Homeಮುಖಪುಟ‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

ಕುಗ್ಗುತ್ತಿರುವ ಜಿಎಸ್‌ಟಿ ಆದಾಯ, ಕಡಿಮೆ ತೆರಿಗೆ ಹಂಚಿಕೆ, ಅನುದಾನದಲ್ಲಿ ಕಡಿತ ಮತ್ತು ಹೆಚ್ಚಿದ ಸಾಲವನ್ನು ರಾಜ್ಯಗಳು ಎದುರಿಸುತ್ತಿವೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಲಸಿಕೆಗಳ ಬೆಲೆ ಕೇಂದ್ರ ಮತ್ತು ರಾಜ್ಯಗಳಿಗೆ ಒಂದೇ ಆಗಿರಬೇಕು ಮತ್ತು ಹೆಚ್ಚಿನ ಬೆಲೆಯನ್ನು ಈಗಾಗಲೇ ಭಾರಿ ಹಣದ ಕೊರತೆಯಿರುವ ರಾಜ್ಯಗಳ ಮೇಲೆ ವರ್ಗಾಯಿಸಬಾರದು ಎಂದು ಕಾಂಗ್ರೆಸ್ ಇಂದು ಹೇಳಿದೆ. ನಿನ್ನೆ ಸೋಮವಾರ 18 ರಿಂದ 45 ರವರೆಗಿನ ವಯಸ್ಸಿನವರಿಗೆ ಘೋಷಿಸಿದ ಲಸಿಕೆ ನೀತಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ದಾಳಿ ನಡೆಸಿದೆ.

“ಲಸಿಕೆ ತಯಾರಕರು ಲಾಭ ಬಯಸುವುದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ, ಆದರೆ ಕೇಂದ್ರವು ತನ್ನ ಜವಾಬ್ದಾರಿಯನ್ನು ತ್ಯಜಿಸಲು ಸಾಧ್ಯವಿಲ್ಲ” ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ್ದಾರೆ. “ನಿಮಗೆ ಒಂದು ದೇಶ ಒಂದು ಮಾರುಕಟ್ಟೆ ಇತ್ಯಾದಿಯೆಲ್ಲ ಬೇಕು. ಹಾಗಾದರೆ ನಾವು ಒಂದೇ ದೇಶಕ್ಕೆ ಒಂದು ಬೆಲೆಯನ್ನು ಏಕೆ ಹೊಂದಲು ಸಾಧ್ಯವಿಲ್ಲ?’ ಎಂದು ಅವರು ಪ್ರಶ್ನಿಸಿದ್ದಾರೆ.

ಸೋಮವಾರ ಸಂಜೆ ಪ್ರಕಟಗೊಂಡ ಹೊಸ ನೀತಿಯಡಿಯಲ್ಲಿ, ಲಸಿಕೆ ತಯಾರಕರು ತಮ್ಮ ಮಾಸಿಕ ಉತ್ಪನ್ನದ ಶೇಕಡಾ 50 ರಷ್ಟು ಪ್ರಮಾಣವನ್ನು ಭಾರತ ಸರ್ಕಾರಕ್ಕೆ ಪೂರೈಸುತ್ತಾರೆ ಮತ್ತು ಉಳಿದ ಉತ್ಪನ್ನವನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಗೆ ಪೂರೈಸಲು ಮುಕ್ತರಾಗಿದ್ದಾರೆ.

ಆದರೆ ಅವರು ಮೇ 1 ರ ಮೊದಲು ರಾಜ್ಯಗಳು ಮತ್ತು ಮುಕ್ತ ಮಾರುಕಟ್ಟೆಯ ಬೆಲೆಯನ್ನು ಘೋಷಿಸಬೇಕು ಎಂದು ಸರ್ಕಾರ ಹೇಳಿದೆ. ಇದು ಬೆಲೆ ವಿಷಯದ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ.

18 ರಿಂದ 45 ವರ್ಷದ ಪ್ರಜೆಗಳಿಗೆ ಏಕೆ ಉಚಿತ ಲಸಿಕೆ ಸಿಗುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. “18-45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆಗಳು ಇಲ್ಲ. ಬೆಲೆ ನಿಯಂತ್ರಣವಿಲ್ಲದೆ ಮಧ್ಯವರ್ತಿಗಳನ್ನು ನಡುವೆ ತರಲಾಗಿದೆ. ದುರ್ಬಲ ವರ್ಗದವರಿಗೆ ಲಸಿಕೆ ಗ್ಯಾರಂಟಿ ಇಲ್ಲ. ಇದು ಭಾರತ ಸರ್ಕಾರದ ಲಸಿಕೆ ತಾರತಮ್ಯ – ವಿತರಣಾ ತಂತ್ರವಲ್ಲ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಜಿಎಸ್‌ಟಿ ಆದಾಯದಲ್ಲಿ ಕುಗ್ಗುವಿಕೆ, ಕಡಿಮೆ ತೆರಿಗೆ ಹಂಚಿಕೆ, ಅನುದಾನ ಕಡಿತ ಮತ್ತು ಹೆಚ್ಚಿದ ಸಾಲಗಳು- ಈ ಹೆಚ್ಚುವರಿ ಹೊರೆಗಳನ್ನು ರಾಜ್ಯಗಳು ಭರಿಸಬೇಕಾಗುತ್ತದೆ. ಈ ನಡುವೆ ಪಿಎಂ ಕೇರ್ಸ್ ಅಡಿಯಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂಪಾಯಿಗಳನ್ನು ಎಲ್ಲಿ ನಿಯೋಜಿಸಲಾಗಿದೆ ಎಂದು ಯಾರಿಗೂ ತಿಳಿದಿಲ್ಲ, ” ಎಂದು ಚಿದಂಬರಂ ಮತ್ತು ರಣದೀಪ್ ಸುರ್ಜೇವಲಾ ಟ್ವೀಟ್ ಮಾಡಿದ್ದಾರೆ.

ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಶೇಕಡಾ 100 ರಷ್ಟು ಪರಿಣಾಮಕಾರಿಯಲ್ಲದಿದ್ದರೂ, ಅವು ಅಪಾಯಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ. ಹೆಚ್ಚಿನ ಸಂದರ್ಭಗಳಲ್ಲಿ ಆಮ್ಲಜನಕ, ಔಷಧಗಳು ಅಥವಾ ಆಸ್ಪತ್ರೆಗೆ ದಾಖಲು ಮಾಡುವ ಅಗತ್ಯವನ್ನು ನಿವಾರಿಸುತ್ತದೆ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: 18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...