Homeಕರ್ನಾಟಕಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಸಾರಿಗೆ ನೌಕರರ ಪ್ರತಿಭಟನೆಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ನಾಯಕರು, ಕಾಂಗ್ರೆಸ್ ಸರ್ಕಾರ ಹಾಗು ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ? - ಸುಧಾಕರ್

- Advertisement -
- Advertisement -

ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಮೂರು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದು, ಇದಕ್ಕೆ ಪ್ರತಿಪಕ್ಷ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ಇದರ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್, “ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳ ಕುರಿತು ಇಂದು ಸರ್ಕಾರ ಪ್ರತಿಭಟನಾಕಾರರೊಟ್ಟಿಗೆ ಮಾತುಕತೆ ನಡೆಸಿದ್ದು, ವೇತನ ಪರಿಷ್ಕರಣೆ, ಕಿರುಕುಳ ತಡೆ, ಭತ್ಯೆ ಪುನರಾರಂಭ, ಆರೋಗ್ಯ ವಿಮೆ ಸೇರಿದಂತೆ ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.

ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ಸಂಧಾನ ಸಭೆ ಅಂತ್ಯಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, ‘ನಮ್ಮ ಬಹುತೇಕ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಸೌಹಾರ್ದಯುತ ತೀರ್ಮಾನ ಆಗಿದೆ. ಮುಂದಿನ ನಿರ್ಧಾರವನ್ನು ಸ್ವಾತಂತ್ರ್ಯ ಉದ್ಯಾನದ ಪ್ರತಿಭಟನಾ ಸ್ಥಳದಲ್ಲಿ ಪ್ರಕಟಿಸಲಾಗುವುದು’ ಎಂದರು.

ಇದರ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಸುಧಾಕರ್, “ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಪದೇ ಪದೇ ಮುಷ್ಕರ, ಬಂದ್‌ಗಳಿಗೆ ಕರೆನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

“ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಸಾರಿಗೆ ವ್ಯವಸ್ಥೆ ಹಾಗೂ ನೌಕರರ ಸಮಸ್ಯೆಗಳ ಬಗ್ಗೆ ಅರಿವಿದೆಯೇ? ತಮಗೆ ಅರಿವಿಲ್ಲದ ವಿಷಯಗಳ ಬಗ್ಗೆ ಮೂಗು ತೂರಿಸುವುದು ಎಷ್ಟು ಸಮಂಜಸ ಎಂದು ಜನ ಕೇಳುತ್ತಿರುವ ಪ್ರಶ್ನೆಗೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಮೊದಲು ಉತ್ತರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್

“ಸಾರಿಗೆ ವ್ಯವಸ್ಥೆ ಅತ್ಯಂತ ಪ್ರಮುಖ ಮತ್ತು ಅಗತ್ಯ ಸೇವೆಯಾಗಿದ್ದು, ಶ್ರೀ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದಾಗಿನಿಂದ ಪದೇ ಪದೇ ಮುಷ್ಕರ, ಬಂದ್ ಗಳಿಗೆ ಕುಮ್ಮಕ್ಕು ನೀಡುವ ಮೂಲಕ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆ ಉಂಟುಮಾಡಿ ಬಡವರು, ದಿನಗೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

“ನೌಕರರ ಪ್ರತಿಭಟನೆಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ನಾಯಕರು ಕಾಂಗ್ರೆಸ್ ಸರ್ಕಾರ ಹಾಗು ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

“ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರು
ಅವರು ಈಗಾಗಲೇ ಭರವಸೆ ನೀಡಿದ್ದಾರೆ. ತಮ್ಮನ್ನು ದಾರಿ ತಪ್ಪಿಸುತ್ತಿರುವವರ ಪ್ರಚೋದನೆಗೆ ಒಳಗಾಗದೆ ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...