Homeಮುಖಪುಟಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

- Advertisement -
- Advertisement -

ನೂತನ ಎನ್‌ಡಿಎ ಸರಕಾರದ ಪ್ರಧಾನಿಯಾಗಿ ಮೋದಿ ಮೂರನೇ ಅವಧಿಗೆ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2014 ಮತ್ತು 2019ರಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಮೋದಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಾಗ ಆತಂಕಗೊಂಡಿದ್ದಷ್ಟು ಈ ಬಾರಿ ಮುಸ್ಲಿಂ ಸಮುದಾಯ ಒತ್ತಡದಿಂದಿಲ್ಲ, ಈ ಬಾರಿ ಮುಸ್ಲಿಂ ಸಮುದಾಯವು ಆಶಾಭಾವನೆಯ ಭವಿಷ್ಯದ ನಿರೀಕ್ಷೆಯಲ್ಲಿದೆ.

2014 ಮತ್ತು 2019ರಲ್ಲಿ ಬಿಜೆಪಿ ಸಂಪೂರ್ಣ ಬಹುಮತದ ಸರಕಾರವನ್ನು ಹೊಂದಿತ್ತು, ಎನ್‌ಆರ್‌ಸಿ, ಸಿಎಎ, ತ್ರಿವಳಿ ತಲಾಕ್‌ ನಿಷೇಧ ಸೇರಿದಂತೆ ಮುಸ್ಲಿಂ ವಿರೋಧಿ ನಿಯಮಾವಳಿಗಳು, ಗೋಹತ್ಯೆ ನೆಪದಲ್ಲಿ ಮುಸ್ಲಿಮರ ಟಾರ್ಗೆಟ್‌, ಗುಂಪು ಹತ್ಯೆ, ದೆಹಲಿ ಗಲಭೆ ಸೇರಿದಂತೆ ಘಟನೆಗಳು ಮುಸ್ಲಿಮರಲ್ಲಿ ಅಭದ್ರತೆಯನ್ನು ಸೃಷ್ಟಿಸಿತ್ತು. ಮೀಸಲಾತಿಯಂತಹ ಸಾಂವಿಧಾನಿಕ ಅವಕಾಶಗಳನ್ನು ಮುಸ್ಲಿಮರಿಂದ ಕಸಿದುಕೊಳ್ಳುವ ಬಿಜೆಪಿಯ ಮಾರ್ಗಸೂಚಿಗಳು ಮುಸ್ಲಿಮ್‌ ಸಮುದಾಯದ ಆತಂಕಕ್ಕೆ ಕಾರಣವಾಗಿತ್ತು.

ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಪೋಟೋ ಒಳಗೊಂಡಿರುವ ಇನ್ಸ್ಟಾಗ್ರಾಂ ಪೋಸ್ಟ್  ಹಂಚಿಕೊಂಡಿದ್ದಕ್ಕಾಗಿ ಕೊಲ್ಲಾಪುರದಲ್ಲಿ ಅಯಾಜ್ ಶೇಖ್ ಎಂಬಾತನ 17 ವರ್ಷದ ಮಗ ಸೇರಿ ಐವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಅಯಾಜ್ ಶೇಖ್ ತನ್ನ 17 ವರ್ಷದ ಮಗನನ್ನು ರಕ್ಷಣೆ ಮಾಡಬೇಕೆಂದು ವಕೀಲರು, ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಓಡಾಡಿದ್ದರಿಂದ ತನ್ನ ಜೀವನಾಧಾರವಾಗಿದ್ದ ಮರಗೆಲಸಕ್ಕೆ ಕೂಡ ಹೋಗಿಲ್ಲ.

ಟಿಪ್ಪು ಸುಲ್ತಾನ್ ಅವರನ್ನು ಮೊಘಲ್ ದೊರೆ ಔರಂಗಜೇಬ್ ಎಂದು ತಪ್ಪಾಗಿ ಭಾವಿಸಿದ ಹಿಂದುತ್ವ ಗುಂಪುಗಳು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಶೇಖ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ವಿಚಾರಕ್ಕೆ ಜೂನ್ 7, 2023ರಂದು ಕೊಲ್ಹಾಪುರದಲ್ಲಿ ಗಲಭೆಗಳು ಪ್ರಾರಂಭವಾದವು, 80 ವಾಹನಗಳು ಮತ್ತು ಅಪಾರ ಮೌಲ್ಯದ ಆಸ್ತಿ ಪಾಸ್ತಿಗಳು ಹಾನಿಯಾಗಿದ್ದವು.

