Homeಮುಖಪುಟಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

- Advertisement -
- Advertisement -

“ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಕಾಂಗ್ರೆಸ್ ಮಾಡಿದ ಆರೋಪಗಳ ಮೇಲೆ ಕಳೆದ ನಾಲ್ಕು ವರ್ಷಗಳಲ್ಲಿ ಕ್ರಮ ಕೈಗೊಂಡಿಲ್ಲ ಏಕೆ?” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಅವರ ಮಾಜಿ ಉಪನಾಯಕ ಸಚೀನ್ ಪೈಲಟ್ ಪ್ರಶ್ನೆ ಮಾಡಿದ್ದಾರೆ.

“ಕೇಂದ್ರದ ಬಿಜೆಪಿ ನಾಯಕರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಿಸುತ್ತಾರೆ. ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸುತ್ತಾರೆ. ಈ ರೀತಿ ಅವರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ. ಆದರೆ ರಾಜಸ್ಥಾನದಲ್ಲಿ ಬಿಜೆಪಿ ನಾಯಕರು ಭ್ರಷ್ಟಾಚಾರ ಮಾಡಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಶ್ಚರ್ಯವಾಗುತ್ತದೆ” ಎಂದರು.

2018 ರ ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ತಮ್ಮದೇ ಪಕ್ಷದ ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ. ಗೆಹ್ಲೋಟ್ ವಿರುದ್ಧ ಸತತ ಇದು ನಾಲ್ಕನೇ ಭಾರೀ ಪೈಲಟ್ ದಾಳಿ ನಡೆಸಿದ್ದಾರೆ.

2013 ಮತ್ತು 2018 ವರೆಗೆ ಪೈಲಟ್ ಅವರು ರಾಜ್ಯ ಪಕ್ಷದ ಮುಖ್ಯಸ್ಥರಾಗಿದ್ದಾಗ ಕಾಂಗ್ರೆಸ್ ಪ್ರತಿಪಕ್ಷದಲ್ಲಿತ್ತು. ಈ ಸಂದರ್ಭದಲ್ಲಿ ವಸುಂಧರಾ ರಾಜೇ ನೇತೃತ್ವದ ಸರ್ಕಾರ ರಾಜ್ಯದಲ್ಲಿತ್ತು. ಆಗ ಸರ್ಕಾರ ಮಾಡಿದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೆ ಮತ್ತು ಕಾಂಗ್ರೆಸ್ ಪಕ್ಷವು ಅವರ ವಿರುದ್ಧ ಸಾಮೂಹಿಕವಾಗಿ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿತ್ತು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಅವುಗಳ ಮೇಲೆ ತನಿಖೆ ನಡೆಸಿಲ್ಲ ಮತ್ತು ಯಾವುದೇ ಕ್ರಮ ಕೈಗೊಂಡಿಲ್ಲ.

ಪಾಲಿ ಜಿಲ್ಲೆಯಲ್ಲಿ ನಡೆದ ಕಿಸಾನ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪೈಲಟ್, “ಉಳಿದ 11 ತಿಂಗಳ ಆಡಳಿತದಲ್ಲಿ ಸರ್ಕಾರವು ಕ್ರಮ ತೆಗೆದುಕೊಳ್ಳುತ್ತದೆ” ಎಂದು ಅವರು ಆಶಿಸಿದರು.

“ನನಗೆ ಸೇಡು ತೀರಿಸಿಕೊಳ್ಳಲು ಇಷ್ಟವಿಲ್ಲ ಆದರೆ ನಾವೇ  ಅವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೇವೆ. ಈಗ ನಾವೇ ಅಧಿಕಾರದಲ್ಲಿದ್ದಾಗ ಕ್ರಮ ತೆಗೆದುಕೊಳ್ಳದಿದ್ದರೆ ಹೇಗೆ? ನಾವು ಆಗಿನ ವಸುಂಧರಾ ರಾಜೇ ಸರ್ಕಾರಕ್ಕೆ ನಿರಂತರವಾಗಿ ಸವಾಲು ಹಾಕಿದ್ದೇವೆ, ಪ್ರತಿ ಹಗರಣದಲ್ಲಿ ಅವರ ವಿರುದ್ಧ ಆರೋಪ ಕೇಳಿಬಂದಿದೆ” ಎಂದು ಪೈಲಟ್ ಹೇಳಿದರು.

ಇದನ್ನೂ ಓದಿ: ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

“ನಾವು ಅಧಿಕಾರಕ್ಕೆ ಬಂದ ನಂತರ, ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ವಿರುದ್ಧ ಕ್ರಮ ತಗೆದುಕೊಳ್ಳಬೇಕು ಆಗ ಮಾತ್ರ ನಾವು ಜನರ ನಂಬಿಕೆಯನ್ನು ಉಳಿಸಿಕೊಳ್ಳಲು ಸಾಧ್ಯ” ಎಂದರು.

“2008 ರಿಂದ 2013ರವರೆಗೆ ಇದ್ದ ಬಿಜೆಪಿ ಸರ್ಕಾರದ ಮೇಲೆ ಮಾಡಲಾದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ಮಾಡಲು ಮಾಥೂರ್ ಆಯೋಗವನ್ನು ರಚಿಸಲಾಗಿತ್ತು. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ” ಎಂದು ಹೇಳಿದರು.

ಸರ್ಕಾರಕ್ಕೆ ಈಗ ನಾಲ್ಕು ವರ್ಷಗಳು ಕಳೆದಿವೆ, ಇನ್ನು ಕೇವಲ 11 ತಿಂಗಳು ಮಾತ್ರ ಬಾಕಿ ಇದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಪೈಲಟ್ ಹೇಳಿದರು.

ಸೋಮವಾರ ಜಾಟ್ ಪ್ರಾಬಲ್ಯದ ನಾಗೌರ್‌ನಿಂದ ಆರಂಭಿಸಿದ ತಮ್ಮ ರ್ಯಾಲಿಯಲ್ಲಿ ಪೈಲಟ್ ಅವರು, ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು, ಪದೇ ಪದೇ ಪೇಪರ್ ಸೋರಿಕೆ, ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುವುದು ಮತ್ತು ನಿವೃತ್ತ ಅಧಿಕಾರಿಗಳಿಗೂ ರಾಜಕೀಯ ನೇಮಕಾತಿಗಳನ್ನು ನೀಡುತ್ತಿರುವ ಘಟನೆಗಳ ಬಗ್ಗೆ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...