Homeಮುಖಪುಟಕೋಲಾರ ಕ್ಷೇತ್ರವೆ ಏಕೆ?: ಕಾರಣ ವಿವರಿಸಿದ ಸಿದ್ದರಾಮಯ್ಯ

ಕೋಲಾರ ಕ್ಷೇತ್ರವೆ ಏಕೆ?: ಕಾರಣ ವಿವರಿಸಿದ ಸಿದ್ದರಾಮಯ್ಯ

1998ರಲ್ಲಿ ಕೋಲಾರದಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶವನ್ನು ಸಿದ್ದರಾಮಯ್ಯನವರು ಉದ್ಘಾಟಿಸಿದ್ದರು.

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಹು ಚರ್ಚಿತ ವಿಷಯಕ್ಕೆ ಕೊನೆಗೂ ತೆರೆಬಿದ್ದಿದೆ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಾದಾಮಿ, ಸವದತ್ತಿ, ವರುಣಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರು ಸ್ಪರ್ಧಿಸುತ್ತಾರೆ ಎಂದು ಊಹಾಪೋಹಗಳಿದ್ದವು. ಆ ಮೂರು ಕ್ಷೇತ್ರದ ಟಿಕೆಟ್‌ಗಾಗಿ ಅವರು ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಅವರು ಕೋಲಾರವನ್ನೇ ಏಕೆ ಆಯ್ಕೆ ಮಾಡಿಕೊಂಡರು ಎಂಬುದನ್ನು ಸ್ವತಃ ಸಿದ್ದರಾಮಯ್ಯನವರೆ ವಿವರಿಸಿದ್ದಾರೆ.

“ಕೋಲಾರ ಕ್ಷೇತ್ರದಿಂದ ಆಯ್ಕೆಯಾದರೆ ಪ್ರತೀ ವಾರ ಕ್ಷೇತ್ರಕ್ಕೆ ಬರುತ್ತೇನೆ. ಜನ ಮಧ್ಯವರ್ತಿಗಳಿಲ್ಲದೆ ನನ್ನನ್ನು ಭೇಟಿ ಮಾಡಬಹುದು. ಸಾಮಾನ್ಯ ವ್ಯಕ್ತಿಯೂ ಬಂದು ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಇದು ನಾನು ನಡೆಸಿಕೊಂಡು ಬಂದಿರುವ ಸಂಪ್ರದಾಯ” ಎಂದು ಟ್ವೀಟ್ ಮಾಡುವ ಮೂಲಕ ಕೋಲಾರವೇ ಏಕೆ ಎಂಬುದಕ್ಕೆ ಅವರು ಉತ್ತರಿಸಿದ್ದಾರೆ.

ಕೋಲಾರದ ಜನರ ಪ್ರೀತಿ ಮತ್ತು ಅಭಿಮಾನದ ಒತ್ತಾಯಕ್ಕೆ ಮಣಿದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ಗೆ ಸೇರಿದ್ದು. ಸಿದ್ದರಾಮಯ್ಯ ಎಂಬ ಕಾರಣಕ್ಕೆ ವಿಶೇಷ ಅವಕಾಶ, ರಿಯಾಯಿತಿ ಇಲ್ಲ ಎಂದು ಸಹ ಅವರು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪವರು ಸೇರಿದಂತೆ ಕೋಲಾರ ಜಿಲ್ಲೆಯ ಪಕ್ಷದ ಎಲ್ಲ ನಾಯಕರು ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಲೇ ಇದ್ದರು.. ಎಲ್ಲ ಜಾತಿ, ಧರ್ಮಗಳ ಜನರು ಮತ್ತು ಧಾರ್ಮಿಕ ಗುರುಗಳ ಅಪೇಕ್ಷೆಯೂ ಇದೇ ಆಗಿದೆ. ಕಳೆದ ಬಾರಿ ಇಲ್ಲಿಗೆ ಭೇಟಿ ನೀಡಿದಾಗ ಅವರೆಲ್ಲರ ಜೊತೆ ಮಾತನಾಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೋಲಾರದಿಂದ ನಾನು ಸ್ಪರ್ಧಿಸಿದರೆ, ತಾನು ಸ್ಪರ್ಧಿಸದೆ ಬೆಂಬಲ ನೀಡುತ್ತೇನೆ ಎಂದು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ಹೇಳಿದ್ದಾರೆ. ಅವರ ಅಭಿಮಾನಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವೇ ಇಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ದೂರದ ಕಾರಣಕ್ಕೆ ಬಾದಾಮಿಯಿಂದ ಸ್ಪರ್ಧಿಸುವುದಿಲ್ಲವೆಂದು ತೀರ್ಮಾನಿಸಿದ್ದರೂ ಹೆಲಿಕಾಪ್ಟರ್ ಖರೀದಿ ಮಾಡಿ ಕೊಡುತ್ತೇವೆ, ನೀವು ವಾರಕ್ಕೊಂದು ಬಾರಿ ಬಂದು ಹೋಗಿ ಎಂದು ಆ ಕ್ಷೇತ್ರದ ಜನ ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೋಲಾರದಲ್ಲಿ ಬಿಜೆಪಿ ಪಕ್ಷವಿಲ್ಲ. ಆದರೂ ಬಿಜೆಪಿ ಬಗ್ಗೆ ಜನ ಎಚ್ಚರವಾಗಿರಬೇಕು. ಅವರು ಕೇವಲ ಅಲ್ಪಸಂಖ್ಯಾತರ ವಿರೋಧಿಗಳು ಮಾತ್ರ ಅಲ್ಲ, ರೈತರು, ಮಹಿಳೆಯರು, ಯುವ ಜನರ ವಿರೋಧಿಗಳು. ಜನವರಿ 23ರಂದು ಕೋಲಾರದಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ, ಅದಕ್ಕೆ ಇಡೀ ಜಿಲ್ಲೆಯ ಜನ ಬರಬೇಕು. ಆಗ ನಿಮ್ಮೊಂದಿಗೆ ಕೆಲವು ಮಹತ್ವದ ವಿಷಯಗಳನ್ನು ಹಂಚಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

