Homeಮುಖಪುಟನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

ನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಉಪನಾಮ ಬಳಕೆ ಕುರಿತು ಮಾತನಾಡಿದ್ದನ್ನು ಏಕೆ ದಾಖಲೆಯಿಂದ ತೆಗೆದುಹಾಕಲಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಪ್ರಶ್ನಿಸಿದ್ದಾರೆ. ”ನಾನು ಅತ್ಯಂತ ಸಭ್ಯ ಭಾಷೆ ಬಳಸಿದ್ದೇನೆ ಮತ್ತು ನಾನು ಹೇಳಿದ ಎಲ್ಲ ಹೇಳಿಕೆಗಳಿಗೂ ಸಾಕ್ಷಿಗಳಿವೆ. ಆದರೆ ಪ್ರಧಾನಿ ನೇರವಾಗಿ ನನ್ನನ್ನು ಅವಮಾನಿಸುತ್ತಾರೆ. ನಿಮ್ಮ ಹೆಸರು ರಾಹುಲ್ ಗಾಂಧಿ, ರಾಹುಲ್ ನೆಹರೂ ಅಲ್ಲ ಏಕೆ ಎಂದು ಅವರು ಹೇಳುತ್ತಾರೆ. ಆದರೆ ಅವರ ಈ ಯಾವ ಮಾತುಗಳನ್ನೂ ದಾಖಲೆಯಿಂದ ತೆಗೆದುಹಾಕಲಾಗಿಲ್ಲ. ಆದರೆ ಸತ್ಯ ಯಾವಾಗಲೂ ಹೊರಬರಬರುತ್ತದೆ” ಎಂದು ಅವರು ಕೇರಳದ ವಯಾನಂದ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹೇಳಿದರು.

”ನೀವು ಗಮನಿಸಿ ನೋಡಿ ನಾನು ಮಾತನಾಡುವಾಗ ಅವರು ಮುಖವನ್ನೇ ನೋಡುತ್ತಿದ್ದರು. ಆ ವೇಳೆ ಪ್ರಧಾನಿ ಎಷ್ಟು ಬಾರಿ ನೀರು ಕುಡಿದರು ಮತ್ತು ನೀರು ಕುಡಿಯುವಾಗ ಅವರ ಕೈಗಳು ಹೇಗೆ ನಡುಗುತ್ತಿದ್ದವು ಎಂಬುದನ್ನು ನೋಡಿ… ಪ್ರಧಾನಿ ಅವರು ತುಂಬಾ ಶಕ್ತಿಶಾಲಿ ಮತ್ತು ಎಲ್ಲರೂ ಅವರಿಗೆ ಭಯ ಪಡುತ್ತಾರೆ ಎಂದು ಜನರು ಭಾವಿಸುತ್ತಾರೆ. ಅವರು ಭಯಪಡುವ ಕೊನೆಯ ವಿಷಯವೆಂದರೆ ತಾನು ನರೇಂದ್ರ ಮೋದಿ ಎನ್ನುವ ಕಾರಣಕ್ಕೆ.. ಅವರು ಭಾರತದ ಪ್ರಧಾನಿಯಾಗಿದ್ದರೂ ಪರವಾಗಿಲ್ಲ. ಮುಂದೊಂದು ದಿನ ಅವರು ಸತ್ಯವನ್ನು ಎದುರಿಸಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.

ಗೌತಮ್ ಅದಾನಿ ಹಗರಣದ ಬಗ್ಗೆ ಮಾತನಾಡುವ ಸಮಯದಲ್ಲಿ ಪ್ರಧಾನಿಗೂ ಅದಾನಿಗೂ ಸಂಬಂಧ ಏನು ಎಂದು ರಾಹುಲ್ ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿಯನ್ನು ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸಿದರು. ಅವರ ಈ ಹೇಳಿಕೆಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ರಾಹುಲ್ ಗಾಂಧಿಯವರ ಟೀಕೆಗಳನ್ನು ಕಡತದಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಕಾಂಗ್ರೆಸ್ ಹೇಳಿದೆ.

