Homeಮುಖಪುಟನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

ನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಉಪನಾಮ ಬಳಕೆ ಕುರಿತು ಮಾತನಾಡಿದ್ದನ್ನು ಏಕೆ ದಾಖಲೆಯಿಂದ ತೆಗೆದುಹಾಕಲಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಪ್ರಶ್ನಿಸಿದ್ದಾರೆ. ”ನಾನು ಅತ್ಯಂತ ಸಭ್ಯ ಭಾಷೆ ಬಳಸಿದ್ದೇನೆ ಮತ್ತು ನಾನು ಹೇಳಿದ ಎಲ್ಲ ಹೇಳಿಕೆಗಳಿಗೂ ಸಾಕ್ಷಿಗಳಿವೆ. ಆದರೆ ಪ್ರಧಾನಿ ನೇರವಾಗಿ ನನ್ನನ್ನು ಅವಮಾನಿಸುತ್ತಾರೆ. ನಿಮ್ಮ ಹೆಸರು ರಾಹುಲ್ ಗಾಂಧಿ, ರಾಹುಲ್ ನೆಹರೂ ಅಲ್ಲ ಏಕೆ ಎಂದು ಅವರು ಹೇಳುತ್ತಾರೆ. ಆದರೆ ಅವರ ಈ ಯಾವ ಮಾತುಗಳನ್ನೂ ದಾಖಲೆಯಿಂದ ತೆಗೆದುಹಾಕಲಾಗಿಲ್ಲ. ಆದರೆ ಸತ್ಯ ಯಾವಾಗಲೂ ಹೊರಬರಬರುತ್ತದೆ” ಎಂದು ಅವರು ಕೇರಳದ ವಯಾನಂದ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹೇಳಿದರು.

”ನೀವು ಗಮನಿಸಿ ನೋಡಿ ನಾನು ಮಾತನಾಡುವಾಗ ಅವರು ಮುಖವನ್ನೇ ನೋಡುತ್ತಿದ್ದರು. ಆ ವೇಳೆ ಪ್ರಧಾನಿ ಎಷ್ಟು ಬಾರಿ ನೀರು ಕುಡಿದರು ಮತ್ತು ನೀರು ಕುಡಿಯುವಾಗ ಅವರ ಕೈಗಳು ಹೇಗೆ ನಡುಗುತ್ತಿದ್ದವು ಎಂಬುದನ್ನು ನೋಡಿ… ಪ್ರಧಾನಿ ಅವರು ತುಂಬಾ ಶಕ್ತಿಶಾಲಿ ಮತ್ತು ಎಲ್ಲರೂ ಅವರಿಗೆ ಭಯ ಪಡುತ್ತಾರೆ ಎಂದು ಜನರು ಭಾವಿಸುತ್ತಾರೆ. ಅವರು ಭಯಪಡುವ ಕೊನೆಯ ವಿಷಯವೆಂದರೆ ತಾನು ನರೇಂದ್ರ ಮೋದಿ ಎನ್ನುವ ಕಾರಣಕ್ಕೆ.. ಅವರು ಭಾರತದ ಪ್ರಧಾನಿಯಾಗಿದ್ದರೂ ಪರವಾಗಿಲ್ಲ. ಮುಂದೊಂದು ದಿನ ಅವರು ಸತ್ಯವನ್ನು ಎದುರಿಸಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.

ಗೌತಮ್ ಅದಾನಿ ಹಗರಣದ ಬಗ್ಗೆ ಮಾತನಾಡುವ ಸಮಯದಲ್ಲಿ ಪ್ರಧಾನಿಗೂ ಅದಾನಿಗೂ ಸಂಬಂಧ ಏನು ಎಂದು ರಾಹುಲ್ ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿಯನ್ನು ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸಿದರು. ಅವರ ಈ ಹೇಳಿಕೆಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ರಾಹುಲ್ ಗಾಂಧಿಯವರ ಟೀಕೆಗಳನ್ನು ಕಡತದಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಕಾಂಗ್ರೆಸ್ ಹೇಳಿದೆ.

