Homeಮುಖಪುಟಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

- Advertisement -
- Advertisement -

ನೂತನ ಎನ್‌ಡಿಎ ಸರಕಾರದ ಪ್ರಧಾನಿಯಾಗಿ ಮೋದಿ ಮೂರನೇ ಅವಧಿಗೆ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2014 ಮತ್ತು 2019ರಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಮೋದಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಾಗ ಆತಂಕಗೊಂಡಿದ್ದಷ್ಟು ಈ ಬಾರಿ ಮುಸ್ಲಿಂ ಸಮುದಾಯ ಒತ್ತಡದಿಂದಿಲ್ಲ, ಈ ಬಾರಿ ಮುಸ್ಲಿಂ ಸಮುದಾಯವು ಆಶಾಭಾವನೆಯ ಭವಿಷ್ಯದ ನಿರೀಕ್ಷೆಯಲ್ಲಿದೆ.

2014 ಮತ್ತು 2019ರಲ್ಲಿ ಬಿಜೆಪಿ ಸಂಪೂರ್ಣ ಬಹುಮತದ ಸರಕಾರವನ್ನು ಹೊಂದಿತ್ತು, ಎನ್‌ಆರ್‌ಸಿ, ಸಿಎಎ, ತ್ರಿವಳಿ ತಲಾಕ್‌ ನಿಷೇಧ ಸೇರಿದಂತೆ ಮುಸ್ಲಿಂ ವಿರೋಧಿ ನಿಯಮಾವಳಿಗಳು, ಗೋಹತ್ಯೆ ನೆಪದಲ್ಲಿ ಮುಸ್ಲಿಮರ ಟಾರ್ಗೆಟ್‌, ಗುಂಪು ಹತ್ಯೆ, ದೆಹಲಿ ಗಲಭೆ ಸೇರಿದಂತೆ ಘಟನೆಗಳು ಮುಸ್ಲಿಮರಲ್ಲಿ ಅಭದ್ರತೆಯನ್ನು ಸೃಷ್ಟಿಸಿತ್ತು. ಮೀಸಲಾತಿಯಂತಹ ಸಾಂವಿಧಾನಿಕ ಅವಕಾಶಗಳನ್ನು ಮುಸ್ಲಿಮರಿಂದ ಕಸಿದುಕೊಳ್ಳುವ ಬಿಜೆಪಿಯ ಮಾರ್ಗಸೂಚಿಗಳು ಮುಸ್ಲಿಮ್‌ ಸಮುದಾಯದ ಆತಂಕಕ್ಕೆ ಕಾರಣವಾಗಿತ್ತು.

ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಪೋಟೋ ಒಳಗೊಂಡಿರುವ ಇನ್ಸ್ಟಾಗ್ರಾಂ ಪೋಸ್ಟ್  ಹಂಚಿಕೊಂಡಿದ್ದಕ್ಕಾಗಿ ಕೊಲ್ಲಾಪುರದಲ್ಲಿ ಅಯಾಜ್ ಶೇಖ್ ಎಂಬಾತನ 17 ವರ್ಷದ ಮಗ ಸೇರಿ ಐವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಅಯಾಜ್ ಶೇಖ್ ತನ್ನ 17 ವರ್ಷದ ಮಗನನ್ನು ರಕ್ಷಣೆ ಮಾಡಬೇಕೆಂದು ವಕೀಲರು, ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಓಡಾಡಿದ್ದರಿಂದ ತನ್ನ ಜೀವನಾಧಾರವಾಗಿದ್ದ ಮರಗೆಲಸಕ್ಕೆ ಕೂಡ ಹೋಗಿಲ್ಲ.

ಟಿಪ್ಪು ಸುಲ್ತಾನ್ ಅವರನ್ನು ಮೊಘಲ್ ದೊರೆ ಔರಂಗಜೇಬ್ ಎಂದು ತಪ್ಪಾಗಿ ಭಾವಿಸಿದ ಹಿಂದುತ್ವ ಗುಂಪುಗಳು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಶೇಖ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ವಿಚಾರಕ್ಕೆ ಜೂನ್ 7, 2023ರಂದು ಕೊಲ್ಹಾಪುರದಲ್ಲಿ ಗಲಭೆಗಳು ಪ್ರಾರಂಭವಾದವು, 80 ವಾಹನಗಳು ಮತ್ತು ಅಪಾರ ಮೌಲ್ಯದ ಆಸ್ತಿ ಪಾಸ್ತಿಗಳು ಹಾನಿಯಾಗಿದ್ದವು.

