Homeಕರ್ನಾಟಕಎರಡು ಈರುಳ್ಳಿ ದೋಸೆ ಮತ್ತು ಈರುಳ್ಳಿ ಬೆಳೆದ ರೈತರ ಪಾಡು : ಈರುಳ್ಳಿ ಬೆಲೆ ಏರಿಕೆಗೆ...

ಎರಡು ಈರುಳ್ಳಿ ದೋಸೆ ಮತ್ತು ಈರುಳ್ಳಿ ಬೆಳೆದ ರೈತರ ಪಾಡು : ಈರುಳ್ಳಿ ಬೆಲೆ ಏರಿಕೆಗೆ ಕಾರಣವೇನು? ಲಾಭ ಯಾರಿಗೆ?

- Advertisement -
- Advertisement -

ಎರಡು ಈರುಳ್ಳಿ ದೋಸೆ ಕೊಡಿ.
ಇಲ್ಲಾ ಸರ್, ಈರುಳ್ಳಿ ದೋಸೆ ಮಾಡೋದು ಬಿಟ್ಟು ವಾರದ ಮೇಲಾಯ್ತು. ಕೆಜಿ ಈರುಳ್ಳಿ ಬೆಲೆ 180 ರೂಪಾಯಿ ಆದ್ರೆ ಹೇಗೆ ಮಾಡೋದು ಸರ್, ನಾವು 40 ರೂಪಾಯಿಗೆ ಒಂದು ಈರುಳ್ಳಿ ದೋಸೆ ಕೊಡ್ತಿದ್ವಿ. ಈಗ ಅದು ಕೊಡೋಕಾಗ್ದೆ ನಿಲ್ಲಿಸಿ ಬಿಟ್ಟಿದ್ವಿ ಸರ್. ಎಂದು ಹೋಟೆಲ್ ಮಾಲಿಕರೊಬ್ಬರು ಹೇಳಿದಾಗ ಆ ಗ್ರಾಹಕರು ಬೇರೆ ಆರ್ಡರ್ ಮಾಡಿದರು.

ಒಂದು ಕೆಜಿ ಈರುಳ್ಳಿ ಎಷ್ಟಪ್ಪ?
ಇದು 140, ಅದು 160, ನಿಮಗೆ ಯಾವುದು ಬೇಕು ಹೇಳಿ ಸಾರ್?
ಇಲ್ಲ, ರೇಟ್ ಏನಿದೆ ಅಂತ ಕೇಳ್ದೆ ಅಷ್ಟೇ ಅಂದ್ರು ಆ ಹಿರಿಯರು.

ಈ ಎರಡು ಘಟನೆಗಳನ್ನುಪ್ರಸ್ತಾಪಿಸಲು ಕಾರಣವಿದೆ. ಮೊದಲನೆಯದು ಈರುಳ್ಳಿ ದೋಸೆ ತಿನ್ನಲು ಬಯಸುವವರಿಗೆ  ಆ ಹೋಟೆಲ್ ನಲ್ಲಿ ಅದು ಸಿಗುತ್ತಿಲ್ಲ. ನಿತ್ಯವೂ ಅಲ್ಲಿಗೆ ಬಂದು ಈರುಳ್ಳಿ ದೋಸೆ ತಿನ್ನುತ್ತಿದ್ದವರಿಗೆ ನಿರಾಸೆಯಾಗಿದೆ. ಎರಡನೆಯದು ಸಾಂಬಾರು ಮಾಡಲು ಈರುಳ್ಳಿ ಬೇಕಾಗಿರುವವರು ದುಪ್ಪಟ್ಟು-ಮುಪ್ಪಟ್ಟು ದರ ಏರಿಕೆಯಾಗಿರುವುದರಿಂದ ಈರುಳ್ಳಿ ದರ ಕೇಳಿ ಮುಂದುಕ್ಕೆ ಹೋಗುತ್ತಿರುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ. ಇದು ತುಮಕೂರಿನ ಕತೆ ಮಾತ್ರವಲ್ಲ. ಇಡೀ ದೇಶದ ನೋವುಗಳ ಕಥನ.. ಸಾಂಬರ್, ಒಗ್ಗರಣೆ ಮೊದಲಾದವುಗಳಿಗೆ ಈರುಳ್ಳಿ ಹಾಕದೆ ರುಚಿ ಹತ್ತುವುದಿಲ್ಲ. ಈರುಳ್ಳಿ ಕೊಳ್ಳೋಣ ಎಂದರೆ ಅದು ಕೈಗೆಟಕುತ್ತಿಲ್ಲ. ಈ ಎರಡೂ ಸಂಕಟಗಳನ್ನು ಬಹುಜನರು ಅನುಭವಿಸಬೇಕಾಗಿದೆ.

