Homeಅಂಕಣಗಳುಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

- Advertisement -
- Advertisement -

ಎಲ್ಲಾ ಮುಗದ ಮ್ಯಾಲ ಬರತಾರ. ಬೇಕಾದವರನ್ನ ಸಟಕ್ಕನ ಹಿಡೀತಾರ. ಬ್ಯಾಡಾದವರು ಕಣ್ಣೆದುರಿಗೆ ಇದ್ದರೂ ನೋಡದಂಗ ಇರತಾರ. ಎಲ್ಲಾ ಗೊತ್ತಿದ್ದೂ ತಪ್ಪು ಮಾಡತಾರೋ, ಅಥವಾ ಅವರಿಗೆ ತಿಳಿಯಂಗಿಲ್ಲೋ? ಸ್ವಂತ ಬುದ್ಧಿಯಿಂದ ಮಾಡತಾರೋ ಅಥವಾ ಯಾರದರ ಒತ್ತಡದಾಗ ಮಾಡತಾರೋ?

ಈ ಪ್ರಶ್ನೆಗಳಿಗೆ ಉತ್ತರ ಸರಳ. ಅವರು ದಡ್ಡರೇನಲ್ಲ. ಕಾಲಕ್ಕೆ ತಕ್ಕ ಹಂಗ ಬದಲಾಗೋ ಬುದ್ಧಿವಂತರು. ಆದರ ಅವರಿಗೆ ಸ್ವತಂತ್ರ ಇಲ್ಲ. ಅವರು ಆಳುವವರ ಹಂಗಿಗೆ ಬಿದ್ದವರು. ರಾಜಕೀಯ ಕಾರಣಕ್ಕಾಗಿ ನಿರ್ಧಾರ ಬದಲಿಸೋರು. ಅವರ ಕೆಲಸ ವೃತ್ತಿಪರತೆಗೆ ತಕ್ಕಂಗ ಅಲ್ಲ. ಅವರ ನಿಯತ್ತು ವಸ್ತು ನಿಷ್ಠ ಅಲ್ಲ. ವ್ಯಕ್ತಿ ನಿಷ್ಠ.
ಯಾಕ ಹಿಂಗ?

ಯಾಕಂದರ ಅವರು ರಾಜಕಾರಣಿಗಳ ಮುಲಾಜಿನ್ಯಾಗ ಇರತಾರ. ಅವರ ವರ್ಗಾವಣೆ- ನೇಮಕ- ಬದಲಾವಣೆಗೆ ಅವರು ಅಧಿಕಾರಿಗಳ ಕಡೆ ಹೋಗಂಗಿಲ್ಲ, ಎಮ್ಮೆಲ್ಲೆ ಸಾಹೇಬರ ಕಡೆ ಹೋಗತಾರ. ಅವರು ಹೂಂ ಅಂದರ ಇರತಾರ, ಇಲ್ಲಾ ಅಂದರ ಹೋಗತಾರ. ಅವರಿಗೆ ಬೇಕಾದಲ್ಲೆ, ಬೇಕಾಷ್ಟು ದಿನಾ ಇರತಾರ. ಅವರ ಮನಸು ತಗದರ ಹೋಗತಾರ.

ಹಿಂಗಿರುವಾಗ ಶಾಸಕರು ತಮ್ಮ ಕ್ಷೇತ್ರದ ಅನಭಿಷಕ್ತ ದೊರೆಯಾಗತಾರ. ದ್ವೇಷದ ರಾಜಕಾರಣ ಮಾಡತಾರ. ಬೇಕಾದವರನ್ನ ಒದ್ದ ಒಳಗ ಹಾಕಸತಾರ. ಬ್ಯಾಡಾದವರನ್ನ ಊರಾಗ ಮೆರಸತಾರ. ಒಮ್ಮೆ ಏನಾತಪಾ ಅಂದರ ಒಬ್ಬ ಪ್ರಭಾವಿ ರಾಜಕಾರಣಿಯ ಕ್ಷೇತ್ರದೊಳಗ ಒಂದು ಅತ್ಯಾಚಾರ ಪ್ರಕರಣ ಆತು. ಅದರ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಬ್ಯಾರೆ ಬ್ಯಾರೆ ಕೋಮಿನವರು ಇದ್ದರು. ಆರೋಪಿ ಶಾಸಕರ ಕೋಮಿನವರು ಆಗಿದ್ದರು. ಮುಂದ ಜಗಳ ಆಗತದ ಅಂತ ಹೇಳಿ ಶಾಸಕರು ತಲಿ ಓಡಿಸಿದರು. ಪೊಲೀಸ ಇನ್ಸಪೆಕ್ಟರ್‍ನ ಕರದು ಪ್ರಕರಣ ಬದಲಾವಣೆ ಮಾಡಿಸಿದರು. ಅತ್ಯಾಚಾರವನ್ನ ಗುಂಪು ಅತ್ಯಾಚಾರ ಅಂತ ಬದಲಾಯಿಸಲಾತು. ಸಂತ್ರಸ್ತೆಯ ಜಾತಿಯ ಹುಡುಗನೊಬ್ಬನ ಹೆಸರು ಅದರಾಗ ಸೇರಿಸಲಾಯಿತು. ಸಾರ್ವಜನಿಕ ಶಾಂತಿಗೆ ಭಂಗ ಬರಲಾರದಂಗ ಮಾಡೇವಿ ಅಂತ ಶಾಸಕರು ಹೇಳಿಕೊಂಡು ಅಡ್ಡಾಡಿದರು. ಸತ್ಯ ಏನಂದರ ಹೊಸದಾಗಿ ಹೆಸರು ಸೇರಿಸಿದ ಹುಡುಗ ಆ ಊರು ಬಿಟ್ಟು 20 ವರ್ಷ ಆಗಿತ್ತು. ಆತ ಕೆಲಸ ಹುಡುಕಿಕೊಂಡು ಬಾಂಬೆಗೆ ಹೋಗಿದ್ದ. ಅವನಿಗೆ ಈ ಪ್ರಕರಣದ ಬಗ್ಗೆ ಗೊತ್ತ ಇರಲಿಲ್ಲ.

