Homeಕರ್ನಾಟಕಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

- Advertisement -
- Advertisement -

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ನ ಪರಿಣಾಮಕಾರಿ ಬಳಕೆ, ಆರೋಪಿಗಳಿಗೆ ಶಿಕ್ಷೆ ವಿಧಿಸುವ ಕುರಿತು  ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಶಿಕ್ಷೆ ಕೂಡ ವಿಧಿಸಲು ಏಕೆ ವಿಫಲವಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದಲ್ಲಿ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ 1989ರಡಿ ಪ್ರಕರಣವನ್ನು ದಾಖಲಿಸುವುದಿಲ್ಲ ಅಥವಾ ನಿಬಂಧನಗಳಡಿಯಲ್ಲಿ ಪ್ರಕರಣ ದಾಖಲಿಸಿದರೂ ಅದರಡಿಯಲ್ಲಿ ಶಿಕ್ಷೆಯಾಗುತ್ತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಗಮನಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯನ್ನು ಸಾಮಾನ್ಯವಾಗಿ ಮ್ಯಾನುಯಲ್ ಸ್ಕ್ಯಾವೆಂಜರ್‌ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ  ದಾಖಲು ಮಾಡಲಾಗುತ್ತಿಲ್ಲ ಎಂದು ಹೈಕೋರ್ಟ್‌ ಕಂಡುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠವು ಕರ್ನಾಟಕದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅರ್ಜಿಗೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿ  ಹೈಕೋರ್ಟ್ ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿದೆ.

ವಿಚಾರಣೆಯ ಸಂದರ್ಭದಲ್ಲಿ ವಕೀಲರಾದ ಶ್ರೀಧರ್ ಪ್ರಭು, ಅಂತಹ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಸ್ಸಿ-ಎಸ್ಟಿ ಕಾಯ್ದೆಯನ್ನು ಕಡ್ಡಾಯವಾಗಿ ಅನ್ವಯಿಸಬೇಕು ಎಂದು ಹೇಳಿದ್ದಾರೆ. ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಾಗಿ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ-2013ರಡಿ ಪ್ರಕರಣ ದಾಖಲಿಸಿದರೂ, ಆರೋಪಿಗಳು ಸುಲಭವಾಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನ್ಯಾಯಾಲಯವು ಗಮನಿಸಿದೆ. ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವಕೀಲರು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದ ಕಾರಣ ಇದು ಸಾಧ್ಯವಾಗುತ್ತದೆ ಎಂದು ಕೋರ್ಟ್‌ ಗಮನಿಸಿದೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದಲ್ಲಿ ಒಬ್ಬರಿಗೆ ಕೂಡ ಶಿಕ್ಷೆಯಾಗಿಲ್ಲ. ಸರಕಾರದ ಪರ ವಕೀಲರು, ನಿಮ್ಮ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಅತ್ಯಲ್ಪ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಆದರೆ ಈ ವಿಷಯಕ್ಕೆ ಬಂದಾಗ ಕ್ರಮ ಎಲ್ಲಿದೆ? ಸಂಬಂಧಪಟ್ಟ ಕೆಳದರ್ಜೆಯ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ವಿರುದ್ಧ ನೀವು ಏನು ಕ್ರಮ ಕೈಗೊಂಡಿದ್ದೀರಿ? ಶೂನ್ಯ ಶಿಕ್ಷೆ? ಎಂತಹ ನ್ಯಾಯದ ಅಪಹಾಸ್ಯ, ಒಂದೇ ಒಂದು ಶಿಕ್ಷೆಯೂ ಏಕೆ ಆಗಿಲ್ಲ? ನಿಮ್ಮ ಚೌಕಟ್ಟು ಏನು? ಎಂದು ಕೋರ್ಟ್‌ ಸರ್ಕಾರವನ್ನು ಕೇಳಿದೆ.

ನಾವು ಮಾಡುತ್ತಿರುವ ಕೆಲಸಗಳಿಂದ ಸಂವಿಧಾನದ ನಿಮಾತೃಗಳು ತಮ್ಮ ಸಮಾಧಿಯಲ್ಲಿ ನಡುಗುತ್ತಾರೆ. ಇಂತಹ ಪ್ರಕರಣಗಳಲ್ಲಿ ಸರ್ಕಾರದ ನಿಷ್ಕ್ರಿಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಕೆಲವು ಕಾರ್ಯದರ್ಶಿಗಳನ್ನು ಜೈಲಿಗೆ ಹಾಕದ ಹೊರತು ನಮ್ಮ ರಾಜ್ಯದಲ್ಲಿ ಏನೂ ಸುಧಾರಿಸುವುದಿಲ್ಲ ಎಂದು ಹೇಳಿದೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ನಲ್ಲಿ ತೊಡಗಿರುವವರಿಗೆ ಪುನರ್ವಸತಿ ಜೊತೆಗೆ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ನ್ನು ಬದಲಾಯಿಸುವ ತಂತ್ರಜ್ಞಾನವನ್ನು ಪರಿಚಯಿಸಬೇಕು ಎಂದು ವಕೀಲ ಶ್ರೀಧರ್ ಪ್ರಭು ಈ ವೇಳೆ ಕೋರ್ಟ್‌ನಲ್ಲಿ ಹೇಳಿದ್ದಾರೆ. ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದ ಜೊತೆಗೆ ಶಾಲಾ ಮಕ್ಕಳನ್ನು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಬಳಸುವುದನ್ನು ಪ್ರಶ್ನಿಸಿ ಮತ್ತೊಂದು ಸಾರ್ವಜನಿಕ ಹಿತಾಸಕ್ತಿಯು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಎರಡೂ ಪ್ರಕರಣವನ್ನು ಕೋರ್ಟ್‌ ಜೊತೆಯಾಗಿ ವಿಚಾರಣೆ ನಡೆಸುತ್ತಿದೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್‌ನ್ನು ಕಾನೂನುಗಳ ಮೂಲಕ ನಿಷೇಧಿಸಲಾಗಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ.  ಇದರಿಂದಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಪೌರಕಾರ್ಮಿಕರಿಂದ, ಕೂಲಿ ಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ  ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013ರ ಮ್ಯಾನುವಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ. ಆದರೆ ಇದೀಗ ಈ ಕುರಿತ ಪ್ರಕರಣ ದಾಖಲಾದರೂ ಆರೋಪಿಗಳಿಗೆ ಶಿಕ್ಷೆಯಾಗದಿರುವುದು ಕಾನೂನಿನ ನಿಷ್ಕ್ರಿಯತೆಯನ್ನು ಸೂಚಿಸುತ್ತದೆ.

ಇದನ್ನು ಓದಿ: ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...