Homeಮುಖಪುಟನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

ನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಉಪನಾಮ ಬಳಕೆ ಕುರಿತು ಮಾತನಾಡಿದ್ದನ್ನು ಏಕೆ ದಾಖಲೆಯಿಂದ ತೆಗೆದುಹಾಕಲಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಪ್ರಶ್ನಿಸಿದ್ದಾರೆ. ”ನಾನು ಅತ್ಯಂತ ಸಭ್ಯ ಭಾಷೆ ಬಳಸಿದ್ದೇನೆ ಮತ್ತು ನಾನು ಹೇಳಿದ ಎಲ್ಲ ಹೇಳಿಕೆಗಳಿಗೂ ಸಾಕ್ಷಿಗಳಿವೆ. ಆದರೆ ಪ್ರಧಾನಿ ನೇರವಾಗಿ ನನ್ನನ್ನು ಅವಮಾನಿಸುತ್ತಾರೆ. ನಿಮ್ಮ ಹೆಸರು ರಾಹುಲ್ ಗಾಂಧಿ, ರಾಹುಲ್ ನೆಹರೂ ಅಲ್ಲ ಏಕೆ ಎಂದು ಅವರು ಹೇಳುತ್ತಾರೆ. ಆದರೆ ಅವರ ಈ ಯಾವ ಮಾತುಗಳನ್ನೂ ದಾಖಲೆಯಿಂದ ತೆಗೆದುಹಾಕಲಾಗಿಲ್ಲ. ಆದರೆ ಸತ್ಯ ಯಾವಾಗಲೂ ಹೊರಬರಬರುತ್ತದೆ” ಎಂದು ಅವರು ಕೇರಳದ ವಯಾನಂದ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹೇಳಿದರು.

”ನೀವು ಗಮನಿಸಿ ನೋಡಿ ನಾನು ಮಾತನಾಡುವಾಗ ಅವರು ಮುಖವನ್ನೇ ನೋಡುತ್ತಿದ್ದರು. ಆ ವೇಳೆ ಪ್ರಧಾನಿ ಎಷ್ಟು ಬಾರಿ ನೀರು ಕುಡಿದರು ಮತ್ತು ನೀರು ಕುಡಿಯುವಾಗ ಅವರ ಕೈಗಳು ಹೇಗೆ ನಡುಗುತ್ತಿದ್ದವು ಎಂಬುದನ್ನು ನೋಡಿ… ಪ್ರಧಾನಿ ಅವರು ತುಂಬಾ ಶಕ್ತಿಶಾಲಿ ಮತ್ತು ಎಲ್ಲರೂ ಅವರಿಗೆ ಭಯ ಪಡುತ್ತಾರೆ ಎಂದು ಜನರು ಭಾವಿಸುತ್ತಾರೆ. ಅವರು ಭಯಪಡುವ ಕೊನೆಯ ವಿಷಯವೆಂದರೆ ತಾನು ನರೇಂದ್ರ ಮೋದಿ ಎನ್ನುವ ಕಾರಣಕ್ಕೆ.. ಅವರು ಭಾರತದ ಪ್ರಧಾನಿಯಾಗಿದ್ದರೂ ಪರವಾಗಿಲ್ಲ. ಮುಂದೊಂದು ದಿನ ಅವರು ಸತ್ಯವನ್ನು ಎದುರಿಸಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.

ಗೌತಮ್ ಅದಾನಿ ಹಗರಣದ ಬಗ್ಗೆ ಮಾತನಾಡುವ ಸಮಯದಲ್ಲಿ ಪ್ರಧಾನಿಗೂ ಅದಾನಿಗೂ ಸಂಬಂಧ ಏನು ಎಂದು ರಾಹುಲ್ ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿಯನ್ನು ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸಿದರು. ಅವರ ಈ ಹೇಳಿಕೆಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ರಾಹುಲ್ ಗಾಂಧಿಯವರ ಟೀಕೆಗಳನ್ನು ಕಡತದಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಕಾಂಗ್ರೆಸ್ ಹೇಳಿದೆ.

