Homeಮುಖಪುಟನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

ನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

- Advertisement -
- Advertisement -

ಪಾಂಡಿಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾರವರು ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರೂ ಅವರ ಮೇಲೆ ಕ್ರಮವೇಕಿಲ್ಲ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಸೇರಿದಂತೆ ನೂರಾರು ನೆಟ್ಟಿಗರು ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ.

ಫೆಬ್ರವರಿ 28 ರಂದು ಅಮಿತ್‌ ಶಾರವರು ಪಾಂಡಿಚೇರಿಯಲ್ಲಿ ಮಾತನಾಡುತ್ತಾ “ಕೇಂದ್ರ ಸರ್ಕಾರದಿಂದ ಪಾಂಡಿಚೇರಿಗಾಗಿ 15,000 ಕೋಟಿ ರೂಗಳನ್ನು ನೀಡಿದ್ದೇವೆ. ಆದರೆ ಮುಖ್ಯಮಂತ್ರಿ ನಾರಾಯಣಸಾಮಿ ಆ ಹಣದಲ್ಲಿ ಒಂದಷ್ಟು ಕಡಿತ ಮಾಡಿ ಗಾಂಧಿ ಕುಟುಂಬಕ್ಕೆ ನೀಡಿದ್ದಾರೆ” ಎಂದು ಆರೋಪಿಸಿದ್ದರು.

ಈ ಕುರಿತು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, “ಮಾದರಿ ನೀತಿ ಸಂಹಿತೆ ಇರುವ ವೇಳೆ ನಾವು ಇಷ್ಟು ಹಣ ನೀಡಿದ್ದೇವೆ, ದುರುಪಯೋಗವಾಗಿದೆ ಎಂದು ಮಾತನಾಡುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಇದು ಮಾಜಿ ಸಿಎಂ ವಿರುದ್ಧ ಕೇಂದ್ರ ಗೃಹ ಸಚಿವರು ಮಾಡಿದ ಸುಳ್ಳು, ಲಜ್ಜೆಗೆಟ್ಟ ಮತ್ತು ಮಾನಹಾನಿಕರ ದಾಳಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ನಾನು ಚುನಾವಣಾ ಆಯೋಗಕ್ಕೆ ಮತ್ತು ಪಾಂಡಿಚೇರಿ ಚುನಾವಣಾ ದೂರು ನೀಡಿ ಮೂರು ದಿನಗಳಾಗಿದೆ. ದೂರು ನೀಡಿದ ಎರಡು ದಿನಗಳಲ್ಲಿ ಅದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂಬ ನಿಯಮವಿದೆ. ಆದರೆ ನನ್ನ ದೂರನ್ನೇ ಅವರು ದಾಖಲಿಸಿಲ್ಲ. ಏಕೆ ಅಮಿತ್ ಶಾ ವಿ‍ಶೇಷ ವ್ಯಕ್ತಿಯೇ? ಅವರ ಮೇಲೆ ತನಿಖೆ ನಡೆಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು ಇದು ಮಾಜಿ ಸಿಎಂ ವಿರುದ್ಧ ಕೇಂದ್ರ ಗೃಹ ಸಚಿವರು ಮಾಡಿದ ಸುಳ್ಳು, ಲಜ್ಜೆಗೆಟ್ಟ ಮತ್ತು ಮಾನಹಾನಿಕರ ದಾಳಿಯಾಗಿದೆ. ಆದರೂ ಕಾಂಗ್ರೆಸ್ ಆಗಲಿ, ಮಾಜಿ ಸಿಎಂ ನಾರಾಯಣಸಾಮಿಯಾಗಲಿ ಈ ಹೇಳಿಕೆಯ ವಿರುದ್ಧ ದೂರು ನೀಡದಿರುವುದು, ಮಾನಹಾನಿ ದೂರು ದಾಖಲಿಸದಿರುವುದು ನೋವಿನ ವಿಷಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷವು ಇಂತಹ ಅಸಹ್ಯಕರ ಹೇಳಿಕೆ‌ಗಳನ್ನು ಯಾವುದೇ ಕ್ರಮವಿಲ್ಲದೆ ಬದಿಗೆ ಸರಿಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿರುವ ಅವರು, ಎಲ್ಲರೂ ಇದನ್ನು ಚುನಾವಣಾ ಆಯೋಗಕ್ಕೆ ಟ್ಯಾಗ್ ಮಾಡುವ ಮೂಲಕ ಶೀಘ್ರ ವಿಚಾರಣೆಗೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ನಂತರ ನೂರಾರು ಜನರು ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಗೃಹ ಸಚಿವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಾ.8 ರಂದು ಬ್ರಿಟನ್ ಸಂಸತ್ತಿನಲ್ಲಿ ಕೃಷಿ ಕಾಯ್ದೆ & ರೈತ ಹೋರಾಟದ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೇಳಿಕೆ ನೀಡಿರುವುದು ತಪ್ಪಾಗುವುದು ಏಕೆ?!!!
    ಜನರ ಹಣದ ಬಗ್ಗೆ ಜನರಿಗೆ ಮಾಹಿತಿ ನೀಡುವುದು ಹೇಗೆ ತಪ್ಪಾಗುವುದು???!!!
    ಆ ಹೇಳಿಕೆ ಪ್ರಕಾರ ಹಣದ ದುರುಪಯೋಗ ಆಗಿಲ್ಲ ಎಂದಾದರೆ ಮಾನನಷ್ಟ ಮೊಕದ್ದಮೆ ಹಾಕಿ ಅದು ಸೂಕ್ತ.. ಅದು ಸರಿಯಾದ ಹೇಳಿಕೆ ಆದ ಪಕ್ಷದಲ್ಲಿ ಅವರು ಮಾಡಿರುವುದು ತಪ್ಪು ಎಂದು ಹೇಳಲಾಗದು..

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...