Homeಮುಖಪುಟಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

ಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಸ್ವಾಮ್ಯದ ಘಟಕವಾದ ಆಂಧ್ರಪ್ರದೇಶ ಸ್ಟೇಟ್ ಫೈಬರ್‌ನೆಟ್ ಲಿಮಿಟೆಡ್ (APSFL), ಈಗ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು, 2024ರ ವಿಧಾನಸಭೆಯಲ್ಲಿ ಜನರನ್ನು ಜಗನ್‌ ಮೋಹನ್‌ ರೆಡ್ಡಿಯವರತ್ತ ಸೆಳೆಯಲು ‘ಎಪಿ ಫೈಬರ್ ನ್ಯೂಸ್’ ಎಂಬ ಟಿವಿ ಚಾನೆಲ್ ಆರಂಭಿಸಲು ಮುಂದಾಗಿದೆ.

ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಚಾನೆಲ್‌ ಕಾರ್ಯನಿರ್ವಹಿಸಲಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಜಗನ್‌ ಅವರ ಕಾರ್ಯಕ್ರಮಗಳನ್ನು ‌ಈ ಚಾನೆಲ್‌ ಪ್ರಸಾರ ಮಾಡಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಚಾನಲ್ ತನ್ನ ಫೈಬರ್-ಟು-ಹೋಮ್ (FTH) ನೆಟ್ವರ್ಕ್ ಮೂಲಕ  ಪ್ರಸಾರ ಮಾಡುತ್ತದೆ” ಎಂದು ಎಪಿಎಸ್‌ಎಫ್‌ಎಲ್‌ ಅಧ್ಯಕ್ಷ ಪಿ. ಗೌತಮ್ ರೆಡ್ಡಿ ಹೇಳಿದ್ದಾರೆ. “ಹೊರಗುತ್ತಿಗೆ ವಿಷಯದ ಅಗತ್ಯತೆಗಳ ನಿರೀಕ್ಷೆಗಳು ಸೇರಿದಂತೆ ನಾವು ಚಾನೆಲ್‌ನ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಆಂಧ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಎಪಿಎಸ್‌ಎಫ್‌ಎಲ್‌ ತನ್ನ ಟ್ರಿಪಲ್-ಪ್ಲೇ ಸೇವೆಗಳ ಅಸ್ತಿತ್ವದಲ್ಲಿರುವ 1 ಮಿಲಿಯನ್ ಚಂದಾದಾರರಿಗೆ ಸೇರಿಸಲು 5 ಮಿಲಿಯನ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಖರೀದಿಸುತ್ತಿದೆ. ರಾಜ್ಯದ ಅರ್ಧದಷ್ಟು ಮನೆಗಳಿಗೆ ‘ಎಪಿ ಫೈಬರ್ ನ್ಯೂಸ್’ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.

ಇತ್ತೀಚಿನ ಜನಾಭಿಪ್ರಾಯ ಸಂಗ್ರಹಣೆಗಳು ವೈಎಸ್‌ಆರ್ ಕಾಂಗ್ರೆಸ್‌ಗೆ ಮೇಲುಗೈ ತೋರಿಸಿದ್ದರೂ ಜಗನ್ ಕಣಕ್ಕಿಳಿದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ. ಜುಲೈ 9 ಮತ್ತು 10 ರಂದು ನಡೆದ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಜಗನ್‌, “ಮಿಷನ್ 175 ಅಸಾಧ್ಯವಲ್ಲ” ಎಂದು ಘೋಷಿಸಿದ್ದಾರೆ.

ಚುನಾವಣಾ ಸಮರಕ್ಕೆ ಸಿದ್ಧರಾಗಿರಲು ಕಾರ್ಯಕರ್ತರನ್ನು ಕೋರಿದ್ದಾರೆ. ಏಪ್ರಿಲ್ 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಬೇಕೆಂದು ಜಗನ್ ಬಯಸಿದ್ದಾರೆ.

ಇದನ್ನೂ ಓದಿರಿ: Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

ಈಗಾಗಲೇ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ಗುರಿಯಾಗಿಸಿಕೊಂಡು ಜಗನ್ ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ. ನಾಯ್ಡು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಪ್ರತಿ ಹಳ್ಳಿಯಲ್ಲೂ ಪ್ರಚಾರ ಮಾಡಲು ಸೂಚಿಸಿದ್ದಾರೆ. ಪ್ರತಿಪಕ್ಷದ ಕಡೆಗೆ ಜನರ ಗಮನ ಹರಿದಂತೆ ನೋಡಿಕೊಳ್ಳಲು ಟಿ.ವಿ.ಚಾನೆಲ್‌ ಆರಂಭಿಸಿದ್ದಾರೆಂದು ವಿಶ್ಲೇಷಣೆಗಳು ಬರುತ್ತಿವೆ.

ಮುಖ್ಯಮಂತ್ರಿಯವರು ಪ್ರಸ್ತುತ ಸಾಕ್ಷಿ ಟೆಲಿವಿಷನ್‌ ಸುದ್ದಿ ವಾಹಿನಿ, ಸಾಕ್ಷಿ ತೆಲುಗು ಪತ್ರಿಕೆಯನ್ನು ತಮ್ಮ ಒಡೆತನದಲ್ಲಿ ಹೊಂದಿದ್ದಾರೆ. ಆಡಳಿತರೂಢ ಸರ್ಕಾರವನ್ನು ಮೂರು ಪ್ರಮುಖ ತೆಲುಗು ಸುದ್ದಿ ವಾಹಿನಿಗಳು ಹೆಚ್ಚು ಟೀಕಿಸುತ್ತಿವೆ. ಈ ಚಾನೆಲ್‌ಗಳು ಪ್ರಮುಖ ವಿರೋಧ ಪಕ್ಷವಾದ ಟಿಡಿಪಿಯತ್ತ ಒಲವು ತೋರುತ್ತಿವೆ ಎಂಬ ವಿಶ್ಲೇಷಣೆಗಳು ಬಂದಿವೆ. ಆದಾಗ್ಯೂ, ಎರಡು ಇತರ ಪ್ರಮುಖ ತೆಲುಗು ಟಿವಿ ಸುದ್ದಿ ವಾಹಿನಿಗಳು ಜಗನ್ ಮೋಹನ್ ರೆಡ್ಡಿ ಕಡೆಗೆ ಒಲವು ತೋರಿಸುತ್ತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ತನ್ನದೇ ಆದ ವರದಿಗಳನ್ನು ಹೇಳಲು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡಲು ಸರ್ಕಾರ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...