ಬಹುಜನರು ಬಳಸುವ ಈರುಳ್ಳಿ ಬೆಲೆ ಗನನಕ್ಕೇರಿದೆ. ಏರುತ್ತಲೇ ಇದೆ. ಕಳೆದ ಒಂದು ತಿಂಗಳಿಂದಲೂ ಈರುಳ್ಳಿ ಕೊಳ್ಳುವವರ ಸಂಖ್ಯೆ ಭಾರೀ ಇಳಿಮುಖವಾಗಿದೆ. ಸಂಜೆ ಮುಂಜಾನೆ ಕನಿಷ್ಠ ಐದಾರು ಮಂದಿ ಮಂಡಿಯಲ್ಲಿ ಈರುಳ್ಳಿ ಆರಿಸುತ್ತಿದದ್ದವರು ಈಗ ಒಬ್ಬರೂ ಇಲ್ಲದೆ ಈರುಳ್ಳಿ ವ್ಯಾಪಾರಿಗಳು ಅಂಗಡಿಯಲ್ಲಿ ಕೈಕಟ್ಟಿ ಕುಳಿತುಕೊಳ್ಳುವಂತಾಗಿದೆ. ಆದರೆ ಹಿಂದೆ 10 ಕೆಜಿ ಮಾರಿದರೆ ಸಿಗುತ್ತಿದ್ದ ಲಾಭ ಈಗ 5 ಕೆಜಿ ಈರುಳ್ಳಿಗೇ ಸಿಗುತ್ತಿದೆ. ಈರುಳ್ಳಿ ಬೆಲೆ ಹೆಚ್ಚಾದ ಕಾರಣಕ್ಕೆ ಅವುಗಳಿಗೆ ಚಿನ್ನದ ಬೆಲೆ ಬಂದಿದೆ. ಇದೇ ಕಾರಣಕ್ಕಾಗಿಯೇ ಈರುಳ್ಳಿ ಸಾಗಣೆ ಮಾಡುವವರು ಲಾರಿ ಸಮೇತ ಪರಾರಿಯಾಗಿರುವುದು ಕೂಡ ವರದಿಯಾಗಿದೆ. ಈರುಳ್ಳಿ ಬೆಲೆ ಹೆಚ್ಚಾಗುತ್ತ ಹೋದಂತೆ ಸಾಮಾಜಿ ಜಾಲತಾಣದಲ್ಲಿ ಅದರ ಬಗ್ಗೆ ವಿವಿಧ ರೀತಿಯ ಸಣ್ಣ ಕತೆಗಳೂ ಹುಟ್ಟಿಕೊಂಡು ಸದ್ದು ಮಾಡುತ್ತಿವೆ. ಕೆಲವರು ಈರುಳ್ಳಿ ಸರವನ್ನು ಕೊರಳಿಗೆ ಹಾಕಿಕೊಂಡು ಕಣ್ಣೀರು ಕರೆಯುತ್ತ ವ್ಯಂಗ್ಯ ಮಾಡಿದವರೂ ಉಂಟು.

