Homeಮುಖಪುಟ'ಕೇವಲ ಹಿಂದಿ ಏಕೆ?' | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

- Advertisement -
- Advertisement -

ಸಂವಿಧಾನದ 348(1)ನೇ ವಿಧಿಯ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕಲಾಪಗಳನ್ನು ಹಿಂದಿಯಲ್ಲಿ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸ್ವೀಕರಿಸಲು ಸುಪ್ರೀಂ ಕೋರ್ಟ್ ಸೋಮವಾರ ತಳ್ಳಿ ಹಾಕಿದೆ. ಹಿಂದಿಗೆ ಮಾತ್ರ ವಿಷೇಶ ಮಹತ್ವ ಯಾಕೆ ಎಂದು ಸುಪ್ರೀಂಕೋರ್ಟ್ ಇದೇ ವೇಳೆ ಪ್ರಶ್ನಿಸಿದೆ. ಕೇವಲ ಹಿಂದಿ ಏಕೆ?

ಸಂವಿಧಾನದ 348(1)ನೇ ವಿಧಿ ಸುಪ್ರೀಂ ಕೋರ್ಟ್ ಮತ್ತು ಎಲ್ಲಾ ಹೈಕೋರ್ಟ್‌ಗಳಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಇಂಗ್ಲಿಷ್ ಭಾಷೆಯಲ್ಲಿ ಮಾಡಬೇಕು ಎಂದು ಹೇಳುತ್ತದೆ. ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದ ವಿವಿಧ ರಾಜ್ಯಗಳ ಕಕ್ಷಿದಾರರು ಸುಪ್ರೀಂ ಕೋರ್ಟ್‌ಗೆ ಪ್ರಕರಣಗಳನ್ನು ಸಲ್ಲಿಸುತ್ತಾರೆ. ಆದರೆ ಹಿಂದಿ ಭಾಷೆಗೆ ಮಾತ್ರ ವಿಶೇಷ ಮಹತ್ವ ಯಾಕೆ ಏಕೆ ಎಂದು ಸಿಜೆಐ ಡಿವೈ ಚಂದ್ರಚೂಡ್ ಅರ್ಜಿದಾರರನ್ನು ಕೇಳಿದ್ದಾರೆ. ಕೇವಲ ಹಿಂದಿ ಏಕೆ?

ಕೇವಲ ಹಿಂದಿ ಮಾತ್ರ ಏಕೆ? ಮೇಲ್ಮನವಿಗಳು ಮತ್ತು ಎಸ್‌ಎಲ್‌ಪಿಗಳು ಎಲ್ಲಾ ರಾಜ್ಯಗಳಿಂದ ಈ ನ್ಯಾಯಾಲಯಕ್ಕೆ ಬರುತ್ತವೆ. ನಾವು ಈಗ ಸಂವಿಧಾನದಿಂದ ಗುರುತಿಸಲ್ಪಟ್ಟ ಪ್ರತಿಯೊಂದು ಭಾಷೆಯ ಕಕ್ಷದಾರರನ್ನು ಕೇಳಬೇಕು, ಹಾಗಾದರೆ ಹಿಂದಿ ಭಾಷೆಯಲ್ಲಿ ಮಾತ್ರ ಮಾಡಿದರೆ ಕೆಲಸ ಸಾಧ್ಯವೆ? ಎಂದು ಅವರು ಕೇಳಿದ್ದಾರೆ.

ಸಂವಿಧಾನದ 348(1)ನೇ ವಿಧಿಯು ಮೂಲ ಸಂವಿಧಾನದ ಭಾಗವಾಗಿದೆ ಎಂದು ಅವರು ಸೂಚಿಸಿದ್ದಾರೆ. “ಸಂವಿಧಾನದ 348(1) ನೇ ವಿಧಿಯ ಸಿಂಧುತ್ವವನ್ನು ನೀವು ಹೇಗೆ ಪ್ರಶ್ನಿಸುತ್ತೀರಿ? ಇದು ಮೂಲ ಸಂವಿಧಾನದ ಭಾಗ” ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಭಾಷಾವಾರು ಅಡೆತಡೆಯ ಕಾರಣಕ್ಕೆ ನ್ಯಾಯ ನಿರಾಕರಣೆಯಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಆದರೆ ಪೀಠವು ಈ ವಿಷಯವಾಗಿ ಮತ್ತಷ್ಟು ವಿಚಾರಣೆ ನಡೆಸಲು ನಿರಾಕರಿಸಿ, ಅದನ್ನು ವಜಾಗೊಳಿಸಿದೆ. “ರಿಟ್ ಅರ್ಜಿಯು ಅರ್ಹತೆಯ ಕೊರತೆ ಹೊಂದಿದ್ದು, ಅದರಂತೆ ಅರ್ಜಿಯನ್ನು ವಜಾಗೊಳಿಸಲಾಗಿದೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: 370 ವಿಧಿ ರದ್ದತಿ ವಿರುದ್ಧ ನಿರ್ಣಯ | ಜಮ್ಮು ಕಾಶ್ಮೀರದ ಮೊದಲ ಅಧಿವೇಶನದಲ್ಲಿ ಗದ್ದಲ

370 ವಿಧಿ ರದ್ದತಿ ವಿರುದ್ಧ ನಿರ್ಣಯ | ಜಮ್ಮು ಕಾಶ್ಮೀರದ ಮೊದಲ ಅಧಿವೇಶನದಲ್ಲಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...