Homeಮುಖಪುಟಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

- Advertisement -
- Advertisement -

ನೂತನ ಎನ್‌ಡಿಎ ಸರಕಾರದ ಪ್ರಧಾನಿಯಾಗಿ ಮೋದಿ ಮೂರನೇ ಅವಧಿಗೆ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2014 ಮತ್ತು 2019ರಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಮೋದಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಾಗ ಆತಂಕಗೊಂಡಿದ್ದಷ್ಟು ಈ ಬಾರಿ ಮುಸ್ಲಿಂ ಸಮುದಾಯ ಒತ್ತಡದಿಂದಿಲ್ಲ, ಈ ಬಾರಿ ಮುಸ್ಲಿಂ ಸಮುದಾಯವು ಆಶಾಭಾವನೆಯ ಭವಿಷ್ಯದ ನಿರೀಕ್ಷೆಯಲ್ಲಿದೆ.

2014 ಮತ್ತು 2019ರಲ್ಲಿ ಬಿಜೆಪಿ ಸಂಪೂರ್ಣ ಬಹುಮತದ ಸರಕಾರವನ್ನು ಹೊಂದಿತ್ತು, ಎನ್‌ಆರ್‌ಸಿ, ಸಿಎಎ, ತ್ರಿವಳಿ ತಲಾಕ್‌ ನಿಷೇಧ ಸೇರಿದಂತೆ ಮುಸ್ಲಿಂ ವಿರೋಧಿ ನಿಯಮಾವಳಿಗಳು, ಗೋಹತ್ಯೆ ನೆಪದಲ್ಲಿ ಮುಸ್ಲಿಮರ ಟಾರ್ಗೆಟ್‌, ಗುಂಪು ಹತ್ಯೆ, ದೆಹಲಿ ಗಲಭೆ ಸೇರಿದಂತೆ ಘಟನೆಗಳು ಮುಸ್ಲಿಮರಲ್ಲಿ ಅಭದ್ರತೆಯನ್ನು ಸೃಷ್ಟಿಸಿತ್ತು. ಮೀಸಲಾತಿಯಂತಹ ಸಾಂವಿಧಾನಿಕ ಅವಕಾಶಗಳನ್ನು ಮುಸ್ಲಿಮರಿಂದ ಕಸಿದುಕೊಳ್ಳುವ ಬಿಜೆಪಿಯ ಮಾರ್ಗಸೂಚಿಗಳು ಮುಸ್ಲಿಮ್‌ ಸಮುದಾಯದ ಆತಂಕಕ್ಕೆ ಕಾರಣವಾಗಿತ್ತು.

ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಪೋಟೋ ಒಳಗೊಂಡಿರುವ ಇನ್ಸ್ಟಾಗ್ರಾಂ ಪೋಸ್ಟ್  ಹಂಚಿಕೊಂಡಿದ್ದಕ್ಕಾಗಿ ಕೊಲ್ಲಾಪುರದಲ್ಲಿ ಅಯಾಜ್ ಶೇಖ್ ಎಂಬಾತನ 17 ವರ್ಷದ ಮಗ ಸೇರಿ ಐವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಅಯಾಜ್ ಶೇಖ್ ತನ್ನ 17 ವರ್ಷದ ಮಗನನ್ನು ರಕ್ಷಣೆ ಮಾಡಬೇಕೆಂದು ವಕೀಲರು, ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಓಡಾಡಿದ್ದರಿಂದ ತನ್ನ ಜೀವನಾಧಾರವಾಗಿದ್ದ ಮರಗೆಲಸಕ್ಕೆ ಕೂಡ ಹೋಗಿಲ್ಲ.

ಟಿಪ್ಪು ಸುಲ್ತಾನ್ ಅವರನ್ನು ಮೊಘಲ್ ದೊರೆ ಔರಂಗಜೇಬ್ ಎಂದು ತಪ್ಪಾಗಿ ಭಾವಿಸಿದ ಹಿಂದುತ್ವ ಗುಂಪುಗಳು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಶೇಖ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ವಿಚಾರಕ್ಕೆ ಜೂನ್ 7, 2023ರಂದು ಕೊಲ್ಹಾಪುರದಲ್ಲಿ ಗಲಭೆಗಳು ಪ್ರಾರಂಭವಾದವು, 80 ವಾಹನಗಳು ಮತ್ತು ಅಪಾರ ಮೌಲ್ಯದ ಆಸ್ತಿ ಪಾಸ್ತಿಗಳು ಹಾನಿಯಾಗಿದ್ದವು.

