Homeಮುಖಪುಟಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

ಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಸ್ವಾಮ್ಯದ ಘಟಕವಾದ ಆಂಧ್ರಪ್ರದೇಶ ಸ್ಟೇಟ್ ಫೈಬರ್‌ನೆಟ್ ಲಿಮಿಟೆಡ್ (APSFL), ಈಗ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು, 2024ರ ವಿಧಾನಸಭೆಯಲ್ಲಿ ಜನರನ್ನು ಜಗನ್‌ ಮೋಹನ್‌ ರೆಡ್ಡಿಯವರತ್ತ ಸೆಳೆಯಲು ‘ಎಪಿ ಫೈಬರ್ ನ್ಯೂಸ್’ ಎಂಬ ಟಿವಿ ಚಾನೆಲ್ ಆರಂಭಿಸಲು ಮುಂದಾಗಿದೆ.

ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಚಾನೆಲ್‌ ಕಾರ್ಯನಿರ್ವಹಿಸಲಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಜಗನ್‌ ಅವರ ಕಾರ್ಯಕ್ರಮಗಳನ್ನು ‌ಈ ಚಾನೆಲ್‌ ಪ್ರಸಾರ ಮಾಡಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಚಾನಲ್ ತನ್ನ ಫೈಬರ್-ಟು-ಹೋಮ್ (FTH) ನೆಟ್ವರ್ಕ್ ಮೂಲಕ  ಪ್ರಸಾರ ಮಾಡುತ್ತದೆ” ಎಂದು ಎಪಿಎಸ್‌ಎಫ್‌ಎಲ್‌ ಅಧ್ಯಕ್ಷ ಪಿ. ಗೌತಮ್ ರೆಡ್ಡಿ ಹೇಳಿದ್ದಾರೆ. “ಹೊರಗುತ್ತಿಗೆ ವಿಷಯದ ಅಗತ್ಯತೆಗಳ ನಿರೀಕ್ಷೆಗಳು ಸೇರಿದಂತೆ ನಾವು ಚಾನೆಲ್‌ನ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಆಂಧ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಎಪಿಎಸ್‌ಎಫ್‌ಎಲ್‌ ತನ್ನ ಟ್ರಿಪಲ್-ಪ್ಲೇ ಸೇವೆಗಳ ಅಸ್ತಿತ್ವದಲ್ಲಿರುವ 1 ಮಿಲಿಯನ್ ಚಂದಾದಾರರಿಗೆ ಸೇರಿಸಲು 5 ಮಿಲಿಯನ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಖರೀದಿಸುತ್ತಿದೆ. ರಾಜ್ಯದ ಅರ್ಧದಷ್ಟು ಮನೆಗಳಿಗೆ ‘ಎಪಿ ಫೈಬರ್ ನ್ಯೂಸ್’ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.

ಇತ್ತೀಚಿನ ಜನಾಭಿಪ್ರಾಯ ಸಂಗ್ರಹಣೆಗಳು ವೈಎಸ್‌ಆರ್ ಕಾಂಗ್ರೆಸ್‌ಗೆ ಮೇಲುಗೈ ತೋರಿಸಿದ್ದರೂ ಜಗನ್ ಕಣಕ್ಕಿಳಿದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ. ಜುಲೈ 9 ಮತ್ತು 10 ರಂದು ನಡೆದ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಜಗನ್‌, “ಮಿಷನ್ 175 ಅಸಾಧ್ಯವಲ್ಲ” ಎಂದು ಘೋಷಿಸಿದ್ದಾರೆ.

ಚುನಾವಣಾ ಸಮರಕ್ಕೆ ಸಿದ್ಧರಾಗಿರಲು ಕಾರ್ಯಕರ್ತರನ್ನು ಕೋರಿದ್ದಾರೆ. ಏಪ್ರಿಲ್ 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಬೇಕೆಂದು ಜಗನ್ ಬಯಸಿದ್ದಾರೆ.

ಇದನ್ನೂ ಓದಿರಿ: Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

ಈಗಾಗಲೇ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ಗುರಿಯಾಗಿಸಿಕೊಂಡು ಜಗನ್ ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ. ನಾಯ್ಡು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಪ್ರತಿ ಹಳ್ಳಿಯಲ್ಲೂ ಪ್ರಚಾರ ಮಾಡಲು ಸೂಚಿಸಿದ್ದಾರೆ. ಪ್ರತಿಪಕ್ಷದ ಕಡೆಗೆ ಜನರ ಗಮನ ಹರಿದಂತೆ ನೋಡಿಕೊಳ್ಳಲು ಟಿ.ವಿ.ಚಾನೆಲ್‌ ಆರಂಭಿಸಿದ್ದಾರೆಂದು ವಿಶ್ಲೇಷಣೆಗಳು ಬರುತ್ತಿವೆ.

ಮುಖ್ಯಮಂತ್ರಿಯವರು ಪ್ರಸ್ತುತ ಸಾಕ್ಷಿ ಟೆಲಿವಿಷನ್‌ ಸುದ್ದಿ ವಾಹಿನಿ, ಸಾಕ್ಷಿ ತೆಲುಗು ಪತ್ರಿಕೆಯನ್ನು ತಮ್ಮ ಒಡೆತನದಲ್ಲಿ ಹೊಂದಿದ್ದಾರೆ. ಆಡಳಿತರೂಢ ಸರ್ಕಾರವನ್ನು ಮೂರು ಪ್ರಮುಖ ತೆಲುಗು ಸುದ್ದಿ ವಾಹಿನಿಗಳು ಹೆಚ್ಚು ಟೀಕಿಸುತ್ತಿವೆ. ಈ ಚಾನೆಲ್‌ಗಳು ಪ್ರಮುಖ ವಿರೋಧ ಪಕ್ಷವಾದ ಟಿಡಿಪಿಯತ್ತ ಒಲವು ತೋರುತ್ತಿವೆ ಎಂಬ ವಿಶ್ಲೇಷಣೆಗಳು ಬಂದಿವೆ. ಆದಾಗ್ಯೂ, ಎರಡು ಇತರ ಪ್ರಮುಖ ತೆಲುಗು ಟಿವಿ ಸುದ್ದಿ ವಾಹಿನಿಗಳು ಜಗನ್ ಮೋಹನ್ ರೆಡ್ಡಿ ಕಡೆಗೆ ಒಲವು ತೋರಿಸುತ್ತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ತನ್ನದೇ ಆದ ವರದಿಗಳನ್ನು ಹೇಳಲು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡಲು ಸರ್ಕಾರ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....