Homeಮುಖಪುಟಕೋಲಾರ ಕ್ಷೇತ್ರವೆ ಏಕೆ?: ಕಾರಣ ವಿವರಿಸಿದ ಸಿದ್ದರಾಮಯ್ಯ

ಕೋಲಾರ ಕ್ಷೇತ್ರವೆ ಏಕೆ?: ಕಾರಣ ವಿವರಿಸಿದ ಸಿದ್ದರಾಮಯ್ಯ

1998ರಲ್ಲಿ ಕೋಲಾರದಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶವನ್ನು ಸಿದ್ದರಾಮಯ್ಯನವರು ಉದ್ಘಾಟಿಸಿದ್ದರು.

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಹು ಚರ್ಚಿತ ವಿಷಯಕ್ಕೆ ಕೊನೆಗೂ ತೆರೆಬಿದ್ದಿದೆ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಾದಾಮಿ, ಸವದತ್ತಿ, ವರುಣಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರು ಸ್ಪರ್ಧಿಸುತ್ತಾರೆ ಎಂದು ಊಹಾಪೋಹಗಳಿದ್ದವು. ಆ ಮೂರು ಕ್ಷೇತ್ರದ ಟಿಕೆಟ್‌ಗಾಗಿ ಅವರು ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಅವರು ಕೋಲಾರವನ್ನೇ ಏಕೆ ಆಯ್ಕೆ ಮಾಡಿಕೊಂಡರು ಎಂಬುದನ್ನು ಸ್ವತಃ ಸಿದ್ದರಾಮಯ್ಯನವರೆ ವಿವರಿಸಿದ್ದಾರೆ.

“ಕೋಲಾರ ಕ್ಷೇತ್ರದಿಂದ ಆಯ್ಕೆಯಾದರೆ ಪ್ರತೀ ವಾರ ಕ್ಷೇತ್ರಕ್ಕೆ ಬರುತ್ತೇನೆ. ಜನ ಮಧ್ಯವರ್ತಿಗಳಿಲ್ಲದೆ ನನ್ನನ್ನು ಭೇಟಿ ಮಾಡಬಹುದು. ಸಾಮಾನ್ಯ ವ್ಯಕ್ತಿಯೂ ಬಂದು ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಇದು ನಾನು ನಡೆಸಿಕೊಂಡು ಬಂದಿರುವ ಸಂಪ್ರದಾಯ” ಎಂದು ಟ್ವೀಟ್ ಮಾಡುವ ಮೂಲಕ ಕೋಲಾರವೇ ಏಕೆ ಎಂಬುದಕ್ಕೆ ಅವರು ಉತ್ತರಿಸಿದ್ದಾರೆ.

ಕೋಲಾರದ ಜನರ ಪ್ರೀತಿ ಮತ್ತು ಅಭಿಮಾನದ ಒತ್ತಾಯಕ್ಕೆ ಮಣಿದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ಗೆ ಸೇರಿದ್ದು. ಸಿದ್ದರಾಮಯ್ಯ ಎಂಬ ಕಾರಣಕ್ಕೆ ವಿಶೇಷ ಅವಕಾಶ, ರಿಯಾಯಿತಿ ಇಲ್ಲ ಎಂದು ಸಹ ಅವರು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪವರು ಸೇರಿದಂತೆ ಕೋಲಾರ ಜಿಲ್ಲೆಯ ಪಕ್ಷದ ಎಲ್ಲ ನಾಯಕರು ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಲೇ ಇದ್ದರು.. ಎಲ್ಲ ಜಾತಿ, ಧರ್ಮಗಳ ಜನರು ಮತ್ತು ಧಾರ್ಮಿಕ ಗುರುಗಳ ಅಪೇಕ್ಷೆಯೂ ಇದೇ ಆಗಿದೆ. ಕಳೆದ ಬಾರಿ ಇಲ್ಲಿಗೆ ಭೇಟಿ ನೀಡಿದಾಗ ಅವರೆಲ್ಲರ ಜೊತೆ ಮಾತನಾಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೋಲಾರದಿಂದ ನಾನು ಸ್ಪರ್ಧಿಸಿದರೆ, ತಾನು ಸ್ಪರ್ಧಿಸದೆ ಬೆಂಬಲ ನೀಡುತ್ತೇನೆ ಎಂದು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ಹೇಳಿದ್ದಾರೆ. ಅವರ ಅಭಿಮಾನಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವೇ ಇಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ದೂರದ ಕಾರಣಕ್ಕೆ ಬಾದಾಮಿಯಿಂದ ಸ್ಪರ್ಧಿಸುವುದಿಲ್ಲವೆಂದು ತೀರ್ಮಾನಿಸಿದ್ದರೂ ಹೆಲಿಕಾಪ್ಟರ್ ಖರೀದಿ ಮಾಡಿ ಕೊಡುತ್ತೇವೆ, ನೀವು ವಾರಕ್ಕೊಂದು ಬಾರಿ ಬಂದು ಹೋಗಿ ಎಂದು ಆ ಕ್ಷೇತ್ರದ ಜನ ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೋಲಾರದಲ್ಲಿ ಬಿಜೆಪಿ ಪಕ್ಷವಿಲ್ಲ. ಆದರೂ ಬಿಜೆಪಿ ಬಗ್ಗೆ ಜನ ಎಚ್ಚರವಾಗಿರಬೇಕು. ಅವರು ಕೇವಲ ಅಲ್ಪಸಂಖ್ಯಾತರ ವಿರೋಧಿಗಳು ಮಾತ್ರ ಅಲ್ಲ, ರೈತರು, ಮಹಿಳೆಯರು, ಯುವ ಜನರ ವಿರೋಧಿಗಳು. ಜನವರಿ 23ರಂದು ಕೋಲಾರದಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ, ಅದಕ್ಕೆ ಇಡೀ ಜಿಲ್ಲೆಯ ಜನ ಬರಬೇಕು. ಆಗ ನಿಮ್ಮೊಂದಿಗೆ ಕೆಲವು ಮಹತ್ವದ ವಿಷಯಗಳನ್ನು ಹಂಚಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