ಅಯಾಜ್ ಶೇಖ್ ಈ ಬಗ್ಗೆ ಮಾತನಾಡುತ್ತಾ, ತನ್ನ ಮಗನ ಬಿಡುಗಡೆ ಬಳಿಕವೂ ನಾವು ತಿಂಗಳುಗಳವರೆಗೆ ಅವನ ಸುರಕ್ಷತೆಯ ಬಗ್ಗೆ ಭಯಪಟ್ಟಿದ್ದೆವು. ಹೆಚ್ಚಿನ ಗಲಭೆಕೋರರು, ನೆರೆಹೊರೆಯ ನಿವಾಸಿಗಳು. ಈ ರೀತಿ ಹಿಂದೆಂದೂ ಸಂಭವಿಸಿರಲಿಲ್ಲ ಮತ್ತು ಅದು ಮತ್ತೆ ಪುನರಾವರ್ತನೆಯಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಮೇ 7ರಂದು ಮತ ಚಲಾಯಿಸಲು ಹೋದಾಗ, ಶಾಂತಿಯನ್ನು ಖಾತ್ರಿಪಡಿಸುವ ರಾಜಕೀಯ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಕಾಂಗ್ರೆಸ್ ಅಭ್ಯರ್ಥಿ ಛತ್ರಪತಿ ಶಾಹು ಶಾಹಜಿ ಪರ ಮತ ಚಲಾಯಿಸಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಛತ್ರಪತಿ ಶಾಹು ಶಾಹಜಿ ಅವರು 76ನೇ ವಯಸ್ಸಿನಲ್ಲಿ ಸಂವಿಧಾನವನ್ನು ರಕ್ಷಿಸಲು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುವ ಆಯ್ಕೆ ಮಾಡಿಕೊಂಡೆ ಎಂದು ಮತದಾರರಿಗೆ ಹೇಳಿದ್ದಾರೆ.

ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬಿದ್ದಾಗ, ಆಡಳಿತಾರೂಢ ಬಿಜೆಪಿಗೆ ಬಹುಮತದ ಕೊರತೆ ಎದುರಾಗಿದೆ. 303 ಸ್ಥಾನಗಳನ್ನು ಹೊಂದಿದ್ದ ಬಿಜೆಪಿಯ ಸ್ಥಾನಗಳು ಲೋಸಭೆಯಲ್ಲಿ 240ಕ್ಕೆ ಕುಸಿಯಿತು.ಕಳೆದ 10 ವರ್ಷಗಳಲ್ಲಿ ಧ್ವಂಸ, ದ್ವೇಷಪೂರಿತ ಭಾಷಣ ಮತ್ತು ತಾರತಮ್ಯವನ್ನು ಎದುರಿಸಿದ ಹಲವಾರು ಮುಸ್ಲಿಂ ಮತದಾರರಿಗೆ ಈ ತೀರ್ಪು ಸಮಾಧಾನ ತಂದಿದೆ. ಚುನಾವಣಾ ಪ್ರಚಾರದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಉಲ್ಲೇಖಿಸಿದ್ದರು. ಇದು ಮುಸ್ಲಿಮರಲ್ಲಿ ಭವಿಷ್ಯದ ಬಗ್ಗೆ ಆತಂಕವನ್ನುಂಟು ಮಾಡಿತ್ತು.