ಅಯಾಜ್ ಶೇಖ್ ಈ ಬಗ್ಗೆ ಮಾತನಾಡುತ್ತಾ, ತನ್ನ ಮಗನ ಬಿಡುಗಡೆ ಬಳಿಕವೂ ನಾವು ತಿಂಗಳುಗಳವರೆಗೆ ಅವನ ಸುರಕ್ಷತೆಯ ಬಗ್ಗೆ ಭಯಪಟ್ಟಿದ್ದೆವು. ಹೆಚ್ಚಿನ ಗಲಭೆಕೋರರು, ನೆರೆಹೊರೆಯ ನಿವಾಸಿಗಳು. ಈ ರೀತಿ ಹಿಂದೆಂದೂ ಸಂಭವಿಸಿರಲಿಲ್ಲ ಮತ್ತು ಅದು ಮತ್ತೆ ಪುನರಾವರ್ತನೆಯಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಮೇ 7ರಂದು ಮತ ಚಲಾಯಿಸಲು ಹೋದಾಗ, ಶಾಂತಿಯನ್ನು ಖಾತ್ರಿಪಡಿಸುವ ರಾಜಕೀಯ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಕಾಂಗ್ರೆಸ್ ಅಭ್ಯರ್ಥಿ ಛತ್ರಪತಿ ಶಾಹು ಶಾಹಜಿ ಪರ ಮತ ಚಲಾಯಿಸಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಛತ್ರಪತಿ ಶಾಹು ಶಾಹಜಿ ಅವರು 76ನೇ ವಯಸ್ಸಿನಲ್ಲಿ ಸಂವಿಧಾನವನ್ನು ರಕ್ಷಿಸಲು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುವ ಆಯ್ಕೆ ಮಾಡಿಕೊಂಡೆ ಎಂದು ಮತದಾರರಿಗೆ ಹೇಳಿದ್ದಾರೆ.

ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬಿದ್ದಾಗ, ಆಡಳಿತಾರೂಢ ಬಿಜೆಪಿಗೆ ಬಹುಮತದ ಕೊರತೆ ಎದುರಾಗಿದೆ. 303 ಸ್ಥಾನಗಳನ್ನು ಹೊಂದಿದ್ದ ಬಿಜೆಪಿಯ ಸ್ಥಾನಗಳು ಲೋಸಭೆಯಲ್ಲಿ 240ಕ್ಕೆ ಕುಸಿಯಿತು.ಕಳೆದ 10 ವರ್ಷಗಳಲ್ಲಿ ಧ್ವಂಸ, ದ್ವೇಷಪೂರಿತ ಭಾಷಣ ಮತ್ತು ತಾರತಮ್ಯವನ್ನು ಎದುರಿಸಿದ ಹಲವಾರು ಮುಸ್ಲಿಂ ಮತದಾರರಿಗೆ ಈ ತೀರ್ಪು ಸಮಾಧಾನ ತಂದಿದೆ. ಚುನಾವಣಾ ಪ್ರಚಾರದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಉಲ್ಲೇಖಿಸಿದ್ದರು. ಇದು ಮುಸ್ಲಿಮರಲ್ಲಿ ಭವಿಷ್ಯದ ಬಗ್ಗೆ ಆತಂಕವನ್ನುಂಟು ಮಾಡಿತ್ತು.