ದಲಿತ ಚಳವಳಿಯ ಜಿಲ್ಲೆ

ರಾಜ್ಯದಲ್ಲಿ ಅತಿ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲಿ ಕೋಲಾರವೂ ಒಂದು. ಹಾಗಾಗಿಯೇ ಇಲ್ಲಿ ದಲಿತ ಚಳವಳಿ ಗರಿಗೆದರಿತ್ತು. ಹೋಬಳಿಗೊಂದು ವಸತಿ ಶಾಲೆ, ಹಾಸ್ಟೆಲ್ ಬೇಕು ಎಂಬ ಹಕ್ಕೊತ್ತಾಯದೊಂದಿಗೆ ಇಲ್ಲಿ ದೊಡ್ಡ ಹೋರಾಟವೇ ನಡೆದಿದೆ. ಅದರ ಪರಿಣಾಮವಾಗಿ ಜಿಲ್ಲೆಯಲ್ಲಿ ಹಲವಾರು ಶಾಲೆಗಳು- ಹಾಸ್ಟೆಲ್‌ಗಳು ಆರಂಭವಾಗಿವೆ. ’ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ ನಾಗಸಂದ್ರ ಭೂ ಚಳವಳಿಯೆಂದೇ ಇತಿಹಾಸದಲ್ಲಿ ದಾಖಲಾಗಿದೆ.

ಅಹಿಂದ ಚಳವಳಿ

ಅಹಿಂದ ಚಳವಳಿಗೆ ಬುನಾದಿಯಾಗಿದ್ದು ಕೋಲಾರ ಜಿಲ್ಲೆ. 1998ರಲ್ಲಿ ಕೋಲಾರದಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶ ಅದಕ್ಕೆ ಸಾಕ್ಷಿ. ಈಡಿಗ ಸಮುದಾಯಕ್ಕೆ ಸೇರಿದ್ದ ಜಾಲಪ್ಪನವರು ಕೋಲಾರದಲ್ಲಿ ಹಿಂದುಳಿದ ವರ್ಗಗಳ ಟ್ರಸ್ಟ್ ಮುಖಾಂತರ ದೇವರಾಜ ಅರಸು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಸ್ಥಾಪಿಸಿದ್ದರು. ಅದೇ ಕೋಲಾರದಲ್ಲಿ ಅಹಿಂದ ಸಮಾವೇಶ ಸಂಘಟಿತವಾದಾಗ ಅದರ ಪೂರ್ಣ ಹೊಣೆ ಹೊತ್ತು ಜಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯನವರು ಆ ಸಮಾವೇಶ ಉದ್ಘಾಟಿಸಿ ಚಳವಳಿಗೆ ಚಾಲನೆ ನೀಡಿದ್ದರು.

ಸದ್ಯದ ರಾಜಕೀಯ ಸ್ಥಿತಿಗತಿ

2018ರಲ್ಲಿ ಭಾರೀ ಅಂತರದಿಂದ ಗೆದ್ದು 4ನೇ ಬಾರಿ ಶಾಸಕನಾಗಿರುವ ಕೆ.ಶ್ರೀನಿವಾಸಗೌಡರು ಇತ್ತೀಚಿನ ರಾಜ್ಯಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ್ದರು. ಏಕೆ ಹೀಗೆ ಮಾಡಿದಿರಿ ಎಂಬ ಪತ್ರಕರ್ತರ ಪ್ರಶ್ನೆಗೆ “ಬಿಕಾಸ್ ಐ ಲವ್ ಕಾಂಗ್ರೆಸ್” ಎಂಬ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಸದ್ಯ ಕಾಂಗ್ರೆಸ್ ಪಾಳಯದಲ್ಲಿರುವ ಅವರು ತಾನು ಕ್ಷೇತ್ರ ಬಿಟ್ಟುಕೊಡುತ್ತೇನೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಬರಬೇಕೆಂದು ಮನವಿ ಮಾಡಿದ್ದರು.

ಜಾತಿವಾರು ಜನಸಂಖ್ಯೆ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಸಮುದಾಯದ ಮತಗಳು ಮೊದಲನೇ ಸ್ಥಾನದಲ್ಲಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿ 60,000ಕ್ಕೂ ಹೆಚ್ಚು ಮತಗಳಿವೆ ಎನ್ನಲಾಗುತ್ತಿದೆ. ಮುಸ್ಲಿಮರು ಎರಡನೇ ಸ್ಥಾನದಲ್ಲಿದ್ದು ಸುಮಾರು 40,000 ದಷ್ಟು ಮತಗಳಿವೆ. ಒಕ್ಕಲಿಗರು 30,000ದಷ್ಟು ಇದ್ದರೆ ಕುರುಬರು 20,000ಕ್ಕೂ ಹೆಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಉಳಿದ ಇತರ ಸಮುದಾಯಗಳ ಸುಮಾರು 50,000 ದಷ್ಟು ಮತಗಳಿವೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ: ವಿಧಾನಸಭಾ ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...