Homeಮುಖಪುಟಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

ಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಸ್ವಾಮ್ಯದ ಘಟಕವಾದ ಆಂಧ್ರಪ್ರದೇಶ ಸ್ಟೇಟ್ ಫೈಬರ್‌ನೆಟ್ ಲಿಮಿಟೆಡ್ (APSFL), ಈಗ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು, 2024ರ ವಿಧಾನಸಭೆಯಲ್ಲಿ ಜನರನ್ನು ಜಗನ್‌ ಮೋಹನ್‌ ರೆಡ್ಡಿಯವರತ್ತ ಸೆಳೆಯಲು ‘ಎಪಿ ಫೈಬರ್ ನ್ಯೂಸ್’ ಎಂಬ ಟಿವಿ ಚಾನೆಲ್ ಆರಂಭಿಸಲು ಮುಂದಾಗಿದೆ.

ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಚಾನೆಲ್‌ ಕಾರ್ಯನಿರ್ವಹಿಸಲಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಜಗನ್‌ ಅವರ ಕಾರ್ಯಕ್ರಮಗಳನ್ನು ‌ಈ ಚಾನೆಲ್‌ ಪ್ರಸಾರ ಮಾಡಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಚಾನಲ್ ತನ್ನ ಫೈಬರ್-ಟು-ಹೋಮ್ (FTH) ನೆಟ್ವರ್ಕ್ ಮೂಲಕ  ಪ್ರಸಾರ ಮಾಡುತ್ತದೆ” ಎಂದು ಎಪಿಎಸ್‌ಎಫ್‌ಎಲ್‌ ಅಧ್ಯಕ್ಷ ಪಿ. ಗೌತಮ್ ರೆಡ್ಡಿ ಹೇಳಿದ್ದಾರೆ. “ಹೊರಗುತ್ತಿಗೆ ವಿಷಯದ ಅಗತ್ಯತೆಗಳ ನಿರೀಕ್ಷೆಗಳು ಸೇರಿದಂತೆ ನಾವು ಚಾನೆಲ್‌ನ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಆಂಧ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಎಪಿಎಸ್‌ಎಫ್‌ಎಲ್‌ ತನ್ನ ಟ್ರಿಪಲ್-ಪ್ಲೇ ಸೇವೆಗಳ ಅಸ್ತಿತ್ವದಲ್ಲಿರುವ 1 ಮಿಲಿಯನ್ ಚಂದಾದಾರರಿಗೆ ಸೇರಿಸಲು 5 ಮಿಲಿಯನ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಖರೀದಿಸುತ್ತಿದೆ. ರಾಜ್ಯದ ಅರ್ಧದಷ್ಟು ಮನೆಗಳಿಗೆ ‘ಎಪಿ ಫೈಬರ್ ನ್ಯೂಸ್’ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.

ಇತ್ತೀಚಿನ ಜನಾಭಿಪ್ರಾಯ ಸಂಗ್ರಹಣೆಗಳು ವೈಎಸ್‌ಆರ್ ಕಾಂಗ್ರೆಸ್‌ಗೆ ಮೇಲುಗೈ ತೋರಿಸಿದ್ದರೂ ಜಗನ್ ಕಣಕ್ಕಿಳಿದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ. ಜುಲೈ 9 ಮತ್ತು 10 ರಂದು ನಡೆದ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಜಗನ್‌, “ಮಿಷನ್ 175 ಅಸಾಧ್ಯವಲ್ಲ” ಎಂದು ಘೋಷಿಸಿದ್ದಾರೆ.

ಚುನಾವಣಾ ಸಮರಕ್ಕೆ ಸಿದ್ಧರಾಗಿರಲು ಕಾರ್ಯಕರ್ತರನ್ನು ಕೋರಿದ್ದಾರೆ. ಏಪ್ರಿಲ್ 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಬೇಕೆಂದು ಜಗನ್ ಬಯಸಿದ್ದಾರೆ.

ಇದನ್ನೂ ಓದಿರಿ: Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

ಈಗಾಗಲೇ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ಗುರಿಯಾಗಿಸಿಕೊಂಡು ಜಗನ್ ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ. ನಾಯ್ಡು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಪ್ರತಿ ಹಳ್ಳಿಯಲ್ಲೂ ಪ್ರಚಾರ ಮಾಡಲು ಸೂಚಿಸಿದ್ದಾರೆ. ಪ್ರತಿಪಕ್ಷದ ಕಡೆಗೆ ಜನರ ಗಮನ ಹರಿದಂತೆ ನೋಡಿಕೊಳ್ಳಲು ಟಿ.ವಿ.ಚಾನೆಲ್‌ ಆರಂಭಿಸಿದ್ದಾರೆಂದು ವಿಶ್ಲೇಷಣೆಗಳು ಬರುತ್ತಿವೆ.

ಮುಖ್ಯಮಂತ್ರಿಯವರು ಪ್ರಸ್ತುತ ಸಾಕ್ಷಿ ಟೆಲಿವಿಷನ್‌ ಸುದ್ದಿ ವಾಹಿನಿ, ಸಾಕ್ಷಿ ತೆಲುಗು ಪತ್ರಿಕೆಯನ್ನು ತಮ್ಮ ಒಡೆತನದಲ್ಲಿ ಹೊಂದಿದ್ದಾರೆ. ಆಡಳಿತರೂಢ ಸರ್ಕಾರವನ್ನು ಮೂರು ಪ್ರಮುಖ ತೆಲುಗು ಸುದ್ದಿ ವಾಹಿನಿಗಳು ಹೆಚ್ಚು ಟೀಕಿಸುತ್ತಿವೆ. ಈ ಚಾನೆಲ್‌ಗಳು ಪ್ರಮುಖ ವಿರೋಧ ಪಕ್ಷವಾದ ಟಿಡಿಪಿಯತ್ತ ಒಲವು ತೋರುತ್ತಿವೆ ಎಂಬ ವಿಶ್ಲೇಷಣೆಗಳು ಬಂದಿವೆ. ಆದಾಗ್ಯೂ, ಎರಡು ಇತರ ಪ್ರಮುಖ ತೆಲುಗು ಟಿವಿ ಸುದ್ದಿ ವಾಹಿನಿಗಳು ಜಗನ್ ಮೋಹನ್ ರೆಡ್ಡಿ ಕಡೆಗೆ ಒಲವು ತೋರಿಸುತ್ತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ತನ್ನದೇ ಆದ ವರದಿಗಳನ್ನು ಹೇಳಲು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡಲು ಸರ್ಕಾರ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...