ಪಶ್ಚಿಮ ಅಸ್ಸಾಂನ ಧುಬ್ರಿಯ ದೂರದ ಹಳ್ಳಿಯೊಂದರ 40 ವರ್ಷದ ಫಾರ್ಮಸಿಸ್ಟ್ ಸೈದುರ್ ರೆಹಮಾನ್ ಮುಲ್ಲಾ ಮಾತನಾಡುತ್ತಾ, ರಾಜ್ಯದಲ್ಲಿ ಮುಸ್ಲಿಮರನ್ನು ಅಮಾನವೀಯಗೊಳಿಸಿದೆ. ಬಿಜೆಪಿಯು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ, ಅವರನ್ನು ಅವರ ಮನೆಗಳಿಂದ ಹೊರಹಾಕುತ್ತಿದೆ, ಬಾಲ್ಯವಿವಾಹಕ್ಕಾಗಿ ಅವರನ್ನು ಬಂಧಿಸಿ ಜೈಲಿಗೆ ಹಾಕುತ್ತಿದೆ. ಮದರಸಾಗಳನ್ನು ಮುಚ್ಚಲಾಯಿತು ಮತ್ತು ಮಸೀದಿಗಳನ್ನು ಕೆಡವಲಾಯಿತು. ಆದರೆ ಅಂತಹ ದ್ವೇಷ ಮತ್ತು ಪೂರ್ವಾಗ್ರಹದಿಂದ ದೇಶವನ್ನು ಆಳಲು ಸಾಧ್ಯವಿಲ್ಲ ಎಂದು ಫಲಿತಾಂಶಗಳು ತೋರಿಸುತ್ತವೆ.

ಅಸ್ಸಾಂನಲ್ಲಿ ಸರ್ಕಾರ ಬದಲಾವಣೆಯಾಗದ ಹೊರತು ಬಂಗಾಳಿ ಮೂಲದ ಮುಸ್ಲಿಮರಿಗೆ ನೆಮ್ಮದಿಯಿಲ್ಲ. 2021ರಿಂದ, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಆಡಳಿತವು ರಾಜ್ಯದಲ್ಲಿ ಮುಸ್ಲಿಮರನ್ನು, ವಿಶೇಷವಾಗಿ ಬಂಗಾಳಿ ಮೂಲದವರನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ಮಾತನಾಡಿದ 38 ವರ್ಷದ ಮೊಹಮ್ಮದ್ ಸಲೀಂ, ಈ ತೀರ್ಪು ಮುಸ್ಲಿಮರ ವಿರುದ್ಧದ ತನ್ನ ನಿಲುವನ್ನು ಮೃದುಗೊಳಿಸಲು ಬಿಜೆಪಿಯನ್ನು ಒತ್ತಾಯಿಸುತ್ತದೆ. ಎನ್‌ಡಿಎ ಸರ್ಕಾರ ರಚಿಸಿದರೂ ಪೊಲೀಸರ ದೌರ್ಜನ್ಯ ಕಡಿಮೆಯಾಗಲಿದೆ. ಬಿಜೆಪಿಗೆ ತನ್ನಿಚ್ಛೆಯಂತೆ ನಡೆಯುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಮುಸ್ಲಿಮರ ಪ್ರಾತಿನಿಧ್ಯದ ಬಗ್ಗೆ ಸಲೀಂ ಭರವಸೆ ಇಟ್ಟಿದ್ದಾರೆ. ಸಲೀಂ ಮತ ಚಲಾಯಿಸಿದ ಸಹರಾನ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಇಮ್ರಾನ್ ಮಸೂದ್ 64,000 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಬಾರ್ಪೇಟಾ ಮೂಲದ ಕಾನೂನು ಸಂಶೋಧಕ ಶಹೀದ್ ಅಹ್ಮದ್ ಮಾತನಾಡುತ್ತಾ,  ಪ್ರತಿಪಕ್ಷಗಳ ಉತ್ತಮ ಪ್ರದರ್ಶನವು ಪ್ರಜಾಪ್ರಭುತ್ವದ ಬಗ್ಗೆ ಭರವಸೆ ಮೂಡಿಸಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಆಡಳಿತ ಪಕ್ಷಕ್ಕೆ ಒಲವು ತೋರಲು ಅತ್ಯುತ್ತಮವಾಗಿ ಪ್ರಯತ್ನಿಸಿದರೂ, ಜನರು ವಿರೋಧಿಸಿದ್ದಾರೆ ಮತ್ತು ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದ್ದಾರೆ ಎಂದು ಅಹ್ಮದ್ ಹೇಳಿದ್ದಾರೆ.

ಇದನ್ನು ಓದಿ: ಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gouri group is very good news channel nanu tumba ista paduttene real hedtira matte no political heege nija wanna munde idi so good work good job I really respect 👍👏👏

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...