್ಲಿ, ಮೂರು ವರ್ಷಗಳ ಹಿಂದೆ ಅಂದರೆ ಕೊರೊನಾ ಸಾಂಕ್ರಾಮಿಕ ಬರುವ ಮುಂಚೆ ಹೋಲಿಸಿದರೆ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಸರಾಸರಿ ವಾರ್ಷಿಕ ಬೆಳವಣಿಗೆಯು 3.7% ಆಗಿದೆ. ಇದು ದೇಶಕ್ಕೆ ಅಪಾಯಕಾರಿಯಾದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. MY OPINION …As Governer OF RBI this route WAS THERE via MAURITIOUS . AT HIS WATCH HE NEVER FOUND ANYTHING WRONG. WHY NOW? WHY WAS THIS ROUTE CREATED What was the need

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...