Homeಮುಖಪುಟಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

ಆಂಧ್ರಪ್ರದೇಶ: ಜಗನ್‌ ಸರ್ಕಾರ ತನ್ನದೇ ಟಿ.ವಿ. ಚಾನೆಲ್ ಆರಂಭಿಸುತ್ತಿರುವುದೇಕೆ?

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಸ್ವಾಮ್ಯದ ಘಟಕವಾದ ಆಂಧ್ರಪ್ರದೇಶ ಸ್ಟೇಟ್ ಫೈಬರ್‌ನೆಟ್ ಲಿಮಿಟೆಡ್ (APSFL), ಈಗ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು, 2024ರ ವಿಧಾನಸಭೆಯಲ್ಲಿ ಜನರನ್ನು ಜಗನ್‌ ಮೋಹನ್‌ ರೆಡ್ಡಿಯವರತ್ತ ಸೆಳೆಯಲು ‘ಎಪಿ ಫೈಬರ್ ನ್ಯೂಸ್’ ಎಂಬ ಟಿವಿ ಚಾನೆಲ್ ಆರಂಭಿಸಲು ಮುಂದಾಗಿದೆ.

ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಚಾನೆಲ್‌ ಕಾರ್ಯನಿರ್ವಹಿಸಲಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಜಗನ್‌ ಅವರ ಕಾರ್ಯಕ್ರಮಗಳನ್ನು ‌ಈ ಚಾನೆಲ್‌ ಪ್ರಸಾರ ಮಾಡಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಚಾನಲ್ ತನ್ನ ಫೈಬರ್-ಟು-ಹೋಮ್ (FTH) ನೆಟ್ವರ್ಕ್ ಮೂಲಕ  ಪ್ರಸಾರ ಮಾಡುತ್ತದೆ” ಎಂದು ಎಪಿಎಸ್‌ಎಫ್‌ಎಲ್‌ ಅಧ್ಯಕ್ಷ ಪಿ. ಗೌತಮ್ ರೆಡ್ಡಿ ಹೇಳಿದ್ದಾರೆ. “ಹೊರಗುತ್ತಿಗೆ ವಿಷಯದ ಅಗತ್ಯತೆಗಳ ನಿರೀಕ್ಷೆಗಳು ಸೇರಿದಂತೆ ನಾವು ಚಾನೆಲ್‌ನ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಆಂಧ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಎಪಿಎಸ್‌ಎಫ್‌ಎಲ್‌ ತನ್ನ ಟ್ರಿಪಲ್-ಪ್ಲೇ ಸೇವೆಗಳ ಅಸ್ತಿತ್ವದಲ್ಲಿರುವ 1 ಮಿಲಿಯನ್ ಚಂದಾದಾರರಿಗೆ ಸೇರಿಸಲು 5 ಮಿಲಿಯನ್ ಸೆಟ್-ಟಾಪ್ ಬಾಕ್ಸ್‌ಗಳನ್ನು ಖರೀದಿಸುತ್ತಿದೆ. ರಾಜ್ಯದ ಅರ್ಧದಷ್ಟು ಮನೆಗಳಿಗೆ ‘ಎಪಿ ಫೈಬರ್ ನ್ಯೂಸ್’ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.

ಇತ್ತೀಚಿನ ಜನಾಭಿಪ್ರಾಯ ಸಂಗ್ರಹಣೆಗಳು ವೈಎಸ್‌ಆರ್ ಕಾಂಗ್ರೆಸ್‌ಗೆ ಮೇಲುಗೈ ತೋರಿಸಿದ್ದರೂ ಜಗನ್ ಕಣಕ್ಕಿಳಿದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ. ಜುಲೈ 9 ಮತ್ತು 10 ರಂದು ನಡೆದ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಜಗನ್‌, “ಮಿಷನ್ 175 ಅಸಾಧ್ಯವಲ್ಲ” ಎಂದು ಘೋಷಿಸಿದ್ದಾರೆ.

ಚುನಾವಣಾ ಸಮರಕ್ಕೆ ಸಿದ್ಧರಾಗಿರಲು ಕಾರ್ಯಕರ್ತರನ್ನು ಕೋರಿದ್ದಾರೆ. ಏಪ್ರಿಲ್ 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಬೇಕೆಂದು ಜಗನ್ ಬಯಸಿದ್ದಾರೆ.

ಇದನ್ನೂ ಓದಿರಿ: Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

ಈಗಾಗಲೇ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ಗುರಿಯಾಗಿಸಿಕೊಂಡು ಜಗನ್ ತನ್ನ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ. ನಾಯ್ಡು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಪ್ರತಿ ಹಳ್ಳಿಯಲ್ಲೂ ಪ್ರಚಾರ ಮಾಡಲು ಸೂಚಿಸಿದ್ದಾರೆ. ಪ್ರತಿಪಕ್ಷದ ಕಡೆಗೆ ಜನರ ಗಮನ ಹರಿದಂತೆ ನೋಡಿಕೊಳ್ಳಲು ಟಿ.ವಿ.ಚಾನೆಲ್‌ ಆರಂಭಿಸಿದ್ದಾರೆಂದು ವಿಶ್ಲೇಷಣೆಗಳು ಬರುತ್ತಿವೆ.

ಮುಖ್ಯಮಂತ್ರಿಯವರು ಪ್ರಸ್ತುತ ಸಾಕ್ಷಿ ಟೆಲಿವಿಷನ್‌ ಸುದ್ದಿ ವಾಹಿನಿ, ಸಾಕ್ಷಿ ತೆಲುಗು ಪತ್ರಿಕೆಯನ್ನು ತಮ್ಮ ಒಡೆತನದಲ್ಲಿ ಹೊಂದಿದ್ದಾರೆ. ಆಡಳಿತರೂಢ ಸರ್ಕಾರವನ್ನು ಮೂರು ಪ್ರಮುಖ ತೆಲುಗು ಸುದ್ದಿ ವಾಹಿನಿಗಳು ಹೆಚ್ಚು ಟೀಕಿಸುತ್ತಿವೆ. ಈ ಚಾನೆಲ್‌ಗಳು ಪ್ರಮುಖ ವಿರೋಧ ಪಕ್ಷವಾದ ಟಿಡಿಪಿಯತ್ತ ಒಲವು ತೋರುತ್ತಿವೆ ಎಂಬ ವಿಶ್ಲೇಷಣೆಗಳು ಬಂದಿವೆ. ಆದಾಗ್ಯೂ, ಎರಡು ಇತರ ಪ್ರಮುಖ ತೆಲುಗು ಟಿವಿ ಸುದ್ದಿ ವಾಹಿನಿಗಳು ಜಗನ್ ಮೋಹನ್ ರೆಡ್ಡಿ ಕಡೆಗೆ ಒಲವು ತೋರಿಸುತ್ತಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ತನ್ನದೇ ಆದ ವರದಿಗಳನ್ನು ಹೇಳಲು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡಲು ಸರ್ಕಾರ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...