ಈಗ ಈರುಳ್ಳಿ ದರ ಹೆಚ್ಚಳವಾಗಿರುವುದರಿಂದ ರೈತರಿಗೇನಾದರೂ ಪ್ರಯೋಜನವಾಗುತ್ತದೆಯೇ ಎಂದು ಪ್ರಶ್ನಿಕೊಂಡರೆ ಅದಕ್ಕೆ ಉತ್ತರ ಶೂನ್ಯ. ಚಿತ್ರದುರ್ಗ ಜಿಲ್ಲೆಯ, ಹಿರಿಯೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಹೆಚ್ಚು ಈರುಳ್ಳಿ ಬೆಳೆಯುತ್ತಾರೆ. ಒಬ್ಬೊಬ್ಬ ರೈತರು ಕನಿಷ್ಠ 800 -1000 ಕ್ವಿಂಟಾಲ್ ಈರುಳ್ಳಿ ಬೆಳೆಯುತ್ತಾರೆ. ಆದರೆ ಈಗ ರೈತರ ಬಳಿ ಈರುಳ್ಳಿ ದಾಸ್ತಾನು ಇಲ್ಲ. ಅವರೆಲ್ಲರೂ ಐದಾರು ತಿಂಗಳ ಹಿಂದೆಯೇ ಬೆಳೆದು ಕೆಜಿ ಈರುಳ್ಳಿಗೆ ಕೇವಲ 20-30 ರೂಪಾಯಿಗೆ ಮಾರಾಟ ಮಾಡಿದ್ದಾರೆ. ಈಗ ಈರುಳ್ಳಿ ಬೆಲೆ ದುಪ್ಪಟ್ಟು ಏರಿಕೆಯಾಗಿದ್ದರೂ ರೈತರಿಗೇನೂ ಲಾಭವಿಲ್ಲ.

ಮಲ್ಲಯ್ಯ, ಶ್ರವಣಗೆರೆ

ಹಿರಿಯೂರು ತಾಲೂಕು ಶ್ರವಣಗೆರೆಯ ರೈತ ಮಲ್ಲಯ್ಯ ಹೇಳುವುದು ಹೀಗೆ: ಈ ಭಾಗದಲ್ಲಿ ಹೆಚ್ಚಾಗಿ ಈರುಳ್ಳಿ ಬೆಳೆಯುತ್ತಾರೆ. ಆದರೆ ಈರುಳ್ಳಿ ಬೆಳೆ ಕೈಗೆ ಬಂದಿದ್ದಾಗ ಬೆಲೆ ಇರಲಿಲ್ಲ. ಈಗ ಬೆಲೆಯೇನೋ ಇದೆ. ಆದರೆ ರೈತರ ಕೈಯಲ್ಲಿ ಈರುಳ್ಳಿ ಇಲ್ಲ. ಈರುಳ್ಳಿ ಬಂಡವಾಳಿಗರ ಗೋಡೋನ್ ನಲ್ಲಿ ದಾಸ್ತಾನು ಮಾಡಲಾಗಿದೆ. ಈಗೇನಿದ್ದರೂ ಅವರಿಗೆ ಲಾಭ. ಗೋಡೋನ್‌ಗಳಲ್ಲಿ ಸ್ಟಾಕ್ ಹಾಕಿಕೊಂಡಿರುವವರು 10 ಪಟ್ಟು ಲಾಭ ಮಾಡುತ್ತಿದ್ದಾರೆ. ಈರುಳ್ಳಿಯನ್ನು ಸಂಗ್ರಹಿಸಿಟ್ಟಿರುವ ಮಾಲೀಕರು ಈರುಳ್ಳಿಯ ಕೃತಕ ಕೊರತೆ ಉಂಟು ಮಾಡಿದ್ದಾರೆ. ಸರ್ಕಾರ ಇಂಥವರನ್ನು ಗುರುತಿಸಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮಧ್ಯವರ್ತಿಗಳು ಮತ್ತು ಮಾಲಿಕರೇ ಹಣ ಮಾಡುತ್ತಾರೆ. ಬೆಲೆ ಏರಿಕೆಯಾಗಿರುವುದನ್ನು ನೋಡಿ ಈಗ ರೈತರು ಮತ್ತೆ ಈರುಳ್ಳಿ ಬೀಜ ಬಿತ್ತನೆ ಮಾಡಿದ್ದಾರೆ. ಈ ಈರುಳ್ಳಿ ಮಾರುಕಟ್ಟೆಗೆ ಬರುವ ಹೊತ್ತಿಗೆ ಬೆಲೆ ಕುಸಿದು ಹೋಗಿರುತ್ತದೆ. ಹೀಗಾಗಿ ರೈತರು ಹಾಕಿರುವ ಬಂಡವಾಳವೂ ಬಾರದೆ, ಮಾಡಿರುವ ಸಾಲವನ್ನೂ ಕಟ್ಟಲಾಗದೆ ಸಂಕಷ್ಟಕ್ಕೆ ಸಿಲುಕುತ್ತಾರೆ. ಇದನ್ನು ತಪ್ಪಿಸಲು ವೈಜ್ಞಾನಿಕ ಬೆಲೆ ಪದ್ದತಿ ಜಾರಿಗೆ ತರಬೇಕು.

