Homeಕರ್ನಾಟಕಅದಾನಿಯ ಬಂಧನ ಏಕಿಲ್ಲ, ರಕ್ಷಿಸುತ್ತಿರುವವರು ಯಾರು? ಸಿಎಂ ಸಿದ್ದರಾಮಯ್ಯ

ಅದಾನಿಯ ಬಂಧನ ಏಕಿಲ್ಲ, ರಕ್ಷಿಸುತ್ತಿರುವವರು ಯಾರು? ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದರು.

ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆ. ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ಆದರೆ ಮಾಧ್ಯಮಗಳು ಈ ಬಗ್ಗೆ ಮಾತನಾಡುತ್ತಿಲ್ಲ. ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ತೋರಿಸಬೇಕು ಎಂದು ಹೇಳಿದರು.

ಕೇಂದ್ರದಿಂದ ರಾಜ್ಯದ ರೈತರಿಗೆ ಅನ್ಯಾಯ

ರೈತರಿಗೆ ರಿಯಾಯಿತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ರಾಜ್ಯಕ್ಕೆ ಶೇ.58 ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ಆದರೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಈ ಅನ್ಯಾಯದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡು. ಪ್ರಹ್ಲಾದ್ ಜೋಶಿಯವರ ಹೇಳಿಕೆಗೆ ಸೋ ಕಾಲ್ಡ್ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಕುಮಾರಸ್ವಾಮಿಯವರು ಉಸಿರೇ ಬಿಡ್ತಿಲ್ಲವಲ್ಲ ಏಕೆ? ಎಂದು ಪ್ರಶ್ನಿಸಿದರು.

ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ. ಶೇ 4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ರೈತರ ಪರವಾಗಿ ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದರು.

ಸರ್ಕಾರಿ ನೌಕಕರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ?

ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಈಗ ಬಿಜೆಪಿಯವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ, ಇದೆಂಥಾ ದ್ವಂದ್ವ..!! ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಬಿಜೆಪಿಯವರು ಅನ್ಯಾಯ – ಅನ್ಯಾಯ ಎಂದು ನಾಟಕವಾಡುತ್ತಾ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆ.ಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆ.ಜಿ ಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ? ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ. ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನು ಆರ್‌.ಅಶೋಕ್‌ ಅವರು ಫೋಟೋ ತೆಗೆಸಿಕೊಂಡಿದ್ದೇ ತೆಗೆಸಿಕೊಂಡಿದ್ದು. ಒಟ್ಟಿನಲ್ಲಿ ಅವರ ಪ್ರತಿಭಟನೆ ಫೋಟೊ ಶೂಟ್‌ನಂತೆ ಕಾಣುತ್ತಿತ್ತು ಎಂದರು.

ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭಟನೆ ಎಂದು ಫೋಟೋ ತೆಗೆಸಿಕೊಳ್ಳುತ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : ರಾಜ್ಯದ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು – ಗೃಹ ಸಚಿವ ಡಾ ಜಿ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...