ಪಶ್ಚಿಮ ಅಸ್ಸಾಂನ ಧುಬ್ರಿಯ ದೂರದ ಹಳ್ಳಿಯೊಂದರ 40 ವರ್ಷದ ಫಾರ್ಮಸಿಸ್ಟ್ ಸೈದುರ್ ರೆಹಮಾನ್ ಮುಲ್ಲಾ ಮಾತನಾಡುತ್ತಾ, ರಾಜ್ಯದಲ್ಲಿ ಮುಸ್ಲಿಮರನ್ನು ಅಮಾನವೀಯಗೊಳಿಸಿದೆ. ಬಿಜೆಪಿಯು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ, ಅವರನ್ನು ಅವರ ಮನೆಗಳಿಂದ ಹೊರಹಾಕುತ್ತಿದೆ, ಬಾಲ್ಯವಿವಾಹಕ್ಕಾಗಿ ಅವರನ್ನು ಬಂಧಿಸಿ ಜೈಲಿಗೆ ಹಾಕುತ್ತಿದೆ. ಮದರಸಾಗಳನ್ನು ಮುಚ್ಚಲಾಯಿತು ಮತ್ತು ಮಸೀದಿಗಳನ್ನು ಕೆಡವಲಾಯಿತು. ಆದರೆ ಅಂತಹ ದ್ವೇಷ ಮತ್ತು ಪೂರ್ವಾಗ್ರಹದಿಂದ ದೇಶವನ್ನು ಆಳಲು ಸಾಧ್ಯವಿಲ್ಲ ಎಂದು ಫಲಿತಾಂಶಗಳು ತೋರಿಸುತ್ತವೆ.

ಅಸ್ಸಾಂನಲ್ಲಿ ಸರ್ಕಾರ ಬದಲಾವಣೆಯಾಗದ ಹೊರತು ಬಂಗಾಳಿ ಮೂಲದ ಮುಸ್ಲಿಮರಿಗೆ ನೆಮ್ಮದಿಯಿಲ್ಲ. 2021ರಿಂದ, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಆಡಳಿತವು ರಾಜ್ಯದಲ್ಲಿ ಮುಸ್ಲಿಮರನ್ನು, ವಿಶೇಷವಾಗಿ ಬಂಗಾಳಿ ಮೂಲದವರನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ಮಾತನಾಡಿದ 38 ವರ್ಷದ ಮೊಹಮ್ಮದ್ ಸಲೀಂ, ಈ ತೀರ್ಪು ಮುಸ್ಲಿಮರ ವಿರುದ್ಧದ ತನ್ನ ನಿಲುವನ್ನು ಮೃದುಗೊಳಿಸಲು ಬಿಜೆಪಿಯನ್ನು ಒತ್ತಾಯಿಸುತ್ತದೆ. ಎನ್‌ಡಿಎ ಸರ್ಕಾರ ರಚಿಸಿದರೂ ಪೊಲೀಸರ ದೌರ್ಜನ್ಯ ಕಡಿಮೆಯಾಗಲಿದೆ. ಬಿಜೆಪಿಗೆ ತನ್ನಿಚ್ಛೆಯಂತೆ ನಡೆಯುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಮುಸ್ಲಿಮರ ಪ್ರಾತಿನಿಧ್ಯದ ಬಗ್ಗೆ ಸಲೀಂ ಭರವಸೆ ಇಟ್ಟಿದ್ದಾರೆ. ಸಲೀಂ ಮತ ಚಲಾಯಿಸಿದ ಸಹರಾನ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಇಮ್ರಾನ್ ಮಸೂದ್ 64,000 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಬಾರ್ಪೇಟಾ ಮೂಲದ ಕಾನೂನು ಸಂಶೋಧಕ ಶಹೀದ್ ಅಹ್ಮದ್ ಮಾತನಾಡುತ್ತಾ,  ಪ್ರತಿಪಕ್ಷಗಳ ಉತ್ತಮ ಪ್ರದರ್ಶನವು ಪ್ರಜಾಪ್ರಭುತ್ವದ ಬಗ್ಗೆ ಭರವಸೆ ಮೂಡಿಸಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಆಡಳಿತ ಪಕ್ಷಕ್ಕೆ ಒಲವು ತೋರಲು ಅತ್ಯುತ್ತಮವಾಗಿ ಪ್ರಯತ್ನಿಸಿದರೂ, ಜನರು ವಿರೋಧಿಸಿದ್ದಾರೆ ಮತ್ತು ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದ್ದಾರೆ ಎಂದು ಅಹ್ಮದ್ ಹೇಳಿದ್ದಾರೆ.

ಇದನ್ನು ಓದಿ: ಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gouri group is very good news channel nanu tumba ista paduttene real hedtira matte no political heege nija wanna munde idi so good work good job I really respect 👍👏👏

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...