Homeಕರೋನಾ ತಲ್ಲಣವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ವಿಶ್ವದಾದ್ಯಂತ ಹೆಚ್ಚಿನ ದೇಶಗಳಲ್ಲೂ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಅದರಂತೆ ತಮ್ಮ ದೇಶಗಳ ಪ್ರಜೆಗಳಿಗೆ ಲಸಿಕೆಯ ಬಗ್ಗೆ ನಂಬಿಕೆ ಬರಲು ಅಲ್ಲಿನ ನಾಯಕರು ಮೊದಲಿಗೆ ಲಸಿಕೆಯನ್ನು ಪಡೆಯುತ್ತಿದ್ದಾರೆ.

- Advertisement -
- Advertisement -

ಕಳೆದ ವರ್ಷ ಪ್ರಾರಂಭವಾದ ಕೊರೊನಾ ಸಾಂಕ್ರಮಿಕಕ್ಕೆ ಕೊನೆಗೂ ಲಸಿಕೆ ತಯಾರಾಗಿದೆ. ಭಾರತದಲ್ಲಿ ಈಗಾಗಲೇ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡು ಲಸಿಕೆಗಳಿಗೆ ಅನುಮತಿ ಸಿಕ್ಕಿವೆ. ಭಾರತ್ ಬಯೋಟೆಕ್ ಅಭಿವೃದ್ದಿಪಡಿಸಿರುವ ಕೊವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗಗಳ ಫಲಿತಾಂಶದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹಾಗಾಗಿ ಲಸಿಕೆ ಬಗ್ಗೆ ವಿಜ್ಞಾನಿಗಳು ಸೇರಿದಂತೆ ಕೆಲವರು ಅಪಸ್ವರ ಎತ್ತಿದ್ದಾರೆ. ಈ ನಡುವೆಯೇ ಭಾರತದಾದ್ಯಂತ ಇಂದು ಮೊದಲ ಸುತ್ತಿನ ವ್ಯಾಕ್ಸಿನೇಷನ್ ಆರಂಭವಾಗಿದ್ದು ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ನೀಡಲಾಗುತ್ತಿದೆ.

ಈ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಎರಡು ದೋಸ್‌ಗಳನ್ನೂ ಮರೆಯದೆ ಪಡೆಯಿರಿ ಎಂದು ಹೇಳಿದ್ದಾರೆ. ಅದರಂತೆಯೆ ಕರ್ನಾಟಕದಲ್ಲಿ ಕೂಡಾ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವ್ಯಾಕ್ಸಿನೇಷನ್‌ಗೆ ಚಾಲನೆ ನೀಡಿ “ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ರಾಜ್ಯಾದ್ಯಂತ ಲಸಿಕೆ ವಿತರಣೆ ಅಧಿಕೃತವಾಗಿ ಚಾಲನೆ ನೀಡಲಾಯಿತು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ವಿಶ್ವದಾದ್ಯಂತ ಹೆಚ್ಚಿನ ದೇಶಗಳಲ್ಲೂ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಅದರಂತೆ ತಮ್ಮ ದೇಶಗಳ ಪ್ರಜೆಗಳಿಗೆ ಲಸಿಕೆಯ ಬಗ್ಗೆ ನಂಬಿಕೆ ಬರಲು ಅಲ್ಲಿನ ನಾಯಕರು ಮೊದಲಿಗೆ ಲಸಿಕೆಯನ್ನು ಪಡೆಯುತ್ತಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಭಾರತದಲ್ಲಿ ಕೂಡಾ ನಮ್ಮ ನಾಯಕರು ಈ ಲಸಿಕೆಯನ್ನು ಮೊದಲು ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್‌, “ಮೊದಲು ಪ್ರಧಾನಿ ನರೇಂದ್ರ ಮೋದಿ ಲಸಿಕೆ ಪಡೆಯಲಿ, ಅದರ ನಂತರ ನಾವು ಪಡೆಯುತ್ತೇವೆ ಎಂದು ನೇರವಾಗಿ ಸವಾಲೆಸೆದಿದ್ದರು.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

 

ರಾಜೀವ್ ಎಂಬುವವರು ಟ್ವಿಟ್ಟರ್‌ನಲ್ಲಿ “56 ಇಂಚಿನ ಪ್ರಧಾನ ಸೇವಕ, ಭಾರತೀಯ ಇತಿಹಾಸದಲ್ಲೇ ಎಲ್ಲರಿಗಿಂತಲೂ ದೊಡ್ಡ ದೇಶಭಕ್ತ ಅಥವಾ ವಿಶ್ವಗುರು” ಎಂದು ಕೊಲಾಜ್ ಚಿತ್ರವೊಂದನ್ನು ಹಾಕಿ, ಆದರೂ ಲಸಿಕೆ ಪಡೆದಿಲ್ಲ ಎಂದು ಪ್ರಧಾನಿಯನ್ನು ಟ್ರೋಲ್ ಮಾಡಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ಅನುಷ್ಕಾ ಇನ್ಸಾನಿಯತ್‌ ಎಂಬುವವರು ಟ್ವಿಟ್ಟರ್‌ನಲ್ಲಿ, “ವ್ಯಾಕ್ಸಿನ್ ಪಡೆಯಲು 56 ಇಂಚು ಯಾಕೆ ತುಂಬಾ ಹೆದರುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮುಕ್ತ ಕರ್ನಾಟಕ ಫೇಸ್‌ಬುಕ್ ಪೇಜ್, “ಬೇರೆ ದೇಶಗಳ ನಾಯಕರು ಕೊರೊನಾ ಲಸಿಕೆ ಮೊದಲು ಹಾಕಿಕೊಂಡರೆ , ನಮ್ಮ ಪ್ರಧಾನಿ ಮೋದಿಯನ್ನು ನೋಡಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...