Homeಮುಖಪುಟಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

ಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಸ್ವಾಮ್ಯದ ಘಟಕವಾದ ಆಂಧ್ರಪ್ರದೇಶ ಸ್ಟೇಟ್ ಫೈಬರ್‌ನೆಟ್ ಲಿಮಿಟೆಡ್ (APSFL), ಈಗ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು, 2024ರ ವಿಧಾನಸಭೆಯಲ್ಲಿ ಜನರನ್ನು ಜಗನ್‌ ಮೋಹನ್‌ ರೆಡ್ಡಿಯವರತ್ತ ಸೆಳೆಯಲು ‘ಎಪಿ ಫೈಬರ್ ನ್ಯೂಸ್’ ಎಂಬ ಟಿವಿ ಚಾನೆಲ್ ಆರಂಭಿಸಲು ಮುಂದಾಗಿದೆ.

ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಚಾನೆಲ್‌ ಕಾರ್ಯನಿರ್ವಹಿಸಲಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಜಗನ್‌ ಅವರ ಕಾರ್ಯಕ್ರಮಗಳನ್ನು ‌ಈ ಚಾನೆಲ್‌ ಪ್ರಸಾರ ಮಾಡಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಚಾನಲ್ ತನ್ನ ಫೈಬರ್-ಟು-ಹೋಮ್ (FTH) ನೆಟ್ವರ್ಕ್ ಮೂಲಕ  ಪ್ರಸಾರ ಮಾಡುತ್ತದೆ” ಎಂದು ಎಪಿಎಸ್‌ಎಫ್‌ಎಲ್‌ ಅಧ್ಯಕ್ಷ ಪಿ. ಗೌತಮ್ ರೆಡ್ಡಿ ಹೇಳಿದ್ದಾರೆ. “ಹೊರಗುತ್ತಿಗೆ ವಿಷಯದ ಅಗತ್ಯತೆಗಳ ನಿರೀಕ್ಷೆಗಳು ಸೇರಿದಂತೆ ನಾವು ಚಾನೆಲ್‌ನ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಆಂಧ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಎಪಿಎಸ್‌ಎಫ್‌ಎಲ್‌ ತನ್ನ ಟ್ರಿಪಲ್-ಪ್ಲೇ ಸೇವೆಗಳ ಅಸ್ತಿತ್ವದಲ್ಲಿರುವ 1 ಮಿಲಿಯನ್ ಚಂದಾದಾರರಿಗೆ ಸೇರಿಸಲು 5 ಮಿಲಿಯನ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಖರೀದಿಸುತ್ತಿದೆ. ರಾಜ್ಯದ ಅರ್ಧದಷ್ಟು ಮನೆಗಳಿಗೆ ‘ಎಪಿ ಫೈಬರ್ ನ್ಯೂಸ್’ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.

ಇತ್ತೀಚಿನ ಜನಾಭಿಪ್ರಾಯ ಸಂಗ್ರಹಣೆಗಳು ವೈಎಸ್‌ಆರ್ ಕಾಂಗ್ರೆಸ್‌ಗೆ ಮೇಲುಗೈ ತೋರಿಸಿದ್ದರೂ ಜಗನ್ ಕಣಕ್ಕಿಳಿದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ. ಜುಲೈ 9 ಮತ್ತು 10 ರಂದು ನಡೆದ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಜಗನ್‌, “ಮಿಷನ್ 175 ಅಸಾಧ್ಯವಲ್ಲ” ಎಂದು ಘೋಷಿಸಿದ್ದಾರೆ.

ಚುನಾವಣಾ ಸಮರಕ್ಕೆ ಸಿದ್ಧರಾಗಿರಲು ಕಾರ್ಯಕರ್ತರನ್ನು ಕೋರಿದ್ದಾರೆ. ಏಪ್ರಿಲ್ 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಬೇಕೆಂದು ಜಗನ್ ಬಯಸಿದ್ದಾರೆ.

ಇದನ್ನೂ ಓದಿರಿ: Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

ಈಗಾಗಲೇ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ಗುರಿಯಾಗಿಸಿಕೊಂಡು ಜಗನ್ ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ. ನಾಯ್ಡು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಪ್ರತಿ ಹಳ್ಳಿಯಲ್ಲೂ ಪ್ರಚಾರ ಮಾಡಲು ಸೂಚಿಸಿದ್ದಾರೆ. ಪ್ರತಿಪಕ್ಷದ ಕಡೆಗೆ ಜನರ ಗಮನ ಹರಿದಂತೆ ನೋಡಿಕೊಳ್ಳಲು ಟಿ.ವಿ.ಚಾನೆಲ್‌ ಆರಂಭಿಸಿದ್ದಾರೆಂದು ವಿಶ್ಲೇಷಣೆಗಳು ಬರುತ್ತಿವೆ.

ಮುಖ್ಯಮಂತ್ರಿಯವರು ಪ್ರಸ್ತುತ ಸಾಕ್ಷಿ ಟೆಲಿವಿಷನ್‌ ಸುದ್ದಿ ವಾಹಿನಿ, ಸಾಕ್ಷಿ ತೆಲುಗು ಪತ್ರಿಕೆಯನ್ನು ತಮ್ಮ ಒಡೆತನದಲ್ಲಿ ಹೊಂದಿದ್ದಾರೆ. ಆಡಳಿತರೂಢ ಸರ್ಕಾರವನ್ನು ಮೂರು ಪ್ರಮುಖ ತೆಲುಗು ಸುದ್ದಿ ವಾಹಿನಿಗಳು ಹೆಚ್ಚು ಟೀಕಿಸುತ್ತಿವೆ. ಈ ಚಾನೆಲ್‌ಗಳು ಪ್ರಮುಖ ವಿರೋಧ ಪಕ್ಷವಾದ ಟಿಡಿಪಿಯತ್ತ ಒಲವು ತೋರುತ್ತಿವೆ ಎಂಬ ವಿಶ್ಲೇಷಣೆಗಳು ಬಂದಿವೆ. ಆದಾಗ್ಯೂ, ಎರಡು ಇತರ ಪ್ರಮುಖ ತೆಲುಗು ಟಿವಿ ಸುದ್ದಿ ವಾಹಿನಿಗಳು ಜಗನ್ ಮೋಹನ್ ರೆಡ್ಡಿ ಕಡೆಗೆ ಒಲವು ತೋರಿಸುತ್ತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ತನ್ನದೇ ಆದ ವರದಿಗಳನ್ನು ಹೇಳಲು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡಲು ಸರ್ಕಾರ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...