Homeಮುಖಪುಟಕೋಲಾರ ಕ್ಷೇತ್ರವೆ ಏಕೆ?: ಕಾರಣ ವಿವರಿಸಿದ ಸಿದ್ದರಾಮಯ್ಯ

ಕೋಲಾರ ಕ್ಷೇತ್ರವೆ ಏಕೆ?: ಕಾರಣ ವಿವರಿಸಿದ ಸಿದ್ದರಾಮಯ್ಯ

1998ರಲ್ಲಿ ಕೋಲಾರದಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶವನ್ನು ಸಿದ್ದರಾಮಯ್ಯನವರು ಉದ್ಘಾಟಿಸಿದ್ದರು.

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಹು ಚರ್ಚಿತ ವಿಷಯಕ್ಕೆ ಕೊನೆಗೂ ತೆರೆಬಿದ್ದಿದೆ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಾದಾಮಿ, ಸವದತ್ತಿ, ವರುಣಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರು ಸ್ಪರ್ಧಿಸುತ್ತಾರೆ ಎಂದು ಊಹಾಪೋಹಗಳಿದ್ದವು. ಆ ಮೂರು ಕ್ಷೇತ್ರದ ಟಿಕೆಟ್‌ಗಾಗಿ ಅವರು ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಅವರು ಕೋಲಾರವನ್ನೇ ಏಕೆ ಆಯ್ಕೆ ಮಾಡಿಕೊಂಡರು ಎಂಬುದನ್ನು ಸ್ವತಃ ಸಿದ್ದರಾಮಯ್ಯನವರೆ ವಿವರಿಸಿದ್ದಾರೆ.

“ಕೋಲಾರ ಕ್ಷೇತ್ರದಿಂದ ಆಯ್ಕೆಯಾದರೆ ಪ್ರತೀ ವಾರ ಕ್ಷೇತ್ರಕ್ಕೆ ಬರುತ್ತೇನೆ. ಜನ ಮಧ್ಯವರ್ತಿಗಳಿಲ್ಲದೆ ನನ್ನನ್ನು ಭೇಟಿ ಮಾಡಬಹುದು. ಸಾಮಾನ್ಯ ವ್ಯಕ್ತಿಯೂ ಬಂದು ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಇದು ನಾನು ನಡೆಸಿಕೊಂಡು ಬಂದಿರುವ ಸಂಪ್ರದಾಯ” ಎಂದು ಟ್ವೀಟ್ ಮಾಡುವ ಮೂಲಕ ಕೋಲಾರವೇ ಏಕೆ ಎಂಬುದಕ್ಕೆ ಅವರು ಉತ್ತರಿಸಿದ್ದಾರೆ.

ಕೋಲಾರದ ಜನರ ಪ್ರೀತಿ ಮತ್ತು ಅಭಿಮಾನದ ಒತ್ತಾಯಕ್ಕೆ ಮಣಿದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ಗೆ ಸೇರಿದ್ದು. ಸಿದ್ದರಾಮಯ್ಯ ಎಂಬ ಕಾರಣಕ್ಕೆ ವಿಶೇಷ ಅವಕಾಶ, ರಿಯಾಯಿತಿ ಇಲ್ಲ ಎಂದು ಸಹ ಅವರು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪವರು ಸೇರಿದಂತೆ ಕೋಲಾರ ಜಿಲ್ಲೆಯ ಪಕ್ಷದ ಎಲ್ಲ ನಾಯಕರು ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಲೇ ಇದ್ದರು.. ಎಲ್ಲ ಜಾತಿ, ಧರ್ಮಗಳ ಜನರು ಮತ್ತು ಧಾರ್ಮಿಕ ಗುರುಗಳ ಅಪೇಕ್ಷೆಯೂ ಇದೇ ಆಗಿದೆ. ಕಳೆದ ಬಾರಿ ಇಲ್ಲಿಗೆ ಭೇಟಿ ನೀಡಿದಾಗ ಅವರೆಲ್ಲರ ಜೊತೆ ಮಾತನಾಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೋಲಾರದಿಂದ ನಾನು ಸ್ಪರ್ಧಿಸಿದರೆ, ತಾನು ಸ್ಪರ್ಧಿಸದೆ ಬೆಂಬಲ ನೀಡುತ್ತೇನೆ ಎಂದು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ಹೇಳಿದ್ದಾರೆ. ಅವರ ಅಭಿಮಾನಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವೇ ಇಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ದೂರದ ಕಾರಣಕ್ಕೆ ಬಾದಾಮಿಯಿಂದ ಸ್ಪರ್ಧಿಸುವುದಿಲ್ಲವೆಂದು ತೀರ್ಮಾನಿಸಿದ್ದರೂ ಹೆಲಿಕಾಪ್ಟರ್ ಖರೀದಿ ಮಾಡಿ ಕೊಡುತ್ತೇವೆ, ನೀವು ವಾರಕ್ಕೊಂದು ಬಾರಿ ಬಂದು ಹೋಗಿ ಎಂದು ಆ ಕ್ಷೇತ್ರದ ಜನ ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೋಲಾರದಲ್ಲಿ ಬಿಜೆಪಿ ಪಕ್ಷವಿಲ್ಲ. ಆದರೂ ಬಿಜೆಪಿ ಬಗ್ಗೆ ಜನ ಎಚ್ಚರವಾಗಿರಬೇಕು. ಅವರು ಕೇವಲ ಅಲ್ಪಸಂಖ್ಯಾತರ ವಿರೋಧಿಗಳು ಮಾತ್ರ ಅಲ್ಲ, ರೈತರು, ಮಹಿಳೆಯರು, ಯುವ ಜನರ ವಿರೋಧಿಗಳು. ಜನವರಿ 23ರಂದು ಕೋಲಾರದಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ, ಅದಕ್ಕೆ ಇಡೀ ಜಿಲ್ಲೆಯ ಜನ ಬರಬೇಕು. ಆಗ ನಿಮ್ಮೊಂದಿಗೆ ಕೆಲವು ಮಹತ್ವದ ವಿಷಯಗಳನ್ನು ಹಂಚಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

