Homeಮುಖಪುಟಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

- Advertisement -
- Advertisement -

ಅದಾನಿ ಗ್ರೂಪ್ ಸ್ಟಾಕ್‌ನಲ್ಲಿನ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್‌ನಷ್ಟು ಹೂಡಿಕೆ ಮಾಡಿರುವ ಮಾರಿಷಸ್ ಫಂಡ್ ಮಾಲೀಕರ ಬಗ್ಗೆ ಸೆಬಿ (SEBI) ಯಾಕೆ ಇನ್ನೂ ಪ್ರಶ್ನೆ ಮಾಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕೇಳಿದ್ದಾರೆ.

ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್‌ವೆಸ್ಟ್‌ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್‌ವೆಸ್ಟ್‌ಮೆಂಟ್ ಫಂಡ್‌ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಕಣ್ಮರೆಯಾಗಿದ್ದವು. ಶೆಲ್‌ ಸಂಸ್ಥೆ ಎಂದರೆ ತೆರಿಗೆ ವಂಚಿಸುವುದಕ್ಕಾಗಿ ತೆರಿಗೆ ಮುಕ್ತ ರಾಷ್ಟ್ರಗಳಲ್ಲಿ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಅದಾನಿ ಸಮೂಹವು ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿಕೊಳ್ಳಲು ಈ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಿದ್ದಾರೆ ಎಂದು ಹಿಂಡನ್‌ಬರ್ಗ್ ವರದಿ ಆರೋಪಿಸಿದೆ.

ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಬಂಧದ ಕುರಿತು ಪಾರದರ್ಶಕತೆ ಇಲ್ಲದಿದ್ದಾಗ ಸೆಬಿಯಂತಹ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುವುದನ್ನು ಉತ್ತೇಜಿಸಬೇಕು. ಮಾರಿಷಸ್‌ನಿಂದ ಅದಾನಿ ಕಂಪನಿ ಷೇರುಗಳನ್ನು ಮಾರುತ್ತಿರುವ ಮತ್ತು ಹೋಲ್ಡಿಂಗ್ ಮಾಡುತ್ತಿರುವ ಕಂಪನಿಗಳ ಮಾಲೀಕರು ಯಾರು ಎಂಬುದನ್ನು ಏಕೆ ಸೆಬಿ ಪತ್ತೆ ಹಚ್ಚುತ್ತಿಲ್ಲ. ಏಕೆಂದರೆ ಅವುಗಳ ಮಾಲೀಕತ್ವ ನಿಗೂಢವಾಗಿದ್ದು, ಅದಾನಿ ಕುಟುಂಬದವರೆ ಆ ಕಂಪನಿಗಳನ್ನು ನಡೆಸುತ್ತಿವೆ ಎಂದು ಹಿಂಡೆನ್‌ ಬರ್ಗ್ ವರದಿ ಆರೋಪಿಸಿದೆ ಎಂದು ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆಯ ದರ ಕುಸಿತ

ಭಾರತದ ಆರ್ಥಿಕ ಬೆಳವಣಿಗೆಯ ದರವು ಮೂರನೇ ತ್ರೈಮಾಸಿಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಭಾರತವು ಅಪಾಯಕಾರಿ ಹಂತದ ಹತ್ತಿರದಲ್ಲಿದೆ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ)ಯು ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ತ್ರೈಮಾಸಿಕ ಬೆಳವಣಿಗೆಯಲ್ಲಿ ಅನುಕ್ರಮವಾದ ನಿಧಾನಗತಿಯನ್ನು ನೋಡಿದರೆ ಬಹಳ ಕಳವಳಕಾರಿಯಾಗಿದೆ ಎಂದು ರಾಜನ್ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ಯು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 4.4%ಕ್ಕೆ ಕಡಿಮೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) 6.3% ಮತ್ತು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 13.2% ಇತ್ತು. ಈ ರೀತಿ ಅನುಕ್ರಮವಾದ ನಿಧಾನಗತಿಯ ಬೆಳವಣಿಗೆಯು ಆತಂಕ ಸೃಷ್ಟಿಸುತ್ತದೆ ಎಂದಿದ್ದಾರೆ.

”ಆಶಾವಾದಿಗಳು GDP [ಒಟ್ಟು ದೇಶೀಯ ಉತ್ಪನ್ನ] ಹೆಚ್ಚಳದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅನುಕ್ರಮವಾದ ನಿಧಾನಗತಿಯ ಬಗ್ಗೆ ನಾನು ಚಿಂತಿತನಾಗಿದ್ದೇನೆ” ಎಂದು ರಾಜನ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

”ಖಾಸಗಿ ವಲಯವು ಹೂಡಿಕೆ ಮಾಡಲು ಇಷ್ಟವಿಲ್ಲದ ಕಾರಣ RBI ಇನ್ನೂ ದರಗಳನ್ನು ಹೆಚ್ಚಿಸುತ್ತಿದೆ ಮತ್ತು ಜಾಗತಿಕ ಬೆಳವಣಿಗೆಯು ವರ್ಷದ ನಂತರ ನಿಧಾನಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿ ಬೆಳವಣಿಗೆಯ ಆವೇಗವನ್ನು ನಾವು ಎಲ್ಲಿ ಕಂಡುಕೊಳ್ಳುತ್ತೇವೆ ಎಂದು ನನಗೆ ಖಚಿತವಿಲ್ಲ” ಎಂದು ಹೇಳಿದ್ದಾರೆ.

“ಈ ಹಂತದಲ್ಲಿ, ಮೂರು ವರ್ಷಗಳ ಹಿಂದೆ ಅಂದರೆ ಕೊರೊನಾ ಸಾಂಕ್ರಾಮಿಕ ಬರುವ ಮುಂಚೆ ಹೋಲಿಸಿದರೆ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಸರಾಸರಿ ವಾರ್ಷಿಕ ಬೆಳವಣಿಗೆಯು 3.7% ಆಗಿದೆ. ಇದು ದೇಶಕ್ಕೆ ಅಪಾಯಕಾರಿಯಾದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. MY OPINION …As Governer OF RBI this route WAS THERE via MAURITIOUS . AT HIS WATCH HE NEVER FOUND ANYTHING WRONG. WHY NOW? WHY WAS THIS ROUTE CREATED What was the need

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...