ಅಯಾಜ್ ಶೇಖ್ ಈ ಬಗ್ಗೆ ಮಾತನಾಡುತ್ತಾ, ತನ್ನ ಮಗನ ಬಿಡುಗಡೆ ಬಳಿಕವೂ ನಾವು ತಿಂಗಳುಗಳವರೆಗೆ ಅವನ ಸುರಕ್ಷತೆಯ ಬಗ್ಗೆ ಭಯಪಟ್ಟಿದ್ದೆವು. ಹೆಚ್ಚಿನ ಗಲಭೆಕೋರರು, ನೆರೆಹೊರೆಯ ನಿವಾಸಿಗಳು. ಈ ರೀತಿ ಹಿಂದೆಂದೂ ಸಂಭವಿಸಿರಲಿಲ್ಲ ಮತ್ತು ಅದು ಮತ್ತೆ ಪುನರಾವರ್ತನೆಯಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಮೇ 7ರಂದು ಮತ ಚಲಾಯಿಸಲು ಹೋದಾಗ, ಶಾಂತಿಯನ್ನು ಖಾತ್ರಿಪಡಿಸುವ ರಾಜಕೀಯ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಕಾಂಗ್ರೆಸ್ ಅಭ್ಯರ್ಥಿ ಛತ್ರಪತಿ ಶಾಹು ಶಾಹಜಿ ಪರ ಮತ ಚಲಾಯಿಸಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಛತ್ರಪತಿ ಶಾಹು ಶಾಹಜಿ ಅವರು 76ನೇ ವಯಸ್ಸಿನಲ್ಲಿ ಸಂವಿಧಾನವನ್ನು ರಕ್ಷಿಸಲು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುವ ಆಯ್ಕೆ ಮಾಡಿಕೊಂಡೆ ಎಂದು ಮತದಾರರಿಗೆ ಹೇಳಿದ್ದಾರೆ.

ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬಿದ್ದಾಗ, ಆಡಳಿತಾರೂಢ ಬಿಜೆಪಿಗೆ ಬಹುಮತದ ಕೊರತೆ ಎದುರಾಗಿದೆ. 303 ಸ್ಥಾನಗಳನ್ನು ಹೊಂದಿದ್ದ ಬಿಜೆಪಿಯ ಸ್ಥಾನಗಳು ಲೋಸಭೆಯಲ್ಲಿ 240ಕ್ಕೆ ಕುಸಿಯಿತು.ಕಳೆದ 10 ವರ್ಷಗಳಲ್ಲಿ ಧ್ವಂಸ, ದ್ವೇಷಪೂರಿತ ಭಾಷಣ ಮತ್ತು ತಾರತಮ್ಯವನ್ನು ಎದುರಿಸಿದ ಹಲವಾರು ಮುಸ್ಲಿಂ ಮತದಾರರಿಗೆ ಈ ತೀರ್ಪು ಸಮಾಧಾನ ತಂದಿದೆ. ಚುನಾವಣಾ ಪ್ರಚಾರದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಉಲ್ಲೇಖಿಸಿದ್ದರು. ಇದು ಮುಸ್ಲಿಮರಲ್ಲಿ ಭವಿಷ್ಯದ ಬಗ್ಗೆ ಆತಂಕವನ್ನುಂಟು ಮಾಡಿತ್ತು.