ಕೊಪ್ಪಳ ಜಿಲ್ಲೆಯ 800 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿದೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಬಹುತೇಕ ಬೆಳೆ ಕೊಚ್ಚಿ ಹೋಗಿದೆ. ಈರುಳ್ಳಿ ಬೆಳೆಯ ಹೊಲಕ್ಕೆ ನೀರು ಹರಿದು ಬೆಳೆಯೆಲ್ಲಾ ಕೊಳೆತು ಹೋಗಿದೆ. ಇದರ ನಡುವೆಯೂ ಕೆಲವು ರೈತರಿಗೆ ಬಂಪರ್ ಬೆಳೆ ಬಂದಿದೆ. ಕೊಪ್ಪಳದ ರೈತರೊಬ್ಬರು ಮೂರು ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿಗೆ 6 ಲಕ್ಷ ರೂಪಾಯಿ ಆದಾಯ ಬಂದಿದೆ. ರೇಟ್ ಐತಿ, ಈ ವರ್ಷ ಬೆಳೆಯೂ ಚನ್ನಾಗಿದೆ. ಒಂದಷ್ಟು ಕೊಳೆತೂ ಹೋಗಿದೆ. ಆದರೆ ಇಲ್ಲಿನ ರೈತರು ಬೆಳೆದ ಈರುಳ್ಳಿಯನ್ನು ಗುಲ್ಬರ್ಗಾ ಇಲ್ಲವೇ ಬೆಂಗಳೂರು ಮಾರುಕಟ್ಟೆಗೆ ತೆಗೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಇದರಿಂದ ಈರುಳ್ಳಿ ಸಾಗಾಣಿಕಾ ವೆಚ್ಚ ಹೆಚ್ಚಾಗುತ್ತದೆ. ಈ ಜಿಲ್ಲಾ ಕೇಂದ್ರದಲ್ಲೇ ಈರುಳ್ಳಿ ಮಾರುಕಟ್ಟೆ ಇದ್ದರೆ ಹೆಚ್ಚು ಅನುಕೂಲವಾಗುತ್ತದೆ. ರೈತರಿಗೆ ಖರ್ಚು ತಪ್ಪುತ್ತದೆ. ಒಂದಿಷ್ಟು ಲಾಭವೂ ಬರುತ್ತದೆ. ಹಾಗಾಗಿ ಸರ್ಕಾರ ಈರುಳ್ಳಿ ಬೆಳೆಗೆ ಹೆಸರಾಗಿರುವ ಕೊಪ್ಪಳದಲ್ಲಿ ಮಾರುಕಟ್ಟೆ ಮಾಡಿದರೆ ಒಳ್ಳೆಯದು ಎನ್ನುತ್ತಾರೆ ರೈತ ರಾಜಾಸಾಬ್.

