Homeಮುಖಪುಟನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

ನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಉಪನಾಮ ಬಳಕೆ ಕುರಿತು ಮಾತನಾಡಿದ್ದನ್ನು ಏಕೆ ದಾಖಲೆಯಿಂದ ತೆಗೆದುಹಾಕಲಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಪ್ರಶ್ನಿಸಿದ್ದಾರೆ. ”ನಾನು ಅತ್ಯಂತ ಸಭ್ಯ ಭಾಷೆ ಬಳಸಿದ್ದೇನೆ ಮತ್ತು ನಾನು ಹೇಳಿದ ಎಲ್ಲ ಹೇಳಿಕೆಗಳಿಗೂ ಸಾಕ್ಷಿಗಳಿವೆ. ಆದರೆ ಪ್ರಧಾನಿ ನೇರವಾಗಿ ನನ್ನನ್ನು ಅವಮಾನಿಸುತ್ತಾರೆ. ನಿಮ್ಮ ಹೆಸರು ರಾಹುಲ್ ಗಾಂಧಿ, ರಾಹುಲ್ ನೆಹರೂ ಅಲ್ಲ ಏಕೆ ಎಂದು ಅವರು ಹೇಳುತ್ತಾರೆ. ಆದರೆ ಅವರ ಈ ಯಾವ ಮಾತುಗಳನ್ನೂ ದಾಖಲೆಯಿಂದ ತೆಗೆದುಹಾಕಲಾಗಿಲ್ಲ. ಆದರೆ ಸತ್ಯ ಯಾವಾಗಲೂ ಹೊರಬರಬರುತ್ತದೆ” ಎಂದು ಅವರು ಕೇರಳದ ವಯಾನಂದ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹೇಳಿದರು.

”ನೀವು ಗಮನಿಸಿ ನೋಡಿ ನಾನು ಮಾತನಾಡುವಾಗ ಅವರು ಮುಖವನ್ನೇ ನೋಡುತ್ತಿದ್ದರು. ಆ ವೇಳೆ ಪ್ರಧಾನಿ ಎಷ್ಟು ಬಾರಿ ನೀರು ಕುಡಿದರು ಮತ್ತು ನೀರು ಕುಡಿಯುವಾಗ ಅವರ ಕೈಗಳು ಹೇಗೆ ನಡುಗುತ್ತಿದ್ದವು ಎಂಬುದನ್ನು ನೋಡಿ… ಪ್ರಧಾನಿ ಅವರು ತುಂಬಾ ಶಕ್ತಿಶಾಲಿ ಮತ್ತು ಎಲ್ಲರೂ ಅವರಿಗೆ ಭಯ ಪಡುತ್ತಾರೆ ಎಂದು ಜನರು ಭಾವಿಸುತ್ತಾರೆ. ಅವರು ಭಯಪಡುವ ಕೊನೆಯ ವಿಷಯವೆಂದರೆ ತಾನು ನರೇಂದ್ರ ಮೋದಿ ಎನ್ನುವ ಕಾರಣಕ್ಕೆ.. ಅವರು ಭಾರತದ ಪ್ರಧಾನಿಯಾಗಿದ್ದರೂ ಪರವಾಗಿಲ್ಲ. ಮುಂದೊಂದು ದಿನ ಅವರು ಸತ್ಯವನ್ನು ಎದುರಿಸಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.

ಗೌತಮ್ ಅದಾನಿ ಹಗರಣದ ಬಗ್ಗೆ ಮಾತನಾಡುವ ಸಮಯದಲ್ಲಿ ಪ್ರಧಾನಿಗೂ ಅದಾನಿಗೂ ಸಂಬಂಧ ಏನು ಎಂದು ರಾಹುಲ್ ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿಯನ್ನು ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸಿದರು. ಅವರ ಈ ಹೇಳಿಕೆಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ರಾಹುಲ್ ಗಾಂಧಿಯವರ ಟೀಕೆಗಳನ್ನು ಕಡತದಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಕಾಂಗ್ರೆಸ್ ಹೇಳಿದೆ.

