Homeಮುಖಪುಟಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಚುನಾವಣಾ ಆಯೋಗವು ಅಸ್ಸಾಂನಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ನಡೆಸುತ್ತಿದೆ, ಇದು ಮತದಾರರ ಪಟ್ಟಿಯ ಸಾಮಾನ್ಯ ನವೀಕರಣಗಳಂತೆಯೇ ಇರುತ್ತದೆ.

ಪಶ್ಚಿಮ ಬಂಗಾಳದ ಎಸ್‌ಐಆರ್‌ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ತನ್ನ ಅರ್ಜಿಯ ಪರ ವಾದ ಮಂಡಿಸಲು ಸ್ವತಃ ಮಮತಾ ಬ್ಯಾನರ್ಜಿಯೇ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ವರದಿಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್ ಮುಂದೆ ವೈಯಕ್ತಿಕವಾಗಿ ಹಾಜರಾಗಿ ಮೌಖಿಕ ವಾದ ಮಂಡಿಸುತ್ತಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು.

ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಲು ಅನುಮತಿ ಕೋರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಪಶ್ಚಿಮ ಬಂಗಾಳದ ನಿವಾಸಿಗಳು ಎದುರಿಸುತ್ತಿರುವ ವಾಸ್ತವಗಳ ಬಗ್ಗೆ ತನಗೆ ಅರಿವಿದೆ ಎಂದು ಅವರು ತಮ್ಮ ಮಧ್ಯಂತರ ಅರ್ಜಿಯಲ್ಲಿ ತಿಳಿಸಿದ್ದಾರೆ ವರದಿ ತಿಳಿಸಿದೆ.

ತಾನು ವೈಯಕ್ತಿಕವಾಗಿ ಹಾಜರಾಗುವುದರಿಂದ ಪ್ರಕರಣದ ಪರಿಣಾಮಕಾರಿ ತೀರ್ಪು ನೀಡಲು ನ್ಯಾಯಾಲಯಕ್ಕೆ ಸಹಾಯವಾಗುತ್ತದೆ ಎಂದು ಮಮತಾ ಬ್ಯಾನರ್ಜಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯ ವಿರುದ್ದ ಜನವರಿ 28ರಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎಸ್‌ಐಆರ್ ಚುನಾವಣಾ ಆಯೋಗದ ಅಪಾರದರ್ಶಕ, ಆತುರದ, ಅಸಂವಿಧಾನಿಕ ಮತ್ತು ಕಾನೂನುಬಾಹಿರ ಕ್ರಮ ಎಂದು ಅವರು ವಾದಿಸಿದ್ದು, ಲಕ್ಷಾಂತರ ಜನರ ಹಕ್ಕು ಕಸಿದುಕೊಳ್ಳಲಿದೆ ಎಂದು ಹೇಳಿದ್ದಾರೆ.