ದಲಿತ ಚಳವಳಿಯ ಜಿಲ್ಲೆ

ರಾಜ್ಯದಲ್ಲಿ ಅತಿ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲಿ ಕೋಲಾರವೂ ಒಂದು. ಹಾಗಾಗಿಯೇ ಇಲ್ಲಿ ದಲಿತ ಚಳವಳಿ ಗರಿಗೆದರಿತ್ತು. ಹೋಬಳಿಗೊಂದು ವಸತಿ ಶಾಲೆ, ಹಾಸ್ಟೆಲ್ ಬೇಕು ಎಂಬ ಹಕ್ಕೊತ್ತಾಯದೊಂದಿಗೆ ಇಲ್ಲಿ ದೊಡ್ಡ ಹೋರಾಟವೇ ನಡೆದಿದೆ. ಅದರ ಪರಿಣಾಮವಾಗಿ ಜಿಲ್ಲೆಯಲ್ಲಿ ಹಲವಾರು ಶಾಲೆಗಳು- ಹಾಸ್ಟೆಲ್‌ಗಳು ಆರಂಭವಾಗಿವೆ. ’ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ ನಾಗಸಂದ್ರ ಭೂ ಚಳವಳಿಯೆಂದೇ ಇತಿಹಾಸದಲ್ಲಿ ದಾಖಲಾಗಿದೆ.

ಅಹಿಂದ ಚಳವಳಿ

ಅಹಿಂದ ಚಳವಳಿಗೆ ಬುನಾದಿಯಾಗಿದ್ದು ಕೋಲಾರ ಜಿಲ್ಲೆ. 1998ರಲ್ಲಿ ಕೋಲಾರದಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶ ಅದಕ್ಕೆ ಸಾಕ್ಷಿ. ಈಡಿಗ ಸಮುದಾಯಕ್ಕೆ ಸೇರಿದ್ದ ಜಾಲಪ್ಪನವರು ಕೋಲಾರದಲ್ಲಿ ಹಿಂದುಳಿದ ವರ್ಗಗಳ ಟ್ರಸ್ಟ್ ಮುಖಾಂತರ ದೇವರಾಜ ಅರಸು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಸ್ಥಾಪಿಸಿದ್ದರು. ಅದೇ ಕೋಲಾರದಲ್ಲಿ ಅಹಿಂದ ಸಮಾವೇಶ ಸಂಘಟಿತವಾದಾಗ ಅದರ ಪೂರ್ಣ ಹೊಣೆ ಹೊತ್ತು ಜಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯನವರು ಆ ಸಮಾವೇಶ ಉದ್ಘಾಟಿಸಿ ಚಳವಳಿಗೆ ಚಾಲನೆ ನೀಡಿದ್ದರು.

ಸದ್ಯದ ರಾಜಕೀಯ ಸ್ಥಿತಿಗತಿ

2018ರಲ್ಲಿ ಭಾರೀ ಅಂತರದಿಂದ ಗೆದ್ದು 4ನೇ ಬಾರಿ ಶಾಸಕನಾಗಿರುವ ಕೆ.ಶ್ರೀನಿವಾಸಗೌಡರು ಇತ್ತೀಚಿನ ರಾಜ್ಯಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ್ದರು. ಏಕೆ ಹೀಗೆ ಮಾಡಿದಿರಿ ಎಂಬ ಪತ್ರಕರ್ತರ ಪ್ರಶ್ನೆಗೆ “ಬಿಕಾಸ್ ಐ ಲವ್ ಕಾಂಗ್ರೆಸ್” ಎಂಬ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಸದ್ಯ ಕಾಂಗ್ರೆಸ್ ಪಾಳಯದಲ್ಲಿರುವ ಅವರು ತಾನು ಕ್ಷೇತ್ರ ಬಿಟ್ಟುಕೊಡುತ್ತೇನೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಬರಬೇಕೆಂದು ಮನವಿ ಮಾಡಿದ್ದರು.

ಜಾತಿವಾರು ಜನಸಂಖ್ಯೆ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಸಮುದಾಯದ ಮತಗಳು ಮೊದಲನೇ ಸ್ಥಾನದಲ್ಲಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿ 60,000ಕ್ಕೂ ಹೆಚ್ಚು ಮತಗಳಿವೆ ಎನ್ನಲಾಗುತ್ತಿದೆ. ಮುಸ್ಲಿಮರು ಎರಡನೇ ಸ್ಥಾನದಲ್ಲಿದ್ದು ಸುಮಾರು 40,000 ದಷ್ಟು ಮತಗಳಿವೆ. ಒಕ್ಕಲಿಗರು 30,000ದಷ್ಟು ಇದ್ದರೆ ಕುರುಬರು 20,000ಕ್ಕೂ ಹೆಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಉಳಿದ ಇತರ ಸಮುದಾಯಗಳ ಸುಮಾರು 50,000 ದಷ್ಟು ಮತಗಳಿವೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ: ವಿಧಾನಸಭಾ ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...