Homeಮುಖಪುಟನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

ನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಉಪನಾಮ ಬಳಕೆ ಕುರಿತು ಮಾತನಾಡಿದ್ದನ್ನು ಏಕೆ ದಾಖಲೆಯಿಂದ ತೆಗೆದುಹಾಕಲಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಪ್ರಶ್ನಿಸಿದ್ದಾರೆ. ”ನಾನು ಅತ್ಯಂತ ಸಭ್ಯ ಭಾಷೆ ಬಳಸಿದ್ದೇನೆ ಮತ್ತು ನಾನು ಹೇಳಿದ ಎಲ್ಲ ಹೇಳಿಕೆಗಳಿಗೂ ಸಾಕ್ಷಿಗಳಿವೆ. ಆದರೆ ಪ್ರಧಾನಿ ನೇರವಾಗಿ ನನ್ನನ್ನು ಅವಮಾನಿಸುತ್ತಾರೆ. ನಿಮ್ಮ ಹೆಸರು ರಾಹುಲ್ ಗಾಂಧಿ, ರಾಹುಲ್ ನೆಹರೂ ಅಲ್ಲ ಏಕೆ ಎಂದು ಅವರು ಹೇಳುತ್ತಾರೆ. ಆದರೆ ಅವರ ಈ ಯಾವ ಮಾತುಗಳನ್ನೂ ದಾಖಲೆಯಿಂದ ತೆಗೆದುಹಾಕಲಾಗಿಲ್ಲ. ಆದರೆ ಸತ್ಯ ಯಾವಾಗಲೂ ಹೊರಬರಬರುತ್ತದೆ” ಎಂದು ಅವರು ಕೇರಳದ ವಯಾನಂದ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹೇಳಿದರು.

”ನೀವು ಗಮನಿಸಿ ನೋಡಿ ನಾನು ಮಾತನಾಡುವಾಗ ಅವರು ಮುಖವನ್ನೇ ನೋಡುತ್ತಿದ್ದರು. ಆ ವೇಳೆ ಪ್ರಧಾನಿ ಎಷ್ಟು ಬಾರಿ ನೀರು ಕುಡಿದರು ಮತ್ತು ನೀರು ಕುಡಿಯುವಾಗ ಅವರ ಕೈಗಳು ಹೇಗೆ ನಡುಗುತ್ತಿದ್ದವು ಎಂಬುದನ್ನು ನೋಡಿ… ಪ್ರಧಾನಿ ಅವರು ತುಂಬಾ ಶಕ್ತಿಶಾಲಿ ಮತ್ತು ಎಲ್ಲರೂ ಅವರಿಗೆ ಭಯ ಪಡುತ್ತಾರೆ ಎಂದು ಜನರು ಭಾವಿಸುತ್ತಾರೆ. ಅವರು ಭಯಪಡುವ ಕೊನೆಯ ವಿಷಯವೆಂದರೆ ತಾನು ನರೇಂದ್ರ ಮೋದಿ ಎನ್ನುವ ಕಾರಣಕ್ಕೆ.. ಅವರು ಭಾರತದ ಪ್ರಧಾನಿಯಾಗಿದ್ದರೂ ಪರವಾಗಿಲ್ಲ. ಮುಂದೊಂದು ದಿನ ಅವರು ಸತ್ಯವನ್ನು ಎದುರಿಸಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.

ಗೌತಮ್ ಅದಾನಿ ಹಗರಣದ ಬಗ್ಗೆ ಮಾತನಾಡುವ ಸಮಯದಲ್ಲಿ ಪ್ರಧಾನಿಗೂ ಅದಾನಿಗೂ ಸಂಬಂಧ ಏನು ಎಂದು ರಾಹುಲ್ ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿಯನ್ನು ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸಿದರು. ಅವರ ಈ ಹೇಳಿಕೆಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ರಾಹುಲ್ ಗಾಂಧಿಯವರ ಟೀಕೆಗಳನ್ನು ಕಡತದಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಕಾಂಗ್ರೆಸ್ ಹೇಳಿದೆ.