”2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಸಮೂಹದ ಹಲವು ವ್ಯವಹಾರಗಳಿಗೆ ಅನುಕೂಲವಾಗಲೆಂದು ಭಾರತದ ಆರ್ಥಿಕ ನೀತಿಗಳನ್ನು ಬದಲಿಸಲಾಗಿದೆ” ಎಂದ ರಾಹುಲ್ ಆರೋಪಿಸಿದರು. ಆಗ ಬಿಜೆಪಿಯವರು ಇದು “ಅಸಂಸದೀಯ” ಮತ್ತು “ದಾರಿ ತಪ್ಪಿಸುವ” ತಂತ್ರ ಎಂದು ಆರೋಪಿಸಿದ ನಂತರ ಕಡತದಿಂದ ಆವರ ಹೇಳಿಕೆಯನ್ನು ತೆಗೆದುಹಾಕಲಾಯಿತು.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಆ ಬಳಿಕ ಪ್ರಧಾನಿ ಮೋದಿ ಮಾತನಾಡುವಾಗ, ಗಾಂಧೀಜಿ ಅಥವಾ ಕಾಂಗ್ರೆಸ್‌ನ ಹೆಸರನ್ನು ಹೇಳದೆ, “ನಾವು ಎಲ್ಲಿಯಾದರೂ ನೆಹರೂ ಅವರ ಹೆಸರನ್ನು ಹೇಳಲು ತಪ್ಪಿಸಿಕೊಂಡರೆ, ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರೂ ಅವರು ಅಂತಹ ಮಹಾನ್ ವ್ಯಕ್ತಿಯಾಗಿದ್ದರು. ನಂತರ ಅವರ್ಯಾರೂ ನೆಹರು ಉಪನಾಮವನ್ನು ತಮ್ಮ ಹೆಸರಿನ ಮುಂದೆ ಏಕೆ ಬಳಸುವುದಿಲ್ಲ, ನೆಹರೂ ಹೆಸರನ್ನು ಬಳಸುವುದರಲ್ಲಿ ನಾಚಿಕೆಗೇಡು ಏನು? ಎಂದೆಲ್ಲಾ ಮಾತನಾಡಿದರು. ಪ್ರಧಾನಿ ಈ ರೀತಿಯ ಅಸಭ್ಯ ಮಾತುಗಳನ್ನಾಡಿದಾಗ ಅದನ್ನು ಕಡತದಿಂದ ತೆಗೆದು ಹಾಕಲ್ಲ, ನಾವು ಸಭ್ಯಮಾತುಗಳೊಂದಿಗೆ ಸಾಕ್ಷಿಸಮೇತ ಟೀಕೆ ಮಾಡಿದರೂ ಕಡತದಿಂದ ತೆಗೆದು ಹಾಕುತ್ತಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ನಿಯಮಗಳ ಪ್ರಕಾರ, ನೀವು ಸಾಕ್ಷಿಗಳಿಲ್ಲದೇ ಏನನ್ನಾದರೂ ಹೇಳುತ್ತಿದ್ದರೆ ಅಥವಾ ನೀವು ಯಾರನ್ನಾದರೂ ಅವಮಾನಿಸುತ್ತಿದ್ದರೆ ಭಾಷಣದ ಭಾಗಗಳನ್ನು ರೆಕಾರ್ಡ್‌ನಿಂದ ತೆಗೆದುಹಾಕಬಹುದು. ನಾನು ಯಾರನ್ನೂ ಅವಮಾನಿಸಿಲ್ಲ, ನಾನು ಸೌಜನ್ಯ ಭಾಷೆಯನ್ನು ಬಳಸಿದ್ದೇನೆ, ನಾನು ಅತ್ಯಂತ ಸಭ್ಯ ಭಾಷೆ ಮತ್ತು ಎಲ್ಲವನ್ನೂ ಬಳಸಿದ್ದೇನೆ” ಎಂದು ರಾಹುಲ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...