Homeಮುಖಪುಟನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

ನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಉಪನಾಮ ಬಳಕೆ ಕುರಿತು ಮಾತನಾಡಿದ್ದನ್ನು ಏಕೆ ದಾಖಲೆಯಿಂದ ತೆಗೆದುಹಾಕಲಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಪ್ರಶ್ನಿಸಿದ್ದಾರೆ. ”ನಾನು ಅತ್ಯಂತ ಸಭ್ಯ ಭಾಷೆ ಬಳಸಿದ್ದೇನೆ ಮತ್ತು ನಾನು ಹೇಳಿದ ಎಲ್ಲ ಹೇಳಿಕೆಗಳಿಗೂ ಸಾಕ್ಷಿಗಳಿವೆ. ಆದರೆ ಪ್ರಧಾನಿ ನೇರವಾಗಿ ನನ್ನನ್ನು ಅವಮಾನಿಸುತ್ತಾರೆ. ನಿಮ್ಮ ಹೆಸರು ರಾಹುಲ್ ಗಾಂಧಿ, ರಾಹುಲ್ ನೆಹರೂ ಅಲ್ಲ ಏಕೆ ಎಂದು ಅವರು ಹೇಳುತ್ತಾರೆ. ಆದರೆ ಅವರ ಈ ಯಾವ ಮಾತುಗಳನ್ನೂ ದಾಖಲೆಯಿಂದ ತೆಗೆದುಹಾಕಲಾಗಿಲ್ಲ. ಆದರೆ ಸತ್ಯ ಯಾವಾಗಲೂ ಹೊರಬರಬರುತ್ತದೆ” ಎಂದು ಅವರು ಕೇರಳದ ವಯಾನಂದ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹೇಳಿದರು.

”ನೀವು ಗಮನಿಸಿ ನೋಡಿ ನಾನು ಮಾತನಾಡುವಾಗ ಅವರು ಮುಖವನ್ನೇ ನೋಡುತ್ತಿದ್ದರು. ಆ ವೇಳೆ ಪ್ರಧಾನಿ ಎಷ್ಟು ಬಾರಿ ನೀರು ಕುಡಿದರು ಮತ್ತು ನೀರು ಕುಡಿಯುವಾಗ ಅವರ ಕೈಗಳು ಹೇಗೆ ನಡುಗುತ್ತಿದ್ದವು ಎಂಬುದನ್ನು ನೋಡಿ… ಪ್ರಧಾನಿ ಅವರು ತುಂಬಾ ಶಕ್ತಿಶಾಲಿ ಮತ್ತು ಎಲ್ಲರೂ ಅವರಿಗೆ ಭಯ ಪಡುತ್ತಾರೆ ಎಂದು ಜನರು ಭಾವಿಸುತ್ತಾರೆ. ಅವರು ಭಯಪಡುವ ಕೊನೆಯ ವಿಷಯವೆಂದರೆ ತಾನು ನರೇಂದ್ರ ಮೋದಿ ಎನ್ನುವ ಕಾರಣಕ್ಕೆ.. ಅವರು ಭಾರತದ ಪ್ರಧಾನಿಯಾಗಿದ್ದರೂ ಪರವಾಗಿಲ್ಲ. ಮುಂದೊಂದು ದಿನ ಅವರು ಸತ್ಯವನ್ನು ಎದುರಿಸಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.

ಗೌತಮ್ ಅದಾನಿ ಹಗರಣದ ಬಗ್ಗೆ ಮಾತನಾಡುವ ಸಮಯದಲ್ಲಿ ಪ್ರಧಾನಿಗೂ ಅದಾನಿಗೂ ಸಂಬಂಧ ಏನು ಎಂದು ರಾಹುಲ್ ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿಯನ್ನು ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸಿದರು. ಅವರ ಈ ಹೇಳಿಕೆಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ರಾಹುಲ್ ಗಾಂಧಿಯವರ ಟೀಕೆಗಳನ್ನು ಕಡತದಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಕಾಂಗ್ರೆಸ್ ಹೇಳಿದೆ.