ದಲಿತ ಚಳವಳಿಯ ಜಿಲ್ಲೆ

ರಾಜ್ಯದಲ್ಲಿ ಅತಿ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲಿ ಕೋಲಾರವೂ ಒಂದು. ಹಾಗಾಗಿಯೇ ಇಲ್ಲಿ ದಲಿತ ಚಳವಳಿ ಗರಿಗೆದರಿತ್ತು. ಹೋಬಳಿಗೊಂದು ವಸತಿ ಶಾಲೆ, ಹಾಸ್ಟೆಲ್ ಬೇಕು ಎಂಬ ಹಕ್ಕೊತ್ತಾಯದೊಂದಿಗೆ ಇಲ್ಲಿ ದೊಡ್ಡ ಹೋರಾಟವೇ ನಡೆದಿದೆ. ಅದರ ಪರಿಣಾಮವಾಗಿ ಜಿಲ್ಲೆಯಲ್ಲಿ ಹಲವಾರು ಶಾಲೆಗಳು- ಹಾಸ್ಟೆಲ್‌ಗಳು ಆರಂಭವಾಗಿವೆ. ’ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ ನಾಗಸಂದ್ರ ಭೂ ಚಳವಳಿಯೆಂದೇ ಇತಿಹಾಸದಲ್ಲಿ ದಾಖಲಾಗಿದೆ.

ಅಹಿಂದ ಚಳವಳಿ

ಅಹಿಂದ ಚಳವಳಿಗೆ ಬುನಾದಿಯಾಗಿದ್ದು ಕೋಲಾರ ಜಿಲ್ಲೆ. 1998ರಲ್ಲಿ ಕೋಲಾರದಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶ ಅದಕ್ಕೆ ಸಾಕ್ಷಿ. ಈಡಿಗ ಸಮುದಾಯಕ್ಕೆ ಸೇರಿದ್ದ ಜಾಲಪ್ಪನವರು ಕೋಲಾರದಲ್ಲಿ ಹಿಂದುಳಿದ ವರ್ಗಗಳ ಟ್ರಸ್ಟ್ ಮುಖಾಂತರ ದೇವರಾಜ ಅರಸು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಸ್ಥಾಪಿಸಿದ್ದರು. ಅದೇ ಕೋಲಾರದಲ್ಲಿ ಅಹಿಂದ ಸಮಾವೇಶ ಸಂಘಟಿತವಾದಾಗ ಅದರ ಪೂರ್ಣ ಹೊಣೆ ಹೊತ್ತು ಜಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯನವರು ಆ ಸಮಾವೇಶ ಉದ್ಘಾಟಿಸಿ ಚಳವಳಿಗೆ ಚಾಲನೆ ನೀಡಿದ್ದರು.

ಸದ್ಯದ ರಾಜಕೀಯ ಸ್ಥಿತಿಗತಿ

2018ರಲ್ಲಿ ಭಾರೀ ಅಂತರದಿಂದ ಗೆದ್ದು 4ನೇ ಬಾರಿ ಶಾಸಕನಾಗಿರುವ ಕೆ.ಶ್ರೀನಿವಾಸಗೌಡರು ಇತ್ತೀಚಿನ ರಾಜ್ಯಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ್ದರು. ಏಕೆ ಹೀಗೆ ಮಾಡಿದಿರಿ ಎಂಬ ಪತ್ರಕರ್ತರ ಪ್ರಶ್ನೆಗೆ “ಬಿಕಾಸ್ ಐ ಲವ್ ಕಾಂಗ್ರೆಸ್” ಎಂಬ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಸದ್ಯ ಕಾಂಗ್ರೆಸ್ ಪಾಳಯದಲ್ಲಿರುವ ಅವರು ತಾನು ಕ್ಷೇತ್ರ ಬಿಟ್ಟುಕೊಡುತ್ತೇನೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಬರಬೇಕೆಂದು ಮನವಿ ಮಾಡಿದ್ದರು.

ಜಾತಿವಾರು ಜನಸಂಖ್ಯೆ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಸಮುದಾಯದ ಮತಗಳು ಮೊದಲನೇ ಸ್ಥಾನದಲ್ಲಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿ 60,000ಕ್ಕೂ ಹೆಚ್ಚು ಮತಗಳಿವೆ ಎನ್ನಲಾಗುತ್ತಿದೆ. ಮುಸ್ಲಿಮರು ಎರಡನೇ ಸ್ಥಾನದಲ್ಲಿದ್ದು ಸುಮಾರು 40,000 ದಷ್ಟು ಮತಗಳಿವೆ. ಒಕ್ಕಲಿಗರು 30,000ದಷ್ಟು ಇದ್ದರೆ ಕುರುಬರು 20,000ಕ್ಕೂ ಹೆಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಉಳಿದ ಇತರ ಸಮುದಾಯಗಳ ಸುಮಾರು 50,000 ದಷ್ಟು ಮತಗಳಿವೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ: ವಿಧಾನಸಭಾ ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...