Homeಮುಖಪುಟಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

ಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಸ್ವಾಮ್ಯದ ಘಟಕವಾದ ಆಂಧ್ರಪ್ರದೇಶ ಸ್ಟೇಟ್ ಫೈಬರ್‌ನೆಟ್ ಲಿಮಿಟೆಡ್ (APSFL), ಈಗ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು, 2024ರ ವಿಧಾನಸಭೆಯಲ್ಲಿ ಜನರನ್ನು ಜಗನ್‌ ಮೋಹನ್‌ ರೆಡ್ಡಿಯವರತ್ತ ಸೆಳೆಯಲು ‘ಎಪಿ ಫೈಬರ್ ನ್ಯೂಸ್’ ಎಂಬ ಟಿವಿ ಚಾನೆಲ್ ಆರಂಭಿಸಲು ಮುಂದಾಗಿದೆ.

ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಚಾನೆಲ್‌ ಕಾರ್ಯನಿರ್ವಹಿಸಲಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಜಗನ್‌ ಅವರ ಕಾರ್ಯಕ್ರಮಗಳನ್ನು ‌ಈ ಚಾನೆಲ್‌ ಪ್ರಸಾರ ಮಾಡಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಚಾನಲ್ ತನ್ನ ಫೈಬರ್-ಟು-ಹೋಮ್ (FTH) ನೆಟ್ವರ್ಕ್ ಮೂಲಕ  ಪ್ರಸಾರ ಮಾಡುತ್ತದೆ” ಎಂದು ಎಪಿಎಸ್‌ಎಫ್‌ಎಲ್‌ ಅಧ್ಯಕ್ಷ ಪಿ. ಗೌತಮ್ ರೆಡ್ಡಿ ಹೇಳಿದ್ದಾರೆ. “ಹೊರಗುತ್ತಿಗೆ ವಿಷಯದ ಅಗತ್ಯತೆಗಳ ನಿರೀಕ್ಷೆಗಳು ಸೇರಿದಂತೆ ನಾವು ಚಾನೆಲ್‌ನ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಆಂಧ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಎಪಿಎಸ್‌ಎಫ್‌ಎಲ್‌ ತನ್ನ ಟ್ರಿಪಲ್-ಪ್ಲೇ ಸೇವೆಗಳ ಅಸ್ತಿತ್ವದಲ್ಲಿರುವ 1 ಮಿಲಿಯನ್ ಚಂದಾದಾರರಿಗೆ ಸೇರಿಸಲು 5 ಮಿಲಿಯನ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಖರೀದಿಸುತ್ತಿದೆ. ರಾಜ್ಯದ ಅರ್ಧದಷ್ಟು ಮನೆಗಳಿಗೆ ‘ಎಪಿ ಫೈಬರ್ ನ್ಯೂಸ್’ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.

ಇತ್ತೀಚಿನ ಜನಾಭಿಪ್ರಾಯ ಸಂಗ್ರಹಣೆಗಳು ವೈಎಸ್‌ಆರ್ ಕಾಂಗ್ರೆಸ್‌ಗೆ ಮೇಲುಗೈ ತೋರಿಸಿದ್ದರೂ ಜಗನ್ ಕಣಕ್ಕಿಳಿದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ. ಜುಲೈ 9 ಮತ್ತು 10 ರಂದು ನಡೆದ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಜಗನ್‌, “ಮಿಷನ್ 175 ಅಸಾಧ್ಯವಲ್ಲ” ಎಂದು ಘೋಷಿಸಿದ್ದಾರೆ.

ಚುನಾವಣಾ ಸಮರಕ್ಕೆ ಸಿದ್ಧರಾಗಿರಲು ಕಾರ್ಯಕರ್ತರನ್ನು ಕೋರಿದ್ದಾರೆ. ಏಪ್ರಿಲ್ 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಬೇಕೆಂದು ಜಗನ್ ಬಯಸಿದ್ದಾರೆ.

ಇದನ್ನೂ ಓದಿರಿ: Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

ಈಗಾಗಲೇ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ಗುರಿಯಾಗಿಸಿಕೊಂಡು ಜಗನ್ ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ. ನಾಯ್ಡು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಪ್ರತಿ ಹಳ್ಳಿಯಲ್ಲೂ ಪ್ರಚಾರ ಮಾಡಲು ಸೂಚಿಸಿದ್ದಾರೆ. ಪ್ರತಿಪಕ್ಷದ ಕಡೆಗೆ ಜನರ ಗಮನ ಹರಿದಂತೆ ನೋಡಿಕೊಳ್ಳಲು ಟಿ.ವಿ.ಚಾನೆಲ್‌ ಆರಂಭಿಸಿದ್ದಾರೆಂದು ವಿಶ್ಲೇಷಣೆಗಳು ಬರುತ್ತಿವೆ.

ಮುಖ್ಯಮಂತ್ರಿಯವರು ಪ್ರಸ್ತುತ ಸಾಕ್ಷಿ ಟೆಲಿವಿಷನ್‌ ಸುದ್ದಿ ವಾಹಿನಿ, ಸಾಕ್ಷಿ ತೆಲುಗು ಪತ್ರಿಕೆಯನ್ನು ತಮ್ಮ ಒಡೆತನದಲ್ಲಿ ಹೊಂದಿದ್ದಾರೆ. ಆಡಳಿತರೂಢ ಸರ್ಕಾರವನ್ನು ಮೂರು ಪ್ರಮುಖ ತೆಲುಗು ಸುದ್ದಿ ವಾಹಿನಿಗಳು ಹೆಚ್ಚು ಟೀಕಿಸುತ್ತಿವೆ. ಈ ಚಾನೆಲ್‌ಗಳು ಪ್ರಮುಖ ವಿರೋಧ ಪಕ್ಷವಾದ ಟಿಡಿಪಿಯತ್ತ ಒಲವು ತೋರುತ್ತಿವೆ ಎಂಬ ವಿಶ್ಲೇಷಣೆಗಳು ಬಂದಿವೆ. ಆದಾಗ್ಯೂ, ಎರಡು ಇತರ ಪ್ರಮುಖ ತೆಲುಗು ಟಿವಿ ಸುದ್ದಿ ವಾಹಿನಿಗಳು ಜಗನ್ ಮೋಹನ್ ರೆಡ್ಡಿ ಕಡೆಗೆ ಒಲವು ತೋರಿಸುತ್ತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ತನ್ನದೇ ಆದ ವರದಿಗಳನ್ನು ಹೇಳಲು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡಲು ಸರ್ಕಾರ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...