HomeUncategorized'ಚಡ್ಡಿ ಸಂಗ್ರಹ' ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

‘ಚಡ್ಡಿ ಸಂಗ್ರಹ’ ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಮಾಜಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ಕಳೆದ ವರ್ಷ ಚಡ್ಡಿ ಸಂಗ್ರಹ ಅಭಿಯಾನವನ್ನು ಎಸ್‌ಸಿ ಮೋರ್ಚಾ ನಾಯಕರು ಮಾತ್ರ ಮಾಡಿದ್ಯಾಕೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬಿ.ಎಲ್. ಸಂತೋಷ್ ಅವರಿಗೆ ಟ್ಯಾಗ್ ಮಾಡಿ ಬರೆದುಕೊಂಡಿರುವ ಅವರು, ‘ಆತ್ಮೀಯ ಬಿ.ಎಲ್. ಸಂತೋಷ್ ಜಿ, ಮಹಾ ಪರಿನಿರ್ವಾಣ ದಿನದಂದು, ಬಿಜೆಪಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಸರಳವಾದ ಸ್ಪಷ್ಟನೆಯನ್ನು ಕೇಳುತ್ತಿದ್ದಾರೆ, ಅವರು ದಲಿತ ಎಂಬ ಕಾರಣಕ್ಕಾಗಿ ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೇವಾರ್ ಅವರ ಮನೆಗೆ (ಈಗ ವಸ್ತುಸಂಗ್ರಹಾಲಯ) ಪ್ರವೇಶವನ್ನು ಏಕೆ ನಿರಾಕರಿಸಲಾಯಿತು? ಅವರ ಮನವಿಯನ್ನು ಆಲಿಸಿ ಜೀ’ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಮುಂದೆ ಚಡ್ಡಿ ಹೊತ್ತು ಪ್ರತಿಭಟಿಸಿದ್ದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ.

‘ಅಲ್ಲದೆ, ಕಳೆದ ವರ್ಷದ ಚಡ್ಡಿ ಸಂಗ್ರಹ ಅಭಿಯಾನವನ್ನು ಎಸ್‌ಸಿ ಮೋರ್ಚಾ ನಾಯಕರು ಮಾತ್ರ ಏಕೆ ಮಾಡಿದರು? ಬಿಜೆಪಿ ಅಥವಾ ಆರ್‌ಎಸ್‌ಎಸ್‌ನ ಇತರ ಯಾವುದೇ ನಾಯಕರು ಏಕೆ ಮಾಡಲಿಲ್ಲ ಎಂದು ನೀವು ಸ್ಪಷ್ಟಪಡಿಸುತ್ತೀರಾ? ಆರ್‌ಎಸ್‌ಎಸ್‌ ಚಡ್ಡಿಗಳನ್ನು ಸುಟ್ಟಾಗ ನೀವೇಕೆ ಮುಂದಾಳತ್ವ ವಹಿಸಲಿಲ್ಲ’ ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ.

‘ಆರ್‌ಎಸ್‌ಎಸ್‌ ಎಸ್‌ಸಿ-ಎಸ್‌ಟಿ ವಿರೋಧಿಯಾಗಿಯೇ ಇತ್ತು. ನೀವು ಹಿಂತಿರುಗಿ ಕುಳಿತು ಪ್ರದರ್ಶನವನ್ನು ಆನಂದಿಸುತ್ತಿರುವಾಗ, ನಿಮ್ಮ ಪರವಾಗಿ ಯುದ್ಧಗಳಲ್ಲಿ ಹೋರಾಡಲು ನೀವು ದಲಿತರು ಮತ್ತು ಹಿಂದುಳಿದವರನ್ನು ಬಳಸುತ್ತೀರಿ. ಇದು ನಿಜವಲ್ಲವೇ ಜೀ’ ಎಂದು ಕಿಡಿಕಾರಿದ್ದಾರೆ.

ಗೂಳಿಹಟ್ಟಿ ಶೇಖರ್ ಆಡಿಯೋದಲ್ಲಿ ಏನಿದೆ?

‘ಬಹಳ ಖುಷಿಯಿಂದ ನಾನು ಆರ್‌ಎಸ್‌ಎಸ್‌ ಕಚೇರಿಗೆ ಹೋದೆ, ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ಚುನಾವಣೆ ಘೋಷಣೆಯಾಗುವುದಕ್ಕೂ ಎರಡು ತಿಂಗಳ ಮುಂಚೆ ಸ್ನೇಹಿತರ ಜತೆಗೆ ಮಹಾರಾಷ್ಟ್ರದ ನಾಗಪುರದ ಆರೆಸ್ಸೆಸ್ ಕಚೇರಿಗೆ ಖುಷಿಯಿಂದ ಭೇಟಿ ನೀಡಿದ್ದೆ. ಹೆಡಗೇವಾರ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಂದ ವಸ್ತುಸಂಗ್ರಹಾಲಯಕ್ಕೆ ತೆರಳಿದಾಗ ನನ್ನನ್ನು ಪರಿಶಿಷ್ಟ ಜಾತಿಯವನಾ ಎಂದು ಕೇಳಿದರು, ನಾನು ಹೌದು ಎಂದಿದ್ದಕ್ಕೆ ಪ್ರವೇಶ ನಿರಾಕರಿಸಲಾಯಿತು. ಇದರಿಂದ ನನಗೆ ಬಹಳ ನೋವಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...