ಪಶ್ಚಿಮ ಅಸ್ಸಾಂನ ಧುಬ್ರಿಯ ದೂರದ ಹಳ್ಳಿಯೊಂದರ 40 ವರ್ಷದ ಫಾರ್ಮಸಿಸ್ಟ್ ಸೈದುರ್ ರೆಹಮಾನ್ ಮುಲ್ಲಾ ಮಾತನಾಡುತ್ತಾ, ರಾಜ್ಯದಲ್ಲಿ ಮುಸ್ಲಿಮರನ್ನು ಅಮಾನವೀಯಗೊಳಿಸಿದೆ. ಬಿಜೆಪಿಯು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ, ಅವರನ್ನು ಅವರ ಮನೆಗಳಿಂದ ಹೊರಹಾಕುತ್ತಿದೆ, ಬಾಲ್ಯವಿವಾಹಕ್ಕಾಗಿ ಅವರನ್ನು ಬಂಧಿಸಿ ಜೈಲಿಗೆ ಹಾಕುತ್ತಿದೆ. ಮದರಸಾಗಳನ್ನು ಮುಚ್ಚಲಾಯಿತು ಮತ್ತು ಮಸೀದಿಗಳನ್ನು ಕೆಡವಲಾಯಿತು. ಆದರೆ ಅಂತಹ ದ್ವೇಷ ಮತ್ತು ಪೂರ್ವಾಗ್ರಹದಿಂದ ದೇಶವನ್ನು ಆಳಲು ಸಾಧ್ಯವಿಲ್ಲ ಎಂದು ಫಲಿತಾಂಶಗಳು ತೋರಿಸುತ್ತವೆ.

ಅಸ್ಸಾಂನಲ್ಲಿ ಸರ್ಕಾರ ಬದಲಾವಣೆಯಾಗದ ಹೊರತು ಬಂಗಾಳಿ ಮೂಲದ ಮುಸ್ಲಿಮರಿಗೆ ನೆಮ್ಮದಿಯಿಲ್ಲ. 2021ರಿಂದ, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಆಡಳಿತವು ರಾಜ್ಯದಲ್ಲಿ ಮುಸ್ಲಿಮರನ್ನು, ವಿಶೇಷವಾಗಿ ಬಂಗಾಳಿ ಮೂಲದವರನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ಮಾತನಾಡಿದ 38 ವರ್ಷದ ಮೊಹಮ್ಮದ್ ಸಲೀಂ, ಈ ತೀರ್ಪು ಮುಸ್ಲಿಮರ ವಿರುದ್ಧದ ತನ್ನ ನಿಲುವನ್ನು ಮೃದುಗೊಳಿಸಲು ಬಿಜೆಪಿಯನ್ನು ಒತ್ತಾಯಿಸುತ್ತದೆ. ಎನ್‌ಡಿಎ ಸರ್ಕಾರ ರಚಿಸಿದರೂ ಪೊಲೀಸರ ದೌರ್ಜನ್ಯ ಕಡಿಮೆಯಾಗಲಿದೆ. ಬಿಜೆಪಿಗೆ ತನ್ನಿಚ್ಛೆಯಂತೆ ನಡೆಯುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಮುಸ್ಲಿಮರ ಪ್ರಾತಿನಿಧ್ಯದ ಬಗ್ಗೆ ಸಲೀಂ ಭರವಸೆ ಇಟ್ಟಿದ್ದಾರೆ. ಸಲೀಂ ಮತ ಚಲಾಯಿಸಿದ ಸಹರಾನ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಇಮ್ರಾನ್ ಮಸೂದ್ 64,000 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಬಾರ್ಪೇಟಾ ಮೂಲದ ಕಾನೂನು ಸಂಶೋಧಕ ಶಹೀದ್ ಅಹ್ಮದ್ ಮಾತನಾಡುತ್ತಾ,  ಪ್ರತಿಪಕ್ಷಗಳ ಉತ್ತಮ ಪ್ರದರ್ಶನವು ಪ್ರಜಾಪ್ರಭುತ್ವದ ಬಗ್ಗೆ ಭರವಸೆ ಮೂಡಿಸಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಆಡಳಿತ ಪಕ್ಷಕ್ಕೆ ಒಲವು ತೋರಲು ಅತ್ಯುತ್ತಮವಾಗಿ ಪ್ರಯತ್ನಿಸಿದರೂ, ಜನರು ವಿರೋಧಿಸಿದ್ದಾರೆ ಮತ್ತು ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದ್ದಾರೆ ಎಂದು ಅಹ್ಮದ್ ಹೇಳಿದ್ದಾರೆ.

ಇದನ್ನು ಓದಿ: ಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gouri group is very good news channel nanu tumba ista paduttene real hedtira matte no political heege nija wanna munde idi so good work good job I really respect 👍👏👏

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...