‘ತಾರ್ಕಿಕ ವ್ಯತ್ಯಾಸ’ (Logical Discrepancy-LD) ವರ್ಗದ ಅಡಿಯಲ್ಲಿ ವ್ಯಕ್ತಿಗಳ ವರ್ಗೀಕರಣದಲ್ಲಿ ಗಂಭೀರ ಅಕ್ರಮಗಳಿವೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳ ಹೊರತಾಗಿಯೂ ಅಂತಹ ವ್ಯಕ್ತಿಗಳ ಪಟ್ಟಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಧಿಕೃತ ಪೋರ್ಟಲ್‌ನಲ್ಲಿ ಎಲ್‌ಡಿ ಪಟ್ಟಿಯನ್ನು ಪ್ರಕಟಿಸದಿರುವುದು ಪಾರದರ್ಶಕತೆಯ ಕೊರತೆಗೆ ಕಾರಣವಾಗಿದೆ. ಈ ಪಟ್ಟಿಯನ್ನು ಸಾರ್ವಜನಿಕಗೊಳಿಸದ ಕಾರಣ, ಇದರಿಂದ ಬಾಧಿತರಾಗುವ ವ್ಯಕ್ತಿಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸಲು ಅಥವಾ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಸಿಗದಂತಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಮೇಲೆ ನನಗೆ ನಂಬಿಕೆ ಇಲ್ಲ. ಈ ಹೊಸ ಪ್ರಕ್ರಿಯೆಯ ಬದಲಾಗಿ ಕಳೆದ ವರ್ಷ ಸಿದ್ಧಪಡಿಸಲಾದ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯ ಆಧಾರದ ಮೇಲೆಯೇ ಚುನಾವಣೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅರ್ಜಿ ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ರಾಜ್ಯದಲ್ಲಿ (ಪಶ್ಚಿಮ ಬಂಗಾಳದಲ್ಲಿ) “ಹಗೆತನದ ವಾತಾವರಣ” ಇದೆ ಎಂದು ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಮಮತಾ ಬ್ಯಾನರ್ಜಿ ಅವರ ಮನವಿಯ ಮೇರೆಗೆ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿರುವ ನ್ಯಾಯ ಪೀಠ, ಸೋಮವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ “ತಾರ್ಕಿಕ ವ್ಯತ್ಯಾಸಗಳು” ಎಂದು ವರ್ಗೀಕರಿಸಲಾದ ಹೆಸರು ಹೊಂದಾಣಿಕೆಯಾಗದ ಅಥವಾ ಕಾಗುಣಿತ ವ್ಯತ್ಯಾಸಗಳನ್ನು ಒಳಗೊಂಡಿರುವ ಪ್ರಕರಣಗಳಲ್ಲಿ ಮತದಾರರನ್ನು ವಿಚಾರಣೆಗೆ ಕರೆಯದಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಮತಾ ಬ್ಯಾನರ್ಜಿ ನ್ಯಾಯಾಲಯವನ್ನು ಕೋರಿದ್ದಾರೆ. ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ ಅಂತಹ ತಿದ್ದುಪಡಿಗಳನ್ನು ಸ್ವಯಂಪ್ರೇರಿತವಾಗಿ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ತಾರ್ಕಿಕ ವ್ಯತ್ಯಾಸಗಳಲ್ಲಿ ಪೋಷಕರ ಹೆಸರುಗಳಲ್ಲಿನ ಹೊಂದಾಣಿಕೆಯಿಲ್ಲದಿರುವುದು, ಪೋಷಕರೊಂದಿಗೆ ಕಡಿಮೆ ವಯಸ್ಸಿನ ಅಂತರ ಮತ್ತು ಪೋಷಕರ ಮಕ್ಕಳ ಸಂಖ್ಯೆ ಆರು ವರ್ಷಕ್ಕಿಂತ ಮೇಲ್ಪಟ್ಟಿರುವುದು ಸೇರಿವೆ. ಅಂತಹ ನೋಟಿಸ್ ಪಡೆದವರಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಕೂಡ ಒಬ್ಬರು, ಚುನಾವಣಾ ಆಯೋಗವು ಅವರ ಮತ್ತು ಅವರ ಪೋಷಕರ ನಡುವೆ 15 ವರ್ಷಗಳಿಗಿಂತ ಕಡಿಮೆ ಅಂತರವನ್ನು ಉಲ್ಲೇಖಿಸಿದೆ ಎಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ಗೆ ವಿವರಿಸಿದ್ದಾರೆ.

ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ವಿಶೇಷ ಪರಿಷ್ಕರಣಾ ಕಾರ್ಯದಡಿಯಲ್ಲಿ ಡಿಸೆಂಬರ್ 16 ರಂದು ಪ್ರಕಟಿಸಲಾಗಿದೆ. ರಾಜ್ಯದಲ್ಲಿ 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಜನರು ಸಾವನ್ನಪ್ಪಿದ್ದಾರೆ, ರಾಜ್ಯದ ಹೊರಗೆ ವಲಸೆ ಹೋಗಿದ್ದಾರೆ ಅಥವಾ ಎಣಿಕೆ ನಮೂನೆಗಳನ್ನು ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...