”2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಸಮೂಹದ ಹಲವು ವ್ಯವಹಾರಗಳಿಗೆ ಅನುಕೂಲವಾಗಲೆಂದು ಭಾರತದ ಆರ್ಥಿಕ ನೀತಿಗಳನ್ನು ಬದಲಿಸಲಾಗಿದೆ” ಎಂದ ರಾಹುಲ್ ಆರೋಪಿಸಿದರು. ಆಗ ಬಿಜೆಪಿಯವರು ಇದು “ಅಸಂಸದೀಯ” ಮತ್ತು “ದಾರಿ ತಪ್ಪಿಸುವ” ತಂತ್ರ ಎಂದು ಆರೋಪಿಸಿದ ನಂತರ ಕಡತದಿಂದ ಆವರ ಹೇಳಿಕೆಯನ್ನು ತೆಗೆದುಹಾಕಲಾಯಿತು.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಆ ಬಳಿಕ ಪ್ರಧಾನಿ ಮೋದಿ ಮಾತನಾಡುವಾಗ, ಗಾಂಧೀಜಿ ಅಥವಾ ಕಾಂಗ್ರೆಸ್‌ನ ಹೆಸರನ್ನು ಹೇಳದೆ, “ನಾವು ಎಲ್ಲಿಯಾದರೂ ನೆಹರೂ ಅವರ ಹೆಸರನ್ನು ಹೇಳಲು ತಪ್ಪಿಸಿಕೊಂಡರೆ, ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರೂ ಅವರು ಅಂತಹ ಮಹಾನ್ ವ್ಯಕ್ತಿಯಾಗಿದ್ದರು. ನಂತರ ಅವರ್ಯಾರೂ ನೆಹರು ಉಪನಾಮವನ್ನು ತಮ್ಮ ಹೆಸರಿನ ಮುಂದೆ ಏಕೆ ಬಳಸುವುದಿಲ್ಲ, ನೆಹರೂ ಹೆಸರನ್ನು ಬಳಸುವುದರಲ್ಲಿ ನಾಚಿಕೆಗೇಡು ಏನು? ಎಂದೆಲ್ಲಾ ಮಾತನಾಡಿದರು. ಪ್ರಧಾನಿ ಈ ರೀತಿಯ ಅಸಭ್ಯ ಮಾತುಗಳನ್ನಾಡಿದಾಗ ಅದನ್ನು ಕಡತದಿಂದ ತೆಗೆದು ಹಾಕಲ್ಲ, ನಾವು ಸಭ್ಯಮಾತುಗಳೊಂದಿಗೆ ಸಾಕ್ಷಿಸಮೇತ ಟೀಕೆ ಮಾಡಿದರೂ ಕಡತದಿಂದ ತೆಗೆದು ಹಾಕುತ್ತಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ನಿಯಮಗಳ ಪ್ರಕಾರ, ನೀವು ಸಾಕ್ಷಿಗಳಿಲ್ಲದೇ ಏನನ್ನಾದರೂ ಹೇಳುತ್ತಿದ್ದರೆ ಅಥವಾ ನೀವು ಯಾರನ್ನಾದರೂ ಅವಮಾನಿಸುತ್ತಿದ್ದರೆ ಭಾಷಣದ ಭಾಗಗಳನ್ನು ರೆಕಾರ್ಡ್‌ನಿಂದ ತೆಗೆದುಹಾಕಬಹುದು. ನಾನು ಯಾರನ್ನೂ ಅವಮಾನಿಸಿಲ್ಲ, ನಾನು ಸೌಜನ್ಯ ಭಾಷೆಯನ್ನು ಬಳಸಿದ್ದೇನೆ, ನಾನು ಅತ್ಯಂತ ಸಭ್ಯ ಭಾಷೆ ಮತ್ತು ಎಲ್ಲವನ್ನೂ ಬಳಸಿದ್ದೇನೆ” ಎಂದು ರಾಹುಲ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...