HomeUncategorized'ಚಡ್ಡಿ ಸಂಗ್ರಹ' ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

‘ಚಡ್ಡಿ ಸಂಗ್ರಹ’ ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಮಾಜಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ಕಳೆದ ವರ್ಷ ಚಡ್ಡಿ ಸಂಗ್ರಹ ಅಭಿಯಾನವನ್ನು ಎಸ್‌ಸಿ ಮೋರ್ಚಾ ನಾಯಕರು ಮಾತ್ರ ಮಾಡಿದ್ಯಾಕೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬಿ.ಎಲ್. ಸಂತೋಷ್ ಅವರಿಗೆ ಟ್ಯಾಗ್ ಮಾಡಿ ಬರೆದುಕೊಂಡಿರುವ ಅವರು, ‘ಆತ್ಮೀಯ ಬಿ.ಎಲ್. ಸಂತೋಷ್ ಜಿ, ಮಹಾ ಪರಿನಿರ್ವಾಣ ದಿನದಂದು, ಬಿಜೆಪಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಸರಳವಾದ ಸ್ಪಷ್ಟನೆಯನ್ನು ಕೇಳುತ್ತಿದ್ದಾರೆ, ಅವರು ದಲಿತ ಎಂಬ ಕಾರಣಕ್ಕಾಗಿ ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೇವಾರ್ ಅವರ ಮನೆಗೆ (ಈಗ ವಸ್ತುಸಂಗ್ರಹಾಲಯ) ಪ್ರವೇಶವನ್ನು ಏಕೆ ನಿರಾಕರಿಸಲಾಯಿತು? ಅವರ ಮನವಿಯನ್ನು ಆಲಿಸಿ ಜೀ’ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಮುಂದೆ ಚಡ್ಡಿ ಹೊತ್ತು ಪ್ರತಿಭಟಿಸಿದ್ದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ.

‘ಅಲ್ಲದೆ, ಕಳೆದ ವರ್ಷದ ಚಡ್ಡಿ ಸಂಗ್ರಹ ಅಭಿಯಾನವನ್ನು ಎಸ್‌ಸಿ ಮೋರ್ಚಾ ನಾಯಕರು ಮಾತ್ರ ಏಕೆ ಮಾಡಿದರು? ಬಿಜೆಪಿ ಅಥವಾ ಆರ್‌ಎಸ್‌ಎಸ್‌ನ ಇತರ ಯಾವುದೇ ನಾಯಕರು ಏಕೆ ಮಾಡಲಿಲ್ಲ ಎಂದು ನೀವು ಸ್ಪಷ್ಟಪಡಿಸುತ್ತೀರಾ? ಆರ್‌ಎಸ್‌ಎಸ್‌ ಚಡ್ಡಿಗಳನ್ನು ಸುಟ್ಟಾಗ ನೀವೇಕೆ ಮುಂದಾಳತ್ವ ವಹಿಸಲಿಲ್ಲ’ ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ.

‘ಆರ್‌ಎಸ್‌ಎಸ್‌ ಎಸ್‌ಸಿ-ಎಸ್‌ಟಿ ವಿರೋಧಿಯಾಗಿಯೇ ಇತ್ತು. ನೀವು ಹಿಂತಿರುಗಿ ಕುಳಿತು ಪ್ರದರ್ಶನವನ್ನು ಆನಂದಿಸುತ್ತಿರುವಾಗ, ನಿಮ್ಮ ಪರವಾಗಿ ಯುದ್ಧಗಳಲ್ಲಿ ಹೋರಾಡಲು ನೀವು ದಲಿತರು ಮತ್ತು ಹಿಂದುಳಿದವರನ್ನು ಬಳಸುತ್ತೀರಿ. ಇದು ನಿಜವಲ್ಲವೇ ಜೀ’ ಎಂದು ಕಿಡಿಕಾರಿದ್ದಾರೆ.

ಗೂಳಿಹಟ್ಟಿ ಶೇಖರ್ ಆಡಿಯೋದಲ್ಲಿ ಏನಿದೆ?

‘ಬಹಳ ಖುಷಿಯಿಂದ ನಾನು ಆರ್‌ಎಸ್‌ಎಸ್‌ ಕಚೇರಿಗೆ ಹೋದೆ, ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ಚುನಾವಣೆ ಘೋಷಣೆಯಾಗುವುದಕ್ಕೂ ಎರಡು ತಿಂಗಳ ಮುಂಚೆ ಸ್ನೇಹಿತರ ಜತೆಗೆ ಮಹಾರಾಷ್ಟ್ರದ ನಾಗಪುರದ ಆರೆಸ್ಸೆಸ್ ಕಚೇರಿಗೆ ಖುಷಿಯಿಂದ ಭೇಟಿ ನೀಡಿದ್ದೆ. ಹೆಡಗೇವಾರ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಂದ ವಸ್ತುಸಂಗ್ರಹಾಲಯಕ್ಕೆ ತೆರಳಿದಾಗ ನನ್ನನ್ನು ಪರಿಶಿಷ್ಟ ಜಾತಿಯವನಾ ಎಂದು ಕೇಳಿದರು, ನಾನು ಹೌದು ಎಂದಿದ್ದಕ್ಕೆ ಪ್ರವೇಶ ನಿರಾಕರಿಸಲಾಯಿತು. ಇದರಿಂದ ನನಗೆ ಬಹಳ ನೋವಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...