Homeಮುಖಪುಟ‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

ಕುಗ್ಗುತ್ತಿರುವ ಜಿಎಸ್‌ಟಿ ಆದಾಯ, ಕಡಿಮೆ ತೆರಿಗೆ ಹಂಚಿಕೆ, ಅನುದಾನದಲ್ಲಿ ಕಡಿತ ಮತ್ತು ಹೆಚ್ಚಿದ ಸಾಲವನ್ನು ರಾಜ್ಯಗಳು ಎದುರಿಸುತ್ತಿವೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಲಸಿಕೆಗಳ ಬೆಲೆ ಕೇಂದ್ರ ಮತ್ತು ರಾಜ್ಯಗಳಿಗೆ ಒಂದೇ ಆಗಿರಬೇಕು ಮತ್ತು ಹೆಚ್ಚಿನ ಬೆಲೆಯನ್ನು ಈಗಾಗಲೇ ಭಾರಿ ಹಣದ ಕೊರತೆಯಿರುವ ರಾಜ್ಯಗಳ ಮೇಲೆ ವರ್ಗಾಯಿಸಬಾರದು ಎಂದು ಕಾಂಗ್ರೆಸ್ ಇಂದು ಹೇಳಿದೆ. ನಿನ್ನೆ ಸೋಮವಾರ 18 ರಿಂದ 45 ರವರೆಗಿನ ವಯಸ್ಸಿನವರಿಗೆ ಘೋಷಿಸಿದ ಲಸಿಕೆ ನೀತಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ದಾಳಿ ನಡೆಸಿದೆ.

“ಲಸಿಕೆ ತಯಾರಕರು ಲಾಭ ಬಯಸುವುದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ, ಆದರೆ ಕೇಂದ್ರವು ತನ್ನ ಜವಾಬ್ದಾರಿಯನ್ನು ತ್ಯಜಿಸಲು ಸಾಧ್ಯವಿಲ್ಲ” ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ್ದಾರೆ. “ನಿಮಗೆ ಒಂದು ದೇಶ ಒಂದು ಮಾರುಕಟ್ಟೆ ಇತ್ಯಾದಿಯೆಲ್ಲ ಬೇಕು. ಹಾಗಾದರೆ ನಾವು ಒಂದೇ ದೇಶಕ್ಕೆ ಒಂದು ಬೆಲೆಯನ್ನು ಏಕೆ ಹೊಂದಲು ಸಾಧ್ಯವಿಲ್ಲ?’ ಎಂದು ಅವರು ಪ್ರಶ್ನಿಸಿದ್ದಾರೆ.

ಸೋಮವಾರ ಸಂಜೆ ಪ್ರಕಟಗೊಂಡ ಹೊಸ ನೀತಿಯಡಿಯಲ್ಲಿ, ಲಸಿಕೆ ತಯಾರಕರು ತಮ್ಮ ಮಾಸಿಕ ಉತ್ಪನ್ನದ ಶೇಕಡಾ 50 ರಷ್ಟು ಪ್ರಮಾಣವನ್ನು ಭಾರತ ಸರ್ಕಾರಕ್ಕೆ ಪೂರೈಸುತ್ತಾರೆ ಮತ್ತು ಉಳಿದ ಉತ್ಪನ್ನವನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಗೆ ಪೂರೈಸಲು ಮುಕ್ತರಾಗಿದ್ದಾರೆ.

ಆದರೆ ಅವರು ಮೇ 1 ರ ಮೊದಲು ರಾಜ್ಯಗಳು ಮತ್ತು ಮುಕ್ತ ಮಾರುಕಟ್ಟೆಯ ಬೆಲೆಯನ್ನು ಘೋಷಿಸಬೇಕು ಎಂದು ಸರ್ಕಾರ ಹೇಳಿದೆ. ಇದು ಬೆಲೆ ವಿಷಯದ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ.

18 ರಿಂದ 45 ವರ್ಷದ ಪ್ರಜೆಗಳಿಗೆ ಏಕೆ ಉಚಿತ ಲಸಿಕೆ ಸಿಗುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. “18-45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆಗಳು ಇಲ್ಲ. ಬೆಲೆ ನಿಯಂತ್ರಣವಿಲ್ಲದೆ ಮಧ್ಯವರ್ತಿಗಳನ್ನು ನಡುವೆ ತರಲಾಗಿದೆ. ದುರ್ಬಲ ವರ್ಗದವರಿಗೆ ಲಸಿಕೆ ಗ್ಯಾರಂಟಿ ಇಲ್ಲ. ಇದು ಭಾರತ ಸರ್ಕಾರದ ಲಸಿಕೆ ತಾರತಮ್ಯ – ವಿತರಣಾ ತಂತ್ರವಲ್ಲ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಜಿಎಸ್‌ಟಿ ಆದಾಯದಲ್ಲಿ ಕುಗ್ಗುವಿಕೆ, ಕಡಿಮೆ ತೆರಿಗೆ ಹಂಚಿಕೆ, ಅನುದಾನ ಕಡಿತ ಮತ್ತು ಹೆಚ್ಚಿದ ಸಾಲಗಳು- ಈ ಹೆಚ್ಚುವರಿ ಹೊರೆಗಳನ್ನು ರಾಜ್ಯಗಳು ಭರಿಸಬೇಕಾಗುತ್ತದೆ. ಈ ನಡುವೆ ಪಿಎಂ ಕೇರ್ಸ್ ಅಡಿಯಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂಪಾಯಿಗಳನ್ನು ಎಲ್ಲಿ ನಿಯೋಜಿಸಲಾಗಿದೆ ಎಂದು ಯಾರಿಗೂ ತಿಳಿದಿಲ್ಲ, ” ಎಂದು ಚಿದಂಬರಂ ಮತ್ತು ರಣದೀಪ್ ಸುರ್ಜೇವಲಾ ಟ್ವೀಟ್ ಮಾಡಿದ್ದಾರೆ.

ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಶೇಕಡಾ 100 ರಷ್ಟು ಪರಿಣಾಮಕಾರಿಯಲ್ಲದಿದ್ದರೂ, ಅವು ಅಪಾಯಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ. ಹೆಚ್ಚಿನ ಸಂದರ್ಭಗಳಲ್ಲಿ ಆಮ್ಲಜನಕ, ಔಷಧಗಳು ಅಥವಾ ಆಸ್ಪತ್ರೆಗೆ ದಾಖಲು ಮಾಡುವ ಅಗತ್ಯವನ್ನು ನಿವಾರಿಸುತ್ತದೆ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: 18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...