Homeಮುಖಪುಟಬಿಜೆಪಿ ಸಂಸದನ ವಿರುದ್ಧ ಗಂಭೀರ ಆರೋಪಗಳಿದ್ದರೂ ಕ್ರಮ ಏಕೆ ಕೈಗೊಂಡಿಲ್ಲ?: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ...

ಬಿಜೆಪಿ ಸಂಸದನ ವಿರುದ್ಧ ಗಂಭೀರ ಆರೋಪಗಳಿದ್ದರೂ ಕ್ರಮ ಏಕೆ ಕೈಗೊಂಡಿಲ್ಲ?: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

- Advertisement -
- Advertisement -

ದೇಶದ ಅಗ್ರ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಕ್ರಮ ಆಗಿಲ್ಲ. ಕೇಂದ್ರ ಸರ್ಕಾರದ ಈ ನಿಷ್ಕ್ರಿಯತೆಯ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರ ವಿರುದ್ಧದ ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಲಾದ ಆರೋಪಗಳನ್ನು ವಿವರಿಸುವ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ ಅವರು, ”ನರೇಂದ್ರ ಮೋದಿಜಿ, ಈ ಗಂಭೀರ ಆರೋಪಗಳನ್ನು ಓದಿ ಮತ್ತು ಆರೋಪಿಗಳ ವಿರುದ್ಧ ಇಲ್ಲಿಯವರೆಗೆ ಏಕೆ ಕ್ರಮ ಕೈಗೊಂಡಿಲ್ಲ ಎಂಬುದನ್ನು ದೇಶಕ್ಕೆ ತಿಳಿಸಿ”  ಎಂದು ಬರೆದಿದ್ದಾರೆ.

ದೆಹಲಿ ಪೊಲಿಸರು ಅನುಚಿತ ಸ್ಪರ್ಶದ ಎರಡು ಎಫ್​ಐಆರ್​ ಮತ್ತು 10 ದೂರುಗಳನ್ನು ದಾಖಲಿಸಿದ್ದಾರೆ. ದೂರಿನಲ್ಲಿ ಅನುಚಿತವಾಗಿ ಸ್ಪರ್ಶಿಸುವುದು, ಬೆದರಿಕೆ, ಲೈಂಗಿಕ ಕಿರುಕುಳ, ಅನುಚಿತ ವರ್ತನೆ, ಯಾವುದೇ ನೆಪದಲ್ಲಿ ಸ್ಥನಗಳನ್ನು ಮುಟ್ಟುವುದು ಸೇರಿದಂತೆ 10 ಪ್ರಕರಣಗಳು ದಾಖಲಾಗಿವೆ.

ಕುಸ್ತಿಪಟುಗಳು ಏಪ್ರಿಲ್ 21 ರಂದು ಭಾರತದ ವ್ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಬ್ರಿಜ್ ಭೂಷಣ್ ವಿರುದ್ಧ ದೂರು ನೀಡಿದ್ದರು. ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ನಂತರ, ದೆಹಲಿ ಪೊಲೀಸರು ಏಪ್ರಿಲ್ 28 ರಂದು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಈ ಎರಡೂ ಎಫ್‌ಐಆರ್‌ಗಳ ಪ್ರತಿಗಳು ಮುನ್ನೆಲೆಗೆ ಬಂದಿವೆ. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆ, ಲೈಂಗಿಕ ಕಿರುಕುಳ, ಹಿಂಬಾಲಿಸುವುದು ಮತ್ತು ಸಾಮಾನ್ಯ ಉದ್ದೇಶ ಸೇರಿದಂತೆ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಎಫ್‌ಐಆರ್‌ನಲ್ಲಿ ಕ್ರೀಡಾಪಟುಗಳು ಉಲ್ಲೇಖಿಸಿದ ಅಂಶಗಳು ಇಲ್ಲಿವೆ..

ಅದೇ ವರದಿಯನ್ನು ಉಲ್ಲೇಖಿಸಿ, ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ”ಈ ಮನುಷ್ಯನನ್ನು (ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್) ರಕ್ಷಿಸುವುದನ್ನು ಪ್ರಧಾನಿ ಮೋದಿ ಮುಂದುವರೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

”ರಾಷ್ಟ್ರದ ಪ್ರಧಾನಿ ಈ ವ್ಯಕ್ತಿಯನ್ನು ರಕ್ಷಿಸುವುದನ್ನು ಮುಂದುವರೆಸಿದ್ದಾರೆ. ರಾಷ್ಟ್ರದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವರು ಈ ವ್ಯಕ್ತಿಯ ಬಗ್ಗೆ ಮೌನವಾಗಿದ್ದಾರೆ. ರಾಷ್ಟ್ರದ ಕ್ರೀಡಾ ಸಚಿವರು ಈ ವ್ಯಕ್ತಿ ವ್ಯಕ್ತಿಯ ವಿಚಾರದಲ್ಲಿ ಕಣ್ಣು ಮುಚ್ಚಿ ಕುಳಿತಿದ್ದಾರೆ. ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ವಿಳಂಬ ಮಾಡುತ್ತಲೇ ಇದ್ದಾರೆ. ಈ ವ್ಯಕ್ತಿಯನ್ನು ಸರ್ಕಾರ ಮತ್ತು ಬಿಜೆಪಿ ಏಕೆ ರಕ್ಷಿಸುತ್ತಿದೆ? ಯಾವುದೇ ಉತ್ತರಗಳು?” ಎಂದು ಪ್ರಿಯಾಂಕಾ ಚತುರ್ವೇದಿ ಎಕ್ಸ್‌ಪ್ರೆಸ್ ವರದಿಯೊಂದಿಗೆ ಟ್ವೀಟ್ ಮಾಡಿದ್ದಾರೆ.

ಹೆಚ್ಚುವರಿಯಾಗಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿಯೂ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಎಫ್‌ಐಆರ್‌ನಲ್ಲಿ ಡಬ್ಲ್ಯುಎಫ್‌ಐ ಕಾರ್ಯದರ್ಶಿ ವಿನೋದ್ ತೋಮರ್ ಹೆಸರೂ ಇದೆ.

2016 ರಿಂದ ಕುಸ್ತಿ ಚಾಂಪಿಯನ್‌ಶಿಪ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ 17 ವರ್ಷದ ಬಾಲಕಿಯ ತಂದೆ ಆಕೆಯ ಪರವಾಗಿ ಪೊಲೀಸ್ ದೂರು ದಾಖಲಿಸಿದ್ದಾರೆ.

”ಸಿಂಗ್ ಬಲವಂತವಾಗಿ ಹುಡುಗಿಯನ್ನು ತನ್ನ ಕಡೆಗೆ ಎಳೆದುಕೊಂಡು ಅವಳನ್ನು ಬಿಗಿಯಾಗಿ ಹಿಡಿದಿದ್ದ, ಅವಳು ಚಲಿಸಲು ಅಥವಾ ತನ್ನ ಹಿಡಿತದಿಂದ ತನ್ನನ್ನು ಬಿಡಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಆ ಅಪ್ರಾಪ್ತ ಬಾಲಕಿಯ ತಂದೆ FIR ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...