”2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಸಮೂಹದ ಹಲವು ವ್ಯವಹಾರಗಳಿಗೆ ಅನುಕೂಲವಾಗಲೆಂದು ಭಾರತದ ಆರ್ಥಿಕ ನೀತಿಗಳನ್ನು ಬದಲಿಸಲಾಗಿದೆ” ಎಂದ ರಾಹುಲ್ ಆರೋಪಿಸಿದರು. ಆಗ ಬಿಜೆಪಿಯವರು ಇದು “ಅಸಂಸದೀಯ” ಮತ್ತು “ದಾರಿ ತಪ್ಪಿಸುವ” ತಂತ್ರ ಎಂದು ಆರೋಪಿಸಿದ ನಂತರ ಕಡತದಿಂದ ಆವರ ಹೇಳಿಕೆಯನ್ನು ತೆಗೆದುಹಾಕಲಾಯಿತು.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಆ ಬಳಿಕ ಪ್ರಧಾನಿ ಮೋದಿ ಮಾತನಾಡುವಾಗ, ಗಾಂಧೀಜಿ ಅಥವಾ ಕಾಂಗ್ರೆಸ್‌ನ ಹೆಸರನ್ನು ಹೇಳದೆ, “ನಾವು ಎಲ್ಲಿಯಾದರೂ ನೆಹರೂ ಅವರ ಹೆಸರನ್ನು ಹೇಳಲು ತಪ್ಪಿಸಿಕೊಂಡರೆ, ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರೂ ಅವರು ಅಂತಹ ಮಹಾನ್ ವ್ಯಕ್ತಿಯಾಗಿದ್ದರು. ನಂತರ ಅವರ್ಯಾರೂ ನೆಹರು ಉಪನಾಮವನ್ನು ತಮ್ಮ ಹೆಸರಿನ ಮುಂದೆ ಏಕೆ ಬಳಸುವುದಿಲ್ಲ, ನೆಹರೂ ಹೆಸರನ್ನು ಬಳಸುವುದರಲ್ಲಿ ನಾಚಿಕೆಗೇಡು ಏನು? ಎಂದೆಲ್ಲಾ ಮಾತನಾಡಿದರು. ಪ್ರಧಾನಿ ಈ ರೀತಿಯ ಅಸಭ್ಯ ಮಾತುಗಳನ್ನಾಡಿದಾಗ ಅದನ್ನು ಕಡತದಿಂದ ತೆಗೆದು ಹಾಕಲ್ಲ, ನಾವು ಸಭ್ಯಮಾತುಗಳೊಂದಿಗೆ ಸಾಕ್ಷಿಸಮೇತ ಟೀಕೆ ಮಾಡಿದರೂ ಕಡತದಿಂದ ತೆಗೆದು ಹಾಕುತ್ತಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ನಿಯಮಗಳ ಪ್ರಕಾರ, ನೀವು ಸಾಕ್ಷಿಗಳಿಲ್ಲದೇ ಏನನ್ನಾದರೂ ಹೇಳುತ್ತಿದ್ದರೆ ಅಥವಾ ನೀವು ಯಾರನ್ನಾದರೂ ಅವಮಾನಿಸುತ್ತಿದ್ದರೆ ಭಾಷಣದ ಭಾಗಗಳನ್ನು ರೆಕಾರ್ಡ್‌ನಿಂದ ತೆಗೆದುಹಾಕಬಹುದು. ನಾನು ಯಾರನ್ನೂ ಅವಮಾನಿಸಿಲ್ಲ, ನಾನು ಸೌಜನ್ಯ ಭಾಷೆಯನ್ನು ಬಳಸಿದ್ದೇನೆ, ನಾನು ಅತ್ಯಂತ ಸಭ್ಯ ಭಾಷೆ ಮತ್ತು ಎಲ್ಲವನ್ನೂ ಬಳಸಿದ್ದೇನೆ” ಎಂದು ರಾಹುಲ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...