”2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಸಮೂಹದ ಹಲವು ವ್ಯವಹಾರಗಳಿಗೆ ಅನುಕೂಲವಾಗಲೆಂದು ಭಾರತದ ಆರ್ಥಿಕ ನೀತಿಗಳನ್ನು ಬದಲಿಸಲಾಗಿದೆ” ಎಂದ ರಾಹುಲ್ ಆರೋಪಿಸಿದರು. ಆಗ ಬಿಜೆಪಿಯವರು ಇದು “ಅಸಂಸದೀಯ” ಮತ್ತು “ದಾರಿ ತಪ್ಪಿಸುವ” ತಂತ್ರ ಎಂದು ಆರೋಪಿಸಿದ ನಂತರ ಕಡತದಿಂದ ಆವರ ಹೇಳಿಕೆಯನ್ನು ತೆಗೆದುಹಾಕಲಾಯಿತು.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಆ ಬಳಿಕ ಪ್ರಧಾನಿ ಮೋದಿ ಮಾತನಾಡುವಾಗ, ಗಾಂಧೀಜಿ ಅಥವಾ ಕಾಂಗ್ರೆಸ್‌ನ ಹೆಸರನ್ನು ಹೇಳದೆ, “ನಾವು ಎಲ್ಲಿಯಾದರೂ ನೆಹರೂ ಅವರ ಹೆಸರನ್ನು ಹೇಳಲು ತಪ್ಪಿಸಿಕೊಂಡರೆ, ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರೂ ಅವರು ಅಂತಹ ಮಹಾನ್ ವ್ಯಕ್ತಿಯಾಗಿದ್ದರು. ನಂತರ ಅವರ್ಯಾರೂ ನೆಹರು ಉಪನಾಮವನ್ನು ತಮ್ಮ ಹೆಸರಿನ ಮುಂದೆ ಏಕೆ ಬಳಸುವುದಿಲ್ಲ, ನೆಹರೂ ಹೆಸರನ್ನು ಬಳಸುವುದರಲ್ಲಿ ನಾಚಿಕೆಗೇಡು ಏನು? ಎಂದೆಲ್ಲಾ ಮಾತನಾಡಿದರು. ಪ್ರಧಾನಿ ಈ ರೀತಿಯ ಅಸಭ್ಯ ಮಾತುಗಳನ್ನಾಡಿದಾಗ ಅದನ್ನು ಕಡತದಿಂದ ತೆಗೆದು ಹಾಕಲ್ಲ, ನಾವು ಸಭ್ಯಮಾತುಗಳೊಂದಿಗೆ ಸಾಕ್ಷಿಸಮೇತ ಟೀಕೆ ಮಾಡಿದರೂ ಕಡತದಿಂದ ತೆಗೆದು ಹಾಕುತ್ತಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ನಿಯಮಗಳ ಪ್ರಕಾರ, ನೀವು ಸಾಕ್ಷಿಗಳಿಲ್ಲದೇ ಏನನ್ನಾದರೂ ಹೇಳುತ್ತಿದ್ದರೆ ಅಥವಾ ನೀವು ಯಾರನ್ನಾದರೂ ಅವಮಾನಿಸುತ್ತಿದ್ದರೆ ಭಾಷಣದ ಭಾಗಗಳನ್ನು ರೆಕಾರ್ಡ್‌ನಿಂದ ತೆಗೆದುಹಾಕಬಹುದು. ನಾನು ಯಾರನ್ನೂ ಅವಮಾನಿಸಿಲ್ಲ, ನಾನು ಸೌಜನ್ಯ ಭಾಷೆಯನ್ನು ಬಳಸಿದ್ದೇನೆ, ನಾನು ಅತ್ಯಂತ ಸಭ್ಯ ಭಾಷೆ ಮತ್ತು ಎಲ್ಲವನ್ನೂ ಬಳಸಿದ್ದೇನೆ” ಎಂದು ರಾಹುಲ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...