Homeಅಂಕಣಗಳುಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

- Advertisement -
- Advertisement -

ಎಲ್ಲಾ ಮುಗದ ಮ್ಯಾಲ ಬರತಾರ. ಬೇಕಾದವರನ್ನ ಸಟಕ್ಕನ ಹಿಡೀತಾರ. ಬ್ಯಾಡಾದವರು ಕಣ್ಣೆದುರಿಗೆ ಇದ್ದರೂ ನೋಡದಂಗ ಇರತಾರ. ಎಲ್ಲಾ ಗೊತ್ತಿದ್ದೂ ತಪ್ಪು ಮಾಡತಾರೋ, ಅಥವಾ ಅವರಿಗೆ ತಿಳಿಯಂಗಿಲ್ಲೋ? ಸ್ವಂತ ಬುದ್ಧಿಯಿಂದ ಮಾಡತಾರೋ ಅಥವಾ ಯಾರದರ ಒತ್ತಡದಾಗ ಮಾಡತಾರೋ?

ಈ ಪ್ರಶ್ನೆಗಳಿಗೆ ಉತ್ತರ ಸರಳ. ಅವರು ದಡ್ಡರೇನಲ್ಲ. ಕಾಲಕ್ಕೆ ತಕ್ಕ ಹಂಗ ಬದಲಾಗೋ ಬುದ್ಧಿವಂತರು. ಆದರ ಅವರಿಗೆ ಸ್ವತಂತ್ರ ಇಲ್ಲ. ಅವರು ಆಳುವವರ ಹಂಗಿಗೆ ಬಿದ್ದವರು. ರಾಜಕೀಯ ಕಾರಣಕ್ಕಾಗಿ ನಿರ್ಧಾರ ಬದಲಿಸೋರು. ಅವರ ಕೆಲಸ ವೃತ್ತಿಪರತೆಗೆ ತಕ್ಕಂಗ ಅಲ್ಲ. ಅವರ ನಿಯತ್ತು ವಸ್ತು ನಿಷ್ಠ ಅಲ್ಲ. ವ್ಯಕ್ತಿ ನಿಷ್ಠ.
ಯಾಕ ಹಿಂಗ?

ಯಾಕಂದರ ಅವರು ರಾಜಕಾರಣಿಗಳ ಮುಲಾಜಿನ್ಯಾಗ ಇರತಾರ. ಅವರ ವರ್ಗಾವಣೆ- ನೇಮಕ- ಬದಲಾವಣೆಗೆ ಅವರು ಅಧಿಕಾರಿಗಳ ಕಡೆ ಹೋಗಂಗಿಲ್ಲ, ಎಮ್ಮೆಲ್ಲೆ ಸಾಹೇಬರ ಕಡೆ ಹೋಗತಾರ. ಅವರು ಹೂಂ ಅಂದರ ಇರತಾರ, ಇಲ್ಲಾ ಅಂದರ ಹೋಗತಾರ. ಅವರಿಗೆ ಬೇಕಾದಲ್ಲೆ, ಬೇಕಾಷ್ಟು ದಿನಾ ಇರತಾರ. ಅವರ ಮನಸು ತಗದರ ಹೋಗತಾರ.

ಹಿಂಗಿರುವಾಗ ಶಾಸಕರು ತಮ್ಮ ಕ್ಷೇತ್ರದ ಅನಭಿಷಕ್ತ ದೊರೆಯಾಗತಾರ. ದ್ವೇಷದ ರಾಜಕಾರಣ ಮಾಡತಾರ. ಬೇಕಾದವರನ್ನ ಒದ್ದ ಒಳಗ ಹಾಕಸತಾರ. ಬ್ಯಾಡಾದವರನ್ನ ಊರಾಗ ಮೆರಸತಾರ. ಒಮ್ಮೆ ಏನಾತಪಾ ಅಂದರ ಒಬ್ಬ ಪ್ರಭಾವಿ ರಾಜಕಾರಣಿಯ ಕ್ಷೇತ್ರದೊಳಗ ಒಂದು ಅತ್ಯಾಚಾರ ಪ್ರಕರಣ ