Homeಮುಖಪುಟಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

- Advertisement -
- Advertisement -

ನೂತನ ಎನ್‌ಡಿಎ ಸರಕಾರದ ಪ್ರಧಾನಿಯಾಗಿ ಮೋದಿ ಮೂರನೇ ಅವಧಿಗೆ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2014 ಮತ್ತು 2019ರಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಮೋದಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಾಗ ಆತಂಕಗೊಂಡಿದ್ದಷ್ಟು ಈ ಬಾರಿ ಮುಸ್ಲಿಂ ಸಮುದಾಯ ಒತ್ತಡದಿಂದಿಲ್ಲ, ಈ ಬಾರಿ ಮುಸ್ಲಿಂ ಸಮುದಾಯವು ಆಶಾಭಾವನೆಯ ಭವಿಷ್ಯದ ನಿರೀಕ್ಷೆಯಲ್ಲಿದೆ.

2014 ಮತ್ತು 2019ರಲ್ಲಿ ಬಿಜೆಪಿ ಸಂಪೂರ್ಣ ಬಹುಮತದ ಸರಕಾರವನ್ನು ಹೊಂದಿತ್ತು, ಎನ್‌ಆರ್‌ಸಿ, ಸಿಎಎ, ತ್ರಿವಳಿ ತಲಾಕ್‌ ನಿಷೇಧ ಸೇರಿದಂತೆ ಮುಸ್ಲಿಂ ವಿರೋಧಿ ನಿಯಮಾವಳಿಗಳು, ಗೋಹತ್ಯೆ ನೆಪದಲ್ಲಿ ಮುಸ್ಲಿಮರ ಟಾರ್ಗೆಟ್‌, ಗುಂಪು ಹತ್ಯೆ, ದೆಹಲಿ ಗಲಭೆ ಸೇರಿದಂತೆ ಘಟನೆಗಳು ಮುಸ್ಲಿಮರಲ್ಲಿ ಅಭದ್ರತೆಯನ್ನು ಸೃಷ್ಟಿಸಿತ್ತು. ಮೀಸಲಾತಿಯಂತಹ ಸಾಂವಿಧಾನಿಕ ಅವಕಾಶಗಳನ್ನು ಮುಸ್ಲಿಮರಿಂದ ಕಸಿದುಕೊಳ್ಳುವ ಬಿಜೆಪಿಯ ಮಾರ್ಗಸೂಚಿಗಳು ಮುಸ್ಲಿಮ್‌ ಸಮುದಾಯದ ಆತಂಕಕ್ಕೆ ಕಾರಣವಾಗಿತ್ತು.

ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಪೋಟೋ ಒಳಗೊಂಡಿರುವ ಇನ್ಸ್ಟಾಗ್ರಾಂ ಪೋಸ್ಟ್  ಹಂಚಿಕೊಂಡಿದ್ದಕ್ಕಾಗಿ ಕೊಲ್ಲಾಪುರದಲ್ಲಿ ಅಯಾಜ್ ಶೇಖ್ ಎಂಬಾತನ 17 ವರ್ಷದ ಮಗ ಸೇರಿ ಐವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಅಯಾಜ್ ಶೇಖ್ ತನ್ನ 17 ವರ್ಷದ ಮಗನನ್ನು ರಕ್ಷಣೆ ಮಾಡಬೇಕೆಂದು ವಕೀಲರು, ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಓಡಾಡಿದ್ದರಿಂದ ತನ್ನ ಜೀವನಾಧಾರವಾಗಿದ್ದ ಮರಗೆಲಸಕ್ಕೆ ಕೂಡ ಹೋಗಿಲ್ಲ.

ಟಿಪ್ಪು ಸುಲ್ತಾನ್ ಅವರನ್ನು ಮೊಘಲ್ ದೊರೆ ಔರಂಗಜೇಬ್ ಎಂದು ತಪ್ಪಾಗಿ ಭಾವಿಸಿದ ಹಿಂದುತ್ವ ಗುಂಪುಗಳು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಶೇಖ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ವಿಚಾರಕ್ಕೆ ಜೂನ್ 7, 2023ರಂದು ಕೊಲ್ಹಾಪುರದಲ್ಲಿ ಗಲಭೆಗಳು ಪ್ರಾರಂಭವಾದವು, 80 ವಾಹನಗಳು ಮತ್ತು ಅಪಾರ ಮೌಲ್ಯದ ಆಸ್ತಿ ಪಾಸ್ತಿಗಳು ಹಾನಿಯಾಗಿದ್ದವು.

ಅಯಾಜ್ ಶೇಖ್ ಈ ಬಗ್ಗೆ ಮಾತನಾಡುತ್ತಾ, ತನ್ನ ಮಗನ ಬಿಡುಗಡೆ ಬಳಿಕವೂ ನಾವು ತಿಂಗಳುಗಳವರೆಗೆ ಅವನ ಸುರಕ್ಷತೆಯ ಬಗ್ಗೆ ಭಯಪಟ್ಟಿದ್ದೆವು. ಹೆಚ್ಚಿನ ಗಲಭೆಕೋರರು, ನೆರೆಹೊರೆಯ ನಿವಾಸಿಗಳು. ಈ ರೀತಿ ಹಿಂದೆಂದೂ ಸಂಭವಿಸಿರಲಿಲ್ಲ ಮತ್ತು ಅದು ಮತ್ತೆ ಪುನರಾವರ್ತನೆಯಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಮೇ 7ರಂದು ಮತ ಚಲಾಯಿಸಲು ಹೋದಾಗ, ಶಾಂತಿಯನ್ನು ಖಾತ್ರಿಪಡಿಸುವ ರಾಜಕೀಯ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಕಾಂಗ್ರೆಸ್ ಅಭ್ಯರ್ಥಿ ಛತ್ರಪತಿ ಶಾಹು ಶಾಹಜಿ ಪರ ಮತ ಚಲಾಯಿಸಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಛತ್ರಪತಿ ಶಾಹು ಶಾಹಜಿ ಅವರು 76ನೇ ವಯಸ್ಸಿನಲ್ಲಿ ಸಂವಿಧಾನವನ್ನು ರಕ್ಷಿಸಲು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುವ ಆಯ್ಕೆ ಮಾಡಿಕೊಂಡೆ ಎಂದು ಮತದಾರರಿಗೆ ಹೇಳಿದ್ದಾರೆ.

ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬಿದ್ದಾಗ, ಆಡಳಿತಾರೂಢ ಬಿಜೆಪಿಗೆ ಬಹುಮತದ ಕೊರತೆ ಎದುರಾಗಿದೆ. 303 ಸ್ಥಾನಗಳನ್ನು ಹೊಂದಿದ್ದ ಬಿಜೆಪಿಯ ಸ್ಥಾನಗಳು ಲೋಸಭೆಯಲ್ಲಿ 240ಕ್ಕೆ ಕುಸಿಯಿತು.ಕಳೆದ 10 ವರ್ಷಗಳಲ್ಲಿ ಧ್ವಂಸ, ದ್ವೇಷಪೂರಿತ ಭಾಷಣ ಮತ್ತು ತಾರತಮ್ಯವನ್ನು ಎದುರಿಸಿದ ಹಲವಾರು ಮುಸ್ಲಿಂ ಮತದಾರರಿಗೆ ಈ ತೀರ್ಪು ಸಮಾಧಾನ ತಂದಿದೆ. ಚುನಾವಣಾ ಪ್ರಚಾರದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಉಲ್ಲೇಖಿಸಿದ್ದರು. ಇದು ಮುಸ್ಲಿಮರಲ್ಲಿ ಭವಿಷ್ಯದ ಬಗ್ಗೆ ಆತಂಕವನ್ನುಂಟು ಮಾಡಿತ್ತು.

ಪಶ್ಚಿಮ ಅಸ್ಸಾಂನ ಧುಬ್ರಿಯ ದೂರದ ಹಳ್ಳಿಯೊಂದರ 40 ವರ್ಷದ ಫಾರ್ಮಸಿಸ್ಟ್ ಸೈದುರ್ ರೆಹಮಾನ್ ಮುಲ್ಲಾ ಮಾತನಾಡುತ್ತಾ, ರಾಜ್ಯದಲ್ಲಿ ಮುಸ್ಲಿಮರನ್ನು ಅಮಾನವೀಯಗೊಳಿಸಿದೆ. ಬಿಜೆಪಿಯು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ, ಅವರನ್ನು ಅವರ ಮನೆಗಳಿಂದ ಹೊರಹಾಕುತ್ತಿದೆ, ಬಾಲ್ಯವಿವಾಹಕ್ಕಾಗಿ ಅವರನ್ನು ಬಂಧಿಸಿ ಜೈಲಿಗೆ ಹಾಕುತ್ತಿದೆ. ಮದರಸಾಗಳನ್ನು ಮುಚ್ಚಲಾಯಿತು ಮತ್ತು ಮಸೀದಿಗಳನ್ನು ಕೆಡವಲಾಯಿತು. ಆದರೆ ಅಂತಹ ದ್ವೇಷ ಮತ್ತು ಪೂರ್ವಾಗ್ರಹದಿಂದ ದೇಶವನ್ನು ಆಳಲು ಸಾಧ್ಯವಿಲ್ಲ ಎಂದು ಫಲಿತಾಂಶಗಳು ತೋರಿಸುತ್ತವೆ.

ಅಸ್ಸಾಂನಲ್ಲಿ ಸರ್ಕಾರ ಬದಲಾವಣೆಯಾಗದ ಹೊರತು ಬಂಗಾಳಿ ಮೂಲದ ಮುಸ್ಲಿಮರಿಗೆ ನೆಮ್ಮದಿಯಿಲ್ಲ. 2021ರಿಂದ, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಆಡಳಿತವು ರಾಜ್ಯದಲ್ಲಿ ಮುಸ್ಲಿಮರನ್ನು, ವಿಶೇಷವಾಗಿ ಬಂಗಾಳಿ ಮೂಲದವರನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ಮಾತನಾಡಿದ 38 ವರ್ಷದ ಮೊಹಮ್ಮದ್ ಸಲೀಂ, ಈ ತೀರ್ಪು ಮುಸ್ಲಿಮರ ವಿರುದ್ಧದ ತನ್ನ ನಿಲುವನ್ನು ಮೃದುಗೊಳಿಸಲು ಬಿಜೆಪಿಯನ್ನು ಒತ್ತಾಯಿಸುತ್ತದೆ. ಎನ್‌ಡಿಎ ಸರ್ಕಾರ ರಚಿಸಿದರೂ ಪೊಲೀಸರ ದೌರ್ಜನ್ಯ ಕಡಿಮೆಯಾಗಲಿದೆ. ಬಿಜೆಪಿಗೆ ತನ್ನಿಚ್ಛೆಯಂತೆ ನಡೆಯುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಮುಸ್ಲಿಮರ ಪ್ರಾತಿನಿಧ್ಯದ ಬಗ್ಗೆ ಸಲೀಂ ಭರವಸೆ ಇಟ್ಟಿದ್ದಾರೆ. ಸಲೀಂ ಮತ ಚಲಾಯಿಸಿದ ಸಹರಾನ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಇಮ್ರಾನ್ ಮಸೂದ್ 64,000 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಬಾರ್ಪೇಟಾ ಮೂಲದ ಕಾನೂನು ಸಂಶೋಧಕ ಶಹೀದ್ ಅಹ್ಮದ್ ಮಾತನಾಡುತ್ತಾ,  ಪ್ರತಿಪಕ್ಷಗಳ ಉತ್ತಮ ಪ್ರದರ್ಶನವು ಪ್ರಜಾಪ್ರಭುತ್ವದ ಬಗ್ಗೆ ಭರವಸೆ ಮೂಡಿಸಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಆಡಳಿತ ಪಕ್ಷಕ್ಕೆ ಒಲವು ತೋರಲು ಅತ್ಯುತ್ತಮವಾಗಿ ಪ್ರಯತ್ನಿಸಿದರೂ, ಜನರು ವಿರೋಧಿಸಿದ್ದಾರೆ ಮತ್ತು ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದ್ದಾರೆ ಎಂದು ಅಹ್ಮದ್ ಹೇಳಿದ್ದಾರೆ.

ಇದನ್ನು ಓದಿ: ಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gouri group is very good news channel nanu tumba ista paduttene real hedtira matte no political heege nija wanna munde idi so good work good job I really respect 👍👏👏

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...