Homeಕರ್ನಾಟಕಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

- Advertisement -
- Advertisement -

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ನ ಪರಿಣಾಮಕಾರಿ ಬಳಕೆ, ಆರೋಪಿಗಳಿಗೆ ಶಿಕ್ಷೆ ವಿಧಿಸುವ ಕುರಿತು  ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಶಿಕ್ಷೆ ಕೂಡ ವಿಧಿಸಲು ಏಕೆ ವಿಫಲವಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದಲ್ಲಿ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ 1989ರಡಿ ಪ್ರಕರಣವನ್ನು ದಾಖಲಿಸುವುದಿಲ್ಲ ಅಥವಾ ನಿಬಂಧನಗಳಡಿಯಲ್ಲಿ ಪ್ರಕರಣ ದಾಖಲಿಸಿದರೂ ಅದರಡಿಯಲ್ಲಿ ಶಿಕ್ಷೆಯಾಗುತ್ತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಗಮನಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯನ್ನು ಸಾಮಾನ್ಯವಾಗಿ ಮ್ಯಾನುಯಲ್ ಸ್ಕ್ಯಾವೆಂಜರ್‌ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ  ದಾಖಲು ಮಾಡಲಾಗುತ್ತಿಲ್ಲ ಎಂದು ಹೈಕೋರ್ಟ್‌ ಕಂಡುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠವು ಕರ್ನಾಟಕದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅರ್ಜಿಗೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿ  ಹೈಕೋರ್ಟ್ ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿದೆ.

ವಿಚಾರಣೆಯ ಸಂದರ್ಭದಲ್ಲಿ ವಕೀಲರಾದ ಶ್ರೀಧರ್ ಪ್ರಭು, ಅಂತಹ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಸ್ಸಿ-ಎಸ್ಟಿ ಕಾಯ್ದೆಯನ್ನು ಕಡ್ಡಾಯವಾಗಿ ಅನ್ವಯಿಸಬೇಕು ಎಂದು ಹೇಳಿದ್ದಾರೆ. ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಾಗಿ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ-2013ರಡಿ ಪ್ರಕರಣ ದಾಖಲಿಸಿದರೂ, ಆರೋಪಿಗಳು ಸುಲಭವಾಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನ್ಯಾಯಾಲಯವು ಗಮನಿಸಿದೆ. ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವಕೀಲರು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದ ಕಾರಣ ಇದು ಸಾಧ್ಯವಾಗುತ್ತದೆ ಎಂದು ಕೋರ್ಟ್‌ ಗಮನಿಸಿದೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದಲ್ಲಿ ಒಬ್ಬರಿಗೆ ಕೂಡ ಶಿಕ್ಷೆಯಾಗಿಲ್ಲ. ಸರಕಾರದ ಪರ ವಕೀಲರು, ನಿಮ್ಮ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಅತ್ಯಲ್ಪ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಆದರೆ ಈ ವಿಷಯಕ್ಕೆ ಬಂದಾಗ ಕ್ರಮ ಎಲ್ಲಿದೆ? ಸಂಬಂಧಪಟ್ಟ ಕೆಳದರ್ಜೆಯ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ವಿರುದ್ಧ ನೀವು ಏನು ಕ್ರಮ ಕೈಗೊಂಡಿದ್ದೀರಿ? ಶೂನ್ಯ ಶಿಕ್ಷೆ? ಎಂತಹ ನ್ಯಾಯದ ಅಪಹಾಸ್ಯ, ಒಂದೇ ಒಂದು ಶಿಕ್ಷೆಯೂ ಏಕೆ ಆಗಿಲ್ಲ? ನಿಮ್ಮ ಚೌಕಟ್ಟು ಏನು? ಎಂದು ಕೋರ್ಟ್‌ ಸರ್ಕಾರವನ್ನು ಕೇಳಿದೆ.

ನಾವು ಮಾಡುತ್ತಿರುವ ಕೆಲಸಗಳಿಂದ ಸಂವಿಧಾನದ ನಿಮಾತೃಗಳು ತಮ್ಮ ಸಮಾಧಿಯಲ್ಲಿ ನಡುಗುತ್ತಾರೆ. ಇಂತಹ ಪ್ರಕರಣಗಳಲ್ಲಿ ಸರ್ಕಾರದ ನಿಷ್ಕ್ರಿಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಕೆಲವು ಕಾರ್ಯದರ್ಶಿಗಳನ್ನು ಜೈಲಿಗೆ ಹಾಕದ ಹೊರತು ನಮ್ಮ ರಾಜ್ಯದಲ್ಲಿ ಏನೂ ಸುಧಾರಿಸುವುದಿಲ್ಲ ಎಂದು ಹೇಳಿದೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ನಲ್ಲಿ ತೊಡಗಿರುವವರಿಗೆ ಪುನರ್ವಸತಿ ಜೊತೆಗೆ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ನ್ನು ಬದಲಾಯಿಸುವ ತಂತ್ರಜ್ಞಾನವನ್ನು ಪರಿಚಯಿಸಬೇಕು ಎಂದು ವಕೀಲ ಶ್ರೀಧರ್ ಪ್ರಭು ಈ ವೇಳೆ ಕೋರ್ಟ್‌ನಲ್ಲಿ ಹೇಳಿದ್ದಾರೆ. ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದ ಜೊತೆಗೆ ಶಾಲಾ ಮಕ್ಕಳನ್ನು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಬಳಸುವುದನ್ನು ಪ್ರಶ್ನಿಸಿ ಮತ್ತೊಂದು ಸಾರ್ವಜನಿಕ ಹಿತಾಸಕ್ತಿಯು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಎರಡೂ ಪ್ರಕರಣವನ್ನು ಕೋರ್ಟ್‌ ಜೊತೆಯಾಗಿ ವಿಚಾರಣೆ ನಡೆಸುತ್ತಿದೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್‌ನ್ನು ಕಾನೂನುಗಳ ಮೂಲಕ ನಿಷೇಧಿಸಲಾಗಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ.  ಇದರಿಂದಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಪೌರಕಾರ್ಮಿಕರಿಂದ, ಕೂಲಿ ಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ  ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013ರ ಮ್ಯಾನುವಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ. ಆದರೆ ಇದೀಗ ಈ ಕುರಿತ ಪ್ರಕರಣ ದಾಖಲಾದರೂ ಆರೋಪಿಗಳಿಗೆ ಶಿಕ್ಷೆಯಾಗದಿರುವುದು ಕಾನೂನಿನ ನಿಷ್ಕ್ರಿಯತೆಯನ್ನು ಸೂಚಿಸುತ್ತದೆ.

ಇದನ್ನು ಓದಿ: ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...