Homeಕರ್ನಾಟಕಅದಾನಿಯ ಬಂಧನ ಏಕಿಲ್ಲ, ರಕ್ಷಿಸುತ್ತಿರುವವರು ಯಾರು? ಸಿಎಂ ಸಿದ್ದರಾಮಯ್ಯ

ಅದಾನಿಯ ಬಂಧನ ಏಕಿಲ್ಲ, ರಕ್ಷಿಸುತ್ತಿರುವವರು ಯಾರು? ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದರು.

ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆ. ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ಆದರೆ ಮಾಧ್ಯಮಗಳು ಈ ಬಗ್ಗೆ ಮಾತನಾಡುತ್ತಿಲ್ಲ. ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ತೋರಿಸಬೇಕು ಎಂದು ಹೇಳಿದರು.

ಕೇಂದ್ರದಿಂದ ರಾಜ್ಯದ ರೈತರಿಗೆ ಅನ್ಯಾಯ

ರೈತರಿಗೆ ರಿಯಾಯಿತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ರಾಜ್ಯಕ್ಕೆ ಶೇ.58 ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ಆದರೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಈ ಅನ್ಯಾಯದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡು. ಪ್ರಹ್ಲಾದ್ ಜೋಶಿಯವರ ಹೇಳಿಕೆಗೆ ಸೋ ಕಾಲ್ಡ್ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಕುಮಾರಸ್ವಾಮಿಯವರು ಉಸಿರೇ ಬಿಡ್ತಿಲ್ಲವಲ್ಲ ಏಕೆ? ಎಂದು ಪ್ರಶ್ನಿಸಿದರು.

ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ. ಶೇ 4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ರೈತರ ಪರವಾಗಿ ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದರು.

ಸರ್ಕಾರಿ ನೌಕಕರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ?

ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಈಗ ಬಿಜೆಪಿಯವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ, ಇದೆಂಥಾ ದ್ವಂದ್ವ..!! ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಬಿಜೆಪಿಯವರು ಅನ್ಯಾಯ – ಅನ್ಯಾಯ ಎಂದು ನಾಟಕವಾಡುತ್ತಾ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆ.ಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆ.ಜಿ ಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ? ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ. ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನು ಆರ್‌.ಅಶೋಕ್‌ ಅವರು ಫೋಟೋ ತೆಗೆಸಿಕೊಂಡಿದ್ದೇ ತೆಗೆಸಿಕೊಂಡಿದ್ದು. ಒಟ್ಟಿನಲ್ಲಿ ಅವರ ಪ್ರತಿಭಟನೆ ಫೋಟೊ ಶೂಟ್‌ನಂತೆ ಕಾಣುತ್ತಿತ್ತು ಎಂದರು.

ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭಟನೆ ಎಂದು ಫೋಟೋ ತೆಗೆಸಿಕೊಳ್ಳುತ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : ರಾಜ್ಯದ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು – ಗೃಹ ಸಚಿವ ಡಾ ಜಿ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...