Homeಮುಖಪುಟಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

- Advertisement -
- Advertisement -

“ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಕಾಂಗ್ರೆಸ್ ಮಾಡಿದ ಆರೋಪಗಳ ಮೇಲೆ ಕಳೆದ ನಾಲ್ಕು ವರ್ಷಗಳಲ್ಲಿ ಕ್ರಮ ಕೈಗೊಂಡಿಲ್ಲ ಏಕೆ?” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಅವರ ಮಾಜಿ ಉಪನಾಯಕ ಸಚೀನ್ ಪೈಲಟ್ ಪ್ರಶ್ನೆ ಮಾಡಿದ್ದಾರೆ.

“ಕೇಂದ್ರದ ಬಿಜೆಪಿ ನಾಯಕರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಿಸುತ್ತಾರೆ. ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸುತ್ತಾರೆ. ಈ ರೀತಿ ಅವರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ. ಆದರೆ ರಾಜಸ್ಥಾನದಲ್ಲಿ ಬಿಜೆಪಿ ನಾಯಕರು ಭ್ರಷ್ಟಾಚಾರ ಮಾಡಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಶ್ಚರ್ಯವಾಗುತ್ತದೆ” ಎಂದರು.

2018 ರ ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ತಮ್ಮದೇ ಪಕ್ಷದ ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ. ಗೆಹ್ಲೋಟ್ ವಿರುದ್ಧ ಸತತ ಇದು ನಾಲ್ಕನೇ ಭಾರೀ ಪೈಲಟ್ ದಾಳಿ ನಡೆಸಿದ್ದಾರೆ.

2013 ಮತ್ತು 2018 ವರೆಗೆ ಪೈಲಟ್ ಅವರು ರಾಜ್ಯ ಪಕ್ಷದ ಮುಖ್ಯಸ್ಥರಾಗಿದ್ದಾಗ ಕಾಂಗ್ರೆಸ್ ಪ್ರತಿಪಕ್ಷದಲ್ಲಿತ್ತು. ಈ ಸಂದರ್ಭದಲ್ಲಿ ವಸುಂಧರಾ ರಾಜೇ ನೇತೃತ್ವದ ಸರ್ಕಾರ ರಾಜ್ಯದಲ್ಲಿತ್ತು. ಆಗ ಸರ್ಕಾರ ಮಾಡಿದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೆ ಮತ್ತು ಕಾಂಗ್ರೆಸ್ ಪಕ್ಷವು ಅವರ ವಿರುದ್ಧ ಸಾಮೂಹಿಕವಾಗಿ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿತ್ತು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಅವುಗಳ ಮೇಲೆ ತನಿಖೆ ನಡೆಸಿಲ್ಲ ಮತ್ತು ಯಾವುದೇ ಕ್ರಮ ಕೈಗೊಂಡಿಲ್ಲ.

ಪಾಲಿ ಜಿಲ್ಲೆಯಲ್ಲಿ ನಡೆದ ಕಿಸಾನ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪೈಲಟ್, “ಉಳಿದ 11 ತಿಂಗಳ ಆಡಳಿತದಲ್ಲಿ ಸರ್ಕಾರವು ಕ್ರಮ ತೆಗೆದುಕೊಳ್ಳುತ್ತದೆ” ಎಂದು ಅವರು ಆಶಿಸಿದರು.

“ನನಗೆ ಸೇಡು ತೀರಿಸಿಕೊಳ್ಳಲು ಇಷ್ಟವಿಲ್ಲ ಆದರೆ ನಾವೇ  ಅವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೇವೆ. ಈಗ ನಾವೇ ಅಧಿಕಾರದಲ್ಲಿದ್ದಾಗ ಕ್ರಮ ತೆಗೆದುಕೊಳ್ಳದಿದ್ದರೆ ಹೇಗೆ? ನಾವು ಆಗಿನ ವಸುಂಧರಾ ರಾಜೇ ಸರ್ಕಾರಕ್ಕೆ ನಿರಂತರವಾಗಿ ಸವಾಲು ಹಾಕಿದ್ದೇವೆ, ಪ್ರತಿ ಹಗರಣದಲ್ಲಿ ಅವರ ವಿರುದ್ಧ ಆರೋಪ ಕೇಳಿಬಂದಿದೆ” ಎಂದು ಪೈಲಟ್ ಹೇಳಿದರು.

ಇದನ್ನೂ ಓದಿ: ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

“ನಾವು ಅಧಿಕಾರಕ್ಕೆ ಬಂದ ನಂತರ, ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ವಿರುದ್ಧ ಕ್ರಮ ತಗೆದುಕೊಳ್ಳಬೇಕು ಆಗ ಮಾತ್ರ ನಾವು ಜನರ ನಂಬಿಕೆಯನ್ನು ಉಳಿಸಿಕೊಳ್ಳಲು ಸಾಧ್ಯ” ಎಂದರು.

“2008 ರಿಂದ 2013ರವರೆಗೆ ಇದ್ದ ಬಿಜೆಪಿ ಸರ್ಕಾರದ ಮೇಲೆ ಮಾಡಲಾದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ಮಾಡಲು ಮಾಥೂರ್ ಆಯೋಗವನ್ನು ರಚಿಸಲಾಗಿತ್ತು. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ” ಎಂದು ಹೇಳಿದರು.

ಸರ್ಕಾರಕ್ಕೆ ಈಗ ನಾಲ್ಕು ವರ್ಷಗಳು ಕಳೆದಿವೆ, ಇನ್ನು ಕೇವಲ 11 ತಿಂಗಳು ಮಾತ್ರ ಬಾಕಿ ಇದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಪೈಲಟ್ ಹೇಳಿದರು.

ಸೋಮವಾರ ಜಾಟ್ ಪ್ರಾಬಲ್ಯದ ನಾಗೌರ್‌ನಿಂದ ಆರಂಭಿಸಿದ ತಮ್ಮ ರ್ಯಾಲಿಯಲ್ಲಿ ಪೈಲಟ್ ಅವರು, ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು, ಪದೇ ಪದೇ ಪೇಪರ್ ಸೋರಿಕೆ, ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುವುದು ಮತ್ತು ನಿವೃತ್ತ ಅಧಿಕಾರಿಗಳಿಗೂ ರಾಜಕೀಯ ನೇಮಕಾತಿಗಳನ್ನು ನೀಡುತ್ತಿರುವ ಘಟನೆಗಳ ಬಗ್ಗೆ ವಾಗ್ದಾಳಿ ನಡೆಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...