”2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಸಮೂಹದ ಹಲವು ವ್ಯವಹಾರಗಳಿಗೆ ಅನುಕೂಲವಾಗಲೆಂದು ಭಾರತದ ಆರ್ಥಿಕ ನೀತಿಗಳನ್ನು ಬದಲಿಸಲಾಗಿದೆ” ಎಂದ ರಾಹುಲ್ ಆರೋಪಿಸಿದರು. ಆಗ ಬಿಜೆಪಿಯವರು ಇದು “ಅಸಂಸದೀಯ” ಮತ್ತು “ದಾರಿ ತಪ್ಪಿಸುವ” ತಂತ್ರ ಎಂದು ಆರೋಪಿಸಿದ ನಂತರ ಕಡತದಿಂದ ಆವರ ಹೇಳಿಕೆಯನ್ನು ತೆಗೆದುಹಾಕಲಾಯಿತು.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಆ ಬಳಿಕ ಪ್ರಧಾನಿ ಮೋದಿ ಮಾತನಾಡುವಾಗ, ಗಾಂಧೀಜಿ ಅಥವಾ ಕಾಂಗ್ರೆಸ್‌ನ ಹೆಸರನ್ನು ಹೇಳದೆ, “ನಾವು ಎಲ್ಲಿಯಾದರೂ ನೆಹರೂ ಅವರ ಹೆಸರನ್ನು ಹೇಳಲು ತಪ್ಪಿಸಿಕೊಂಡರೆ, ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರೂ ಅವರು ಅಂತಹ ಮಹಾನ್ ವ್ಯಕ್ತಿಯಾಗಿದ್ದರು. ನಂತರ ಅವರ್ಯಾರೂ ನೆಹರು ಉಪನಾಮವನ್ನು ತಮ್ಮ ಹೆಸರಿನ ಮುಂದೆ ಏಕೆ ಬಳಸುವುದಿಲ್ಲ, ನೆಹರೂ ಹೆಸರನ್ನು ಬಳಸುವುದರಲ್ಲಿ ನಾಚಿಕೆಗೇಡು ಏನು? ಎಂದೆಲ್ಲಾ ಮಾತನಾಡಿದರು. ಪ್ರಧಾನಿ ಈ ರೀತಿಯ ಅಸಭ್ಯ ಮಾತುಗಳನ್ನಾಡಿದಾಗ ಅದನ್ನು ಕಡತದಿಂದ ತೆಗೆದು ಹಾಕಲ್ಲ, ನಾವು ಸಭ್ಯಮಾತುಗಳೊಂದಿಗೆ ಸಾಕ್ಷಿಸಮೇತ ಟೀಕೆ ಮಾಡಿದರೂ ಕಡತದಿಂದ ತೆಗೆದು ಹಾಕುತ್ತಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ನಿಯಮಗಳ ಪ್ರಕಾರ, ನೀವು ಸಾಕ್ಷಿಗಳಿಲ್ಲದೇ ಏನನ್ನಾದರೂ ಹೇಳುತ್ತಿದ್ದರೆ ಅಥವಾ ನೀವು ಯಾರನ್ನಾದರೂ ಅವಮಾನಿಸುತ್ತಿದ್ದರೆ ಭಾಷಣದ ಭಾಗಗಳನ್ನು ರೆಕಾರ್ಡ್‌ನಿಂದ ತೆಗೆದುಹಾಕಬಹುದು. ನಾನು ಯಾರನ್ನೂ ಅವಮಾನಿಸಿಲ್ಲ, ನಾನು ಸೌಜನ್ಯ ಭಾಷೆಯನ್ನು ಬಳಸಿದ್ದೇನೆ, ನಾನು ಅತ್ಯಂತ ಸಭ್ಯ ಭಾಷೆ ಮತ್ತು ಎಲ್ಲವನ್ನೂ ಬಳಸಿದ್ದೇನೆ” ಎಂದು ರಾಹುಲ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...