Homeಮುಖಪುಟಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

- Advertisement -
- Advertisement -

“ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಕಾಂಗ್ರೆಸ್ ಮಾಡಿದ ಆರೋಪಗಳ ಮೇಲೆ ಕಳೆದ ನಾಲ್ಕು ವರ್ಷಗಳಲ್ಲಿ ಕ್ರಮ ಕೈಗೊಂಡಿಲ್ಲ ಏಕೆ?” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಅವರ ಮಾಜಿ ಉಪನಾಯಕ ಸಚೀನ್ ಪೈಲಟ್ ಪ್ರಶ್ನೆ ಮಾಡಿದ್ದಾರೆ.

“ಕೇಂದ್ರದ ಬಿಜೆಪಿ ನಾಯಕರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಿಸುತ್ತಾರೆ. ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸುತ್ತಾರೆ. ಈ ರೀತಿ ಅವರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ. ಆದರೆ ರಾಜಸ್ಥಾನದಲ್ಲಿ ಬಿಜೆಪಿ ನಾಯಕರು ಭ್ರಷ್ಟಾಚಾರ ಮಾಡಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಶ್ಚರ್ಯವಾಗುತ್ತದೆ” ಎಂದರು.

2018 ರ ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ತಮ್ಮದೇ ಪಕ್ಷದ ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ. ಗೆಹ್ಲೋಟ್ ವಿರುದ್ಧ ಸತತ ಇದು ನಾಲ್ಕನೇ ಭಾರೀ ಪೈಲಟ್ ದಾಳಿ ನಡೆಸಿದ್ದಾರೆ.

2013 ಮತ್ತು 2018 ವರೆಗೆ ಪೈಲಟ್ ಅವರು ರಾಜ್ಯ ಪಕ್ಷದ ಮುಖ್ಯಸ್ಥರಾಗಿದ್ದಾಗ ಕಾಂಗ್ರೆಸ್ ಪ್ರತಿಪಕ್ಷದಲ್ಲಿತ್ತು. ಈ ಸಂದರ್ಭದಲ್ಲಿ ವಸುಂಧರಾ ರಾಜೇ ನೇತೃತ್ವದ ಸರ್ಕಾರ ರಾಜ್ಯದಲ್ಲಿತ್ತು. ಆಗ ಸರ್ಕಾರ ಮಾಡಿದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೆ ಮತ್ತು ಕಾಂಗ್ರೆಸ್ ಪಕ್ಷವು ಅವರ ವಿರುದ್ಧ ಸಾಮೂಹಿಕವಾಗಿ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿತ್ತು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಅವುಗಳ ಮೇಲೆ ತನಿಖೆ ನಡೆಸಿಲ್ಲ ಮತ್ತು ಯಾವುದೇ ಕ್ರಮ ಕೈಗೊಂಡಿಲ್ಲ.

ಪಾಲಿ ಜಿಲ್ಲೆಯಲ್ಲಿ ನಡೆದ ಕಿಸಾನ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪೈಲಟ್, “ಉಳಿದ 11 ತಿಂಗಳ ಆಡಳಿತದಲ್ಲಿ ಸರ್ಕಾರವು ಕ್ರಮ ತೆಗೆದುಕೊಳ್ಳುತ್ತದೆ” ಎಂದು ಅವರು ಆಶಿಸಿದರು.

“ನನಗೆ ಸೇಡು ತೀರಿಸಿಕೊಳ್ಳಲು ಇಷ್ಟವಿಲ್ಲ ಆದರೆ ನಾವೇ  ಅವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೇವೆ. ಈಗ ನಾವೇ ಅಧಿಕಾರದಲ್ಲಿದ್ದಾಗ ಕ್ರಮ ತೆಗೆದುಕೊಳ್ಳದಿದ್ದರೆ ಹೇಗೆ? ನಾವು ಆಗಿನ ವಸುಂಧರಾ ರಾಜೇ ಸರ್ಕಾರಕ್ಕೆ ನಿರಂತರವಾಗಿ ಸವಾಲು ಹಾಕಿದ್ದೇವೆ, ಪ್ರತಿ ಹಗರಣದಲ್ಲಿ ಅವರ ವಿರುದ್ಧ ಆರೋಪ ಕೇಳಿಬಂದಿದೆ” ಎಂದು ಪೈಲಟ್ ಹೇಳಿದರು.

ಇದನ್ನೂ ಓದಿ: ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

“ನಾವು ಅಧಿಕಾರಕ್ಕೆ ಬಂದ ನಂತರ, ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ವಿರುದ್ಧ ಕ್ರಮ ತಗೆದುಕೊಳ್ಳಬೇಕು ಆಗ ಮಾತ್ರ ನಾವು ಜನರ ನಂಬಿಕೆಯನ್ನು ಉಳಿಸಿಕೊಳ್ಳಲು ಸಾಧ್ಯ” ಎಂದರು.

“2008 ರಿಂದ 2013ರವರೆಗೆ ಇದ್ದ ಬಿಜೆಪಿ ಸರ್ಕಾರದ ಮೇಲೆ ಮಾಡಲಾದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ಮಾಡಲು ಮಾಥೂರ್ ಆಯೋಗವನ್ನು ರಚಿಸಲಾಗಿತ್ತು. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ” ಎಂದು ಹೇಳಿದರು.

ಸರ್ಕಾರಕ್ಕೆ ಈಗ ನಾಲ್ಕು ವರ್ಷಗಳು ಕಳೆದಿವೆ, ಇನ್ನು ಕೇವಲ 11 ತಿಂಗಳು ಮಾತ್ರ ಬಾಕಿ ಇದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಪೈಲಟ್ ಹೇಳಿದರು.

ಸೋಮವಾರ ಜಾಟ್ ಪ್ರಾಬಲ್ಯದ ನಾಗೌರ್‌ನಿಂದ ಆರಂಭಿಸಿದ ತಮ್ಮ ರ್ಯಾಲಿಯಲ್ಲಿ ಪೈಲಟ್ ಅವರು, ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು, ಪದೇ ಪದೇ ಪೇಪರ್ ಸೋರಿಕೆ, ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುವುದು ಮತ್ತು ನಿವೃತ್ತ ಅಧಿಕಾರಿಗಳಿಗೂ ರಾಜಕೀಯ ನೇಮಕಾತಿಗಳನ್ನು ನೀಡುತ್ತಿರುವ ಘಟನೆಗಳ ಬಗ್ಗೆ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...