”2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಸಮೂಹದ ಹಲವು ವ್ಯವಹಾರಗಳಿಗೆ ಅನುಕೂಲವಾಗಲೆಂದು ಭಾರತದ ಆರ್ಥಿಕ ನೀತಿಗಳನ್ನು ಬದಲಿಸಲಾಗಿದೆ” ಎಂದ ರಾಹುಲ್ ಆರೋಪಿಸಿದರು. ಆಗ ಬಿಜೆಪಿಯವರು ಇದು “ಅಸಂಸದೀಯ” ಮತ್ತು “ದಾರಿ ತಪ್ಪಿಸುವ” ತಂತ್ರ ಎಂದು ಆರೋಪಿಸಿದ ನಂತರ ಕಡತದಿಂದ ಆವರ ಹೇಳಿಕೆಯನ್ನು ತೆಗೆದುಹಾಕಲಾಯಿತು.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಆ ಬಳಿಕ ಪ್ರಧಾನಿ ಮೋದಿ ಮಾತನಾಡುವಾಗ, ಗಾಂಧೀಜಿ ಅಥವಾ ಕಾಂಗ್ರೆಸ್‌ನ ಹೆಸರನ್ನು ಹೇಳದೆ, “ನಾವು ಎಲ್ಲಿಯಾದರೂ ನೆಹರೂ ಅವರ ಹೆಸರನ್ನು ಹೇಳಲು ತಪ್ಪಿಸಿಕೊಂಡರೆ, ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರೂ ಅವರು ಅಂತಹ ಮಹಾನ್ ವ್ಯಕ್ತಿಯಾಗಿದ್ದರು. ನಂತರ ಅವರ್ಯಾರೂ ನೆಹರು ಉಪನಾಮವನ್ನು ತಮ್ಮ ಹೆಸರಿನ ಮುಂದೆ ಏಕೆ ಬಳಸುವುದಿಲ್ಲ, ನೆಹರೂ ಹೆಸರನ್ನು ಬಳಸುವುದರಲ್ಲಿ ನಾಚಿಕೆಗೇಡು ಏನು? ಎಂದೆಲ್ಲಾ ಮಾತನಾಡಿದರು. ಪ್ರಧಾನಿ ಈ ರೀತಿಯ ಅಸಭ್ಯ ಮಾತುಗಳನ್ನಾಡಿದಾಗ ಅದನ್ನು ಕಡತದಿಂದ ತೆಗೆದು ಹಾಕಲ್ಲ, ನಾವು ಸಭ್ಯಮಾತುಗಳೊಂದಿಗೆ ಸಾಕ್ಷಿಸಮೇತ ಟೀಕೆ ಮಾಡಿದರೂ ಕಡತದಿಂದ ತೆಗೆದು ಹಾಕುತ್ತಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ನಿಯಮಗಳ ಪ್ರಕಾರ, ನೀವು ಸಾಕ್ಷಿಗಳಿಲ್ಲದೇ ಏನನ್ನಾದರೂ ಹೇಳುತ್ತಿದ್ದರೆ ಅಥವಾ ನೀವು ಯಾರನ್ನಾದರೂ ಅವಮಾನಿಸುತ್ತಿದ್ದರೆ ಭಾಷಣದ ಭಾಗಗಳನ್ನು ರೆಕಾರ್ಡ್‌ನಿಂದ ತೆಗೆದುಹಾಕಬಹುದು. ನಾನು ಯಾರನ್ನೂ ಅವಮಾನಿಸಿಲ್ಲ, ನಾನು ಸೌಜನ್ಯ ಭಾಷೆಯನ್ನು ಬಳಸಿದ್ದೇನೆ, ನಾನು ಅತ್ಯಂತ ಸಭ್ಯ ಭಾಷೆ ಮತ್ತು ಎಲ್ಲವನ್ನೂ ಬಳಸಿದ್ದೇನೆ” ಎಂದು ರಾಹುಲ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...