Homeಮುಖಪುಟಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

- Advertisement -
- Advertisement -

“ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಕಾಂಗ್ರೆಸ್ ಮಾಡಿದ ಆರೋಪಗಳ ಮೇಲೆ ಕಳೆದ ನಾಲ್ಕು ವರ್ಷಗಳಲ್ಲಿ ಕ್ರಮ ಕೈಗೊಂಡಿಲ್ಲ ಏಕೆ?” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಅವರ ಮಾಜಿ ಉಪನಾಯಕ ಸಚೀನ್ ಪೈಲಟ್ ಪ್ರಶ್ನೆ ಮಾಡಿದ್ದಾರೆ.

“ಕೇಂದ್ರದ ಬಿಜೆಪಿ ನಾಯಕರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಿಸುತ್ತಾರೆ. ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸುತ್ತಾರೆ. ಈ ರೀತಿ ಅವರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ. ಆದರೆ ರಾಜಸ್ಥಾನದಲ್ಲಿ ಬಿಜೆಪಿ ನಾಯಕರು ಭ್ರಷ್ಟಾಚಾರ ಮಾಡಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಶ್ಚರ್ಯವಾಗುತ್ತದೆ” ಎಂದರು.

2018 ರ ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ತಮ್ಮದೇ ಪಕ್ಷದ ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ. ಗೆಹ್ಲೋಟ್ ವಿರುದ್ಧ ಸತತ ಇದು ನಾಲ್ಕನೇ ಭಾರೀ ಪೈಲಟ್ ದಾಳಿ ನಡೆಸಿದ್ದಾರೆ.

2013 ಮತ್ತು 2018 ವರೆಗೆ ಪೈಲಟ್ ಅವರು ರಾಜ್ಯ ಪಕ್ಷದ ಮುಖ್ಯಸ್ಥರಾಗಿದ್ದಾಗ ಕಾಂಗ್ರೆಸ್ ಪ್ರತಿಪಕ್ಷದಲ್ಲಿತ್ತು. ಈ ಸಂದರ್ಭದಲ್ಲಿ ವಸುಂಧರಾ ರಾಜೇ ನೇತೃತ್ವದ ಸರ್ಕಾರ ರಾಜ್ಯದಲ್ಲಿತ್ತು. ಆಗ ಸರ್ಕಾರ ಮಾಡಿದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೆ ಮತ್ತು ಕಾಂಗ್ರೆಸ್ ಪಕ್ಷವು ಅವರ ವಿರುದ್ಧ ಸಾಮೂಹಿಕವಾಗಿ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿತ್ತು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಅವುಗಳ ಮೇಲೆ ತನಿಖೆ ನಡೆಸಿಲ್ಲ ಮತ್ತು ಯಾವುದೇ ಕ್ರಮ ಕೈಗೊಂಡಿಲ್ಲ.

ಪಾಲಿ ಜಿಲ್ಲೆಯಲ್ಲಿ ನಡೆದ ಕಿಸಾನ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪೈಲಟ್, “ಉಳಿದ 11 ತಿಂಗಳ ಆಡಳಿತದಲ್ಲಿ ಸರ್ಕಾರವು ಕ್ರಮ ತೆಗೆದುಕೊಳ್ಳುತ್ತದೆ” ಎಂದು ಅವರು ಆಶಿಸಿದರು.

“ನನಗೆ ಸೇಡು ತೀರಿಸಿಕೊಳ್ಳಲು ಇಷ್ಟವಿಲ್ಲ ಆದರೆ ನಾವೇ  ಅವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೇವೆ. ಈಗ ನಾವೇ ಅಧಿಕಾರದಲ್ಲಿದ್ದಾಗ ಕ್ರಮ ತೆಗೆದುಕೊಳ್ಳದಿದ್ದರೆ ಹೇಗೆ? ನಾವು ಆಗಿನ ವಸುಂಧರಾ ರಾಜೇ ಸರ್ಕಾರಕ್ಕೆ ನಿರಂತರವಾಗಿ ಸವಾಲು ಹಾಕಿದ್ದೇವೆ, ಪ್ರತಿ ಹಗರಣದಲ್ಲಿ ಅವರ ವಿರುದ್ಧ ಆರೋಪ ಕೇಳಿಬಂದಿದೆ” ಎಂದು ಪೈಲಟ್ ಹೇಳಿದರು.

ಇದನ್ನೂ ಓದಿ: ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

“ನಾವು ಅಧಿಕಾರಕ್ಕೆ ಬಂದ ನಂತರ, ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ವಿರುದ್ಧ ಕ್ರಮ ತಗೆದುಕೊಳ್ಳಬೇಕು ಆಗ ಮಾತ್ರ ನಾವು ಜನರ ನಂಬಿಕೆಯನ್ನು ಉಳಿಸಿಕೊಳ್ಳಲು ಸಾಧ್ಯ” ಎಂದರು.

“2008 ರಿಂದ 2013ರವರೆಗೆ ಇದ್ದ ಬಿಜೆಪಿ ಸರ್ಕಾರದ ಮೇಲೆ ಮಾಡಲಾದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ಮಾಡಲು ಮಾಥೂರ್ ಆಯೋಗವನ್ನು ರಚಿಸಲಾಗಿತ್ತು. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ” ಎಂದು ಹೇಳಿದರು.

ಸರ್ಕಾರಕ್ಕೆ ಈಗ ನಾಲ್ಕು ವರ್ಷಗಳು ಕಳೆದಿವೆ, ಇನ್ನು ಕೇವಲ 11 ತಿಂಗಳು ಮಾತ್ರ ಬಾಕಿ ಇದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಪೈಲಟ್ ಹೇಳಿದರು.

ಸೋಮವಾರ ಜಾಟ್ ಪ್ರಾಬಲ್ಯದ ನಾಗೌರ್‌ನಿಂದ ಆರಂಭಿಸಿದ ತಮ್ಮ ರ್ಯಾಲಿಯಲ್ಲಿ ಪೈಲಟ್ ಅವರು, ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು, ಪದೇ ಪದೇ ಪೇಪರ್ ಸೋರಿಕೆ, ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುವುದು ಮತ್ತು ನಿವೃತ್ತ ಅಧಿಕಾರಿಗಳಿಗೂ ರಾಜಕೀಯ ನೇಮಕಾತಿಗಳನ್ನು ನೀಡುತ್ತಿರುವ ಘಟನೆಗಳ ಬಗ್ಗೆ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...