ಆತ ಪ್ರಕರಣ ನಡದ ದಿವಸ ಊರಾಗ ಇರಲಿಲ್ಲ ಅಂದದ್ದಕ್ಕ, ಮತ್ತು ಇತರ ಕಾರಣಗಳಿಗೆ ಆ ಪ್ರಕರಣ ಬಿದ್ದು ಹೋತು. ನಿಜವಾದ ಆರೋಪಿ ಹೊರಗ ಬಂದ.

ಇಷ್ಟೆಲ್ಲಾ ಯಾಕ ಆತು ಅಂದರ ಆ ಇನ್ಸಪೆಕ್ಟರ್ ಆ ಶಾಸಕರ ಶಿಫಾರಸಿನ ಮೇಲೆ ಆ ಪೊಲೀಸ ಠಾಣೆಗೆ ಬಂದಿದ್ದ. ಆತ ಕಾನೂನಿಗೆ – ವ್ಯವಸ್ಥೆಗೆ- ಹಿರಿಯ ಅಧಿಕಾರಿಗಳ ಸಕಾರಣ ಸಲಹೆಗೆ ತಲೆ ಬಾಗದೇ ತನ್ನನ್ನು ತಂದ ಶಾಸಕರಿಗೆ ತಲೆ ಬಾಗಿದ. ಹಿಂಗ ಮಾಡೋ ಶಿಫಾರಸಿಗೆ ಮಿನಿಟ್ ಸಿಸ್ಟಂ ಅಂತ ಹೆಸರು. ಅದು ಹೋಗದ ಹೊರತು ಆ ಇಲಾಖೆ ಉದ್ಧಾರ ಸಾಧ್ಯ ಇಲ್ಲ ಅಂತ ತಿಳಿದವರ ಅಂಬೋಣ.

ಈ ಶಿಫಾರಸು ಮಾಡಬಾರದು ಅಂತ ಒಂದು ಕಾನೂನು ಅದ. ಅದು ಎಲ್ಲಿಂದ ಬಂತಪಾ ಅಂದರ, ಸುಪ್ರೀಂ ಕೋರ್ಟಿನ ಆದೇಶದಿಂದಾ ಬಂತು.

ಪದ್ಮಶ್ರೀ ಪ್ರಕಾಶ ಸಿಂಗ ಅವರು 1996 ದಾಗ ಉತ್ತರ ಪ್ರದೇಶದ ಪೊಲೀಸ್ ಮಹಾ ನಿರ್ದೇಶಕರಾಗಿ ನಿವೃತ್ತರಾದರು. ಅದೇ ವರ್ಷ ಅವರು ಸುಪ್ರೀಂಕೋರ್ಟಿನ್ಯಾಗ ಒಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟಿನಿಂದ 2007ದಾಗ ಒಂದು ತೀರ್ಪು ಬಂತು. ಅದರ ಪ್ರಕಾರ ಪೊಲೀಸ ವ್ಯವಸ್ಥೆಯ ರಾಜಕೀಕರಣ ನಿಲ್ಲಬೇಕು. ಪೊಲೀಸರ ವರ್ಗಾವರ್ಗಿ, ವಿವಿಧ ಸ್ಥಾನಗಳಿಗೆ ನೇಮಕ ಮುಂತಾದವು ಕೇವಲ ಅವರವರ ಸಾಮಥ್ರ್ಯದ ಮ್ಯಾಲ ಇರಬೇಕು. ಅವರ ರಾಜಕೀಯ ನಿಲುವುಗಳಿಗೆ ತಕ್ಕಂಗ ಇರಬಾರದು. ಇದನ್ನ ಸಾಧಿಸಲಿಕ್ಕೆ ವಲಯ ಹಾಗೂ ರಾಜ್ಯ ಮಟ್ಟದಾಗ ಹಿರಿಯ ಅಧಿಕಾರಿಗಳ ಸಮಿತಿ ನೇಮಕ ಮಾಡಬೇಕು, ಮಾನವ ಸಂಪನ್ಮೂಲಕ್ಕ ಸಂಬಂಧಪಟ್ಟಂಗ, ವರ್ಗಾವರ್ಗಿ ಸಂಬಂಧಪಟ್ಟಂಗ ಎಲ್ಲಾ ನಿರ್ಧಾರ ಅವರ ತೊಗೋಬೇಕು ಅಂತ ತೀರ್ಪು ಬಂತು. ಯಾವುದೇ ಅಧಿಕಾರಿನ ಎರಡು ವರ್ಷಕ್ಕಿಂತ ಕಮ್ಮಿ ಸಮಯದಾಗ ವರ್ಗ ಮಾಡಬಾರದು ಅಂತ ಆದೇಶ ಬಂತು.