ಈರುಳ್ಳಿ ಬೆಲೆ ಉತ್ತರ ಭಾರತ ನಗರಗಳಲ್ಲಿ ಮತ್ತಷ್ಟು ಏರಿಕೆಯಾಗಿದೆ. ಅಲ್ಲಿ 200ರ ಗಡಿ ದಾಟಿದೆ. ಪರಿಸ್ಥಿತಿ ಹೀಗಿದ್ದರೂ ಕೇಂದ್ರ ಸರ್ಕಾರ ಜನರ ಈ ಸಮಸ್ಯೆಯನ್ನು ನೀಗಿಸಲು ಯಾವುದೇ ಕ್ರಮಕ್ಕೆ ಮುಂದಾದಂತೆ ಕಾಣುತ್ತಿಲ್ಲ. ಬದಲಿಗೆ ಜವಾಬ್ದಾರಿಯುತ ಕೇಂದ್ರ ಸಚಿವರು ನಾವು ನಮ್ಮ ಮನೆಯಲ್ಲಿ ಈರುಳ್ಳಿಯನ್ನೇ ಬಳಸುವುದಿಲ್ಲ. ನಾವು ಈರುಳ್ಳಿ ತಿನ್ನುವ ಕುಟುಂಬದಿಂದ ಬಂದಿಲ್ಲ, ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಅಪಹಾಸ್ಯ ಮಾತನಾಡುತ್ತಿದ್ದಾರೆ. ಕೇಂದ್ರ ಸಚಿವರ ಈ ಮಾತುಗಳಿಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು, ಫೇಸ್ ಬುಕ್ಕಿಗರು ಸರಿಯಾಗೇ ತರಾಟೆಗೆ ತೆಗೆದುಕೊಂಡಿದ್ದಾರೆ. ಬಹುಜನರು ಬಳಸುವ ಈರುಳ್ಳಿಯ ಬಗ್ಗೆ ಹೀಗೆ ಮಾತನಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕುವುದನ್ನು ಮುಂದೂಡುತ್ತಿದ್ದಂತೆಯೇ ದೇಶದಲ್ಲಿ ದಿಢೀರ್ ಈರುಳ್ಳಿ ಬೆಲೆ ಏರಿಕೆಯಾಗಿದೆ. ಹೀಗೆ ಈರುಳ್ಳಿಯ ಕೃತಕ ಕೊರತೆ ಮತ್ತು ಗಗನಮುಖಿ ಬೆಲೆ ಏರಿಕೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡಿರುವ ಸಾಧ್ಯತೆ ಹೆಚ್ಚಾಗಿದೆ. ದೇಶೀಯ ಮಾರುಕಟ್ಟೆಯನ್ನು ಮಧ್ಯವರ್ತಿಗಳು ಮತ್ತು ಮಾಲೀಕರು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಮಾಡಿರುವ ತಂತ್ರದ ಭಾಗವಾಗಿಯೂ ಇದು ಕಂಡು ಬರುತ್ತಿದೆ. ಈರುಳ್ಳಿ ಬೆಲೆ ಹೆಚ್ಚಾದಾಗಲೆಲ್ಲ ಆಡಳಿತದಲ್ಲಿರುವ ಹಲವು ಸರ್ಕಾರ ಬಿದ್ದುಹೋಗಿರುವ ಉದಾಹರಣೆಯೂ ನಮ್ಮ ಮುಂದಿದೆ. ರೈತರು ಮತ್ತು ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿರುವ ಸನ್ನಿವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನರ ನೆರವಿಗೆ ಬರಬೇಕಾಗಿದೆ. ಮಧ್ಯವರ್ತಿಗಳು ಮತ್ತು ಮಾಲೀಕರ ಲಾಭಕೋರತನವನ್ನು ತಡೆದು ಗ್ರಾಹಕರ ಹಿತಕಾಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...