Homeಮುಖಪುಟಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

ಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಸ್ವಾಮ್ಯದ ಘಟಕವಾದ ಆಂಧ್ರಪ್ರದೇಶ ಸ್ಟೇಟ್ ಫೈಬರ್‌ನೆಟ್ ಲಿಮಿಟೆಡ್ (APSFL), ಈಗ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು, 2024ರ ವಿಧಾನಸಭೆಯಲ್ಲಿ ಜನರನ್ನು ಜಗನ್‌ ಮೋಹನ್‌ ರೆಡ್ಡಿಯವರತ್ತ ಸೆಳೆಯಲು ‘ಎಪಿ ಫೈಬರ್ ನ್ಯೂಸ್’ ಎಂಬ ಟಿವಿ ಚಾನೆಲ್ ಆರಂಭಿಸಲು ಮುಂದಾಗಿದೆ.

ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಚಾನೆಲ್‌ ಕಾರ್ಯನಿರ್ವಹಿಸಲಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಜಗನ್‌ ಅವರ ಕಾರ್ಯಕ್ರಮಗಳನ್ನು ‌ಈ ಚಾನೆಲ್‌ ಪ್ರಸಾರ ಮಾಡಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಚಾನಲ್ ತನ್ನ ಫೈಬರ್-ಟು-ಹೋಮ್ (FTH) ನೆಟ್ವರ್ಕ್ ಮೂಲಕ  ಪ್ರಸಾರ ಮಾಡುತ್ತದೆ” ಎಂದು ಎಪಿಎಸ್‌ಎಫ್‌ಎಲ್‌ ಅಧ್ಯಕ್ಷ ಪಿ. ಗೌತಮ್ ರೆಡ್ಡಿ ಹೇಳಿದ್ದಾರೆ. “ಹೊರಗುತ್ತಿಗೆ ವಿಷಯದ ಅಗತ್ಯತೆಗಳ ನಿರೀಕ್ಷೆಗಳು ಸೇರಿದಂತೆ ನಾವು ಚಾನೆಲ್‌ನ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಆಂಧ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಎಪಿಎಸ್‌ಎಫ್‌ಎಲ್‌ ತನ್ನ ಟ್ರಿಪಲ್-ಪ್ಲೇ ಸೇವೆಗಳ ಅಸ್ತಿತ್ವದಲ್ಲಿರುವ 1 ಮಿಲಿಯನ್ ಚಂದಾದಾರರಿಗೆ ಸೇರಿಸಲು 5 ಮಿಲಿಯನ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಖರೀದಿಸುತ್ತಿದೆ. ರಾಜ್ಯದ ಅರ್ಧದಷ್ಟು ಮನೆಗಳಿಗೆ ‘ಎಪಿ ಫೈಬರ್ ನ್ಯೂಸ್’ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.

ಇತ್ತೀಚಿನ ಜನಾಭಿಪ್ರಾಯ ಸಂಗ್ರಹಣೆಗಳು ವೈಎಸ್‌ಆರ್ ಕಾಂಗ್ರೆಸ್‌ಗೆ ಮೇಲುಗೈ ತೋರಿಸಿದ್ದರೂ ಜಗನ್ ಕಣಕ್ಕಿಳಿದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ. ಜುಲೈ 9 ಮತ್ತು 10 ರಂದು ನಡೆದ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಜಗನ್‌, “ಮಿಷನ್ 175 ಅಸಾಧ್ಯವಲ್ಲ” ಎಂದು ಘೋಷಿಸಿದ್ದಾರೆ.

ಚುನಾವಣಾ ಸಮರಕ್ಕೆ ಸಿದ್ಧರಾಗಿರಲು ಕಾರ್ಯಕರ್ತರನ್ನು ಕೋರಿದ್ದಾರೆ. ಏಪ್ರಿಲ್ 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಬೇಕೆಂದು ಜಗನ್ ಬಯಸಿದ್ದಾರೆ.

ಇದನ್ನೂ ಓದಿರಿ: Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

ಈಗಾಗಲೇ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ಗುರಿಯಾಗಿಸಿಕೊಂಡು ಜಗನ್ ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ. ನಾಯ್ಡು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಪ್ರತಿ ಹಳ್ಳಿಯಲ್ಲೂ ಪ್ರಚಾರ ಮಾಡಲು ಸೂಚಿಸಿದ್ದಾರೆ. ಪ್ರತಿಪಕ್ಷದ ಕಡೆಗೆ ಜನರ ಗಮನ ಹರಿದಂತೆ ನೋಡಿಕೊಳ್ಳಲು ಟಿ.ವಿ.ಚಾನೆಲ್‌ ಆರಂಭಿಸಿದ್ದಾರೆಂದು ವಿಶ್ಲೇಷಣೆಗಳು ಬರುತ್ತಿವೆ.

ಮುಖ್ಯಮಂತ್ರಿಯವರು ಪ್ರಸ್ತುತ ಸಾಕ್ಷಿ ಟೆಲಿವಿಷನ್‌ ಸುದ್ದಿ ವಾಹಿನಿ, ಸಾಕ್ಷಿ ತೆಲುಗು ಪತ್ರಿಕೆಯನ್ನು ತಮ್ಮ ಒಡೆತನದಲ್ಲಿ ಹೊಂದಿದ್ದಾರೆ. ಆಡಳಿತರೂಢ ಸರ್ಕಾರವನ್ನು ಮೂರು ಪ್ರಮುಖ ತೆಲುಗು ಸುದ್ದಿ ವಾಹಿನಿಗಳು ಹೆಚ್ಚು ಟೀಕಿಸುತ್ತಿವೆ. ಈ ಚಾನೆಲ್‌ಗಳು ಪ್ರಮುಖ ವಿರೋಧ ಪಕ್ಷವಾದ ಟಿಡಿಪಿಯತ್ತ ಒಲವು ತೋರುತ್ತಿವೆ ಎಂಬ ವಿಶ್ಲೇಷಣೆಗಳು ಬಂದಿವೆ. ಆದಾಗ್ಯೂ, ಎರಡು ಇತರ ಪ್ರಮುಖ ತೆಲುಗು ಟಿವಿ ಸುದ್ದಿ ವಾಹಿನಿಗಳು ಜಗನ್ ಮೋಹನ್ ರೆಡ್ಡಿ ಕಡೆಗೆ ಒಲವು ತೋರಿಸುತ್ತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ತನ್ನದೇ ಆದ ವರದಿಗಳನ್ನು ಹೇಳಲು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡಲು ಸರ್ಕಾರ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...