ಇದನ್ನ ಒಂದು ವರ್ಷದ ತನಕಾ ಕಟ್ಟುನಿಟ್ಟಿನ ಆದೇಶ ಅಂತ ಹೇಳಿ ಪಾಲಸಬೇಕು. ನಂತರ ಇದೇ ಮಾದರಿಯ ಕಾನೂನು ರಾಜ್ಯ ಶಾಸನಸಭೆಯೊಳಗ ಪಾಸು ಮಾಡಬೇಕು ಅಂತ ಆತು. ಅದಕ್ಕ ಕರ್ನಾಟಕದ ಘನ ಸರಕಾರ ಪಟಕ್ಕನ `ಎಸ್ ಸರ್’ ಅಂತ ಹೇಳಿತು. `ಹಂಗ ಮಾಡತೇವಿ’ ಅಂತ ಹೇಳಿ ಬರವಣಿಗೆಯೊಳಗ ಮಾತು ಕೊಟ್ಟಿತು.
ಮೊದಲ ಎರಡು ವರ್ಷ ಅಜಯ ಕುಮಾರ ಸಿಂಗ ಪೊಲೀಸ ಮಹಾ ನಿರ್ದೇಶಕರು ಇದ್ದರು, ಎಸ್‌. ಎಮ್ ಜಾಮದಾರ ಗೃಹ ಇಲಾಖೆ ಕಾರ್ಯದರ್ಶಿ ಇದ್ದರು. ಆವಾಗ ಎಲ್ಲಾ ಸುಪ್ರೀಂಕೊರ್ಟಿನ ಆದೇಶ ಪ್ರಕಾರ ನಡೀತು. ಸಿಂಗ ನಿವೃತ್ತರಾದರು, ಜಾಮದಾರ ಅವರು ವರ್ಗಾವಣೆ ಆದರು. ಆ ನಂತರ ಬಂದ ಹಿರಿಯ ಅಧಿಕಾರಿಗಳಿಗೆ ಅದು ಇಷ್ಟ ಇರಲಿಲ್ಲ. ಅವರು ಮತ್ತ ಮೊದಲಿನ ಹಂಗ ರಾಜಕೀಯ ನಾಯಕರ ಮಾತು ಕೇಳಿ ವರ್ಗಾವಣೆ ಶುರು ಮಾಡಿದರು.

ಈಗ ಮತ್ತ ಹಂಗ ಆಗೇದ. ದೆಹಲಿಯ ಜೆಎನ್‍ಯುದಾಗ, ಜಾಮಿಯಾದಾಗ, ಉತ್ತರ ಪ್ರದೇಶದಾಗ, ಬೀದರಿನ ಶಾಹೀನ ಸಾಲಿ ಪ್ರಕರಣದಾಗ, ಪೊಲೀಸರು ವಸ್ತುನಿಷ್ಠವಾಗಿ ನಡೆದುಕೊಳ್ಳದೇ ವ್ಯಕ್ತಿ ನಿಷ್ಠವಾಗಿ ನಡೆದುಕೊಂಡಿದ್ದಕ್ಕ ಅವರು ತಪ್ಪು ಮಾಡಲಾರದ ಸಜ್ಜನರ ವಿರುದ್ಧವಾಗಿ, ಅಪರಾಧಿಗಳ ಪರವಾಗಿ ನಡಕೊಂಡಾರ.

ಯಾಕಂದರ ನಾವು ಸುಪ್ರೀಂಕೋರ್ಟನ್ನ ನಮಗ ಬೇಕಂದಾಗ ಉಪಯೋಗಿಸತೇವಿ. ನಮಗ ಅನುಕೂಲ ಇದ್ದಾಗ ಪಾಲಸತೇವಿ, ಇಲ್ಲದಾಗ ಬಿಡತೇವಿ ಅದಕ್ಕ ಇಷ್ಟಲ್ಲಾ ರಂಜ್-ತಂಜ್ ಆಗಲಿಕ್ಕೆ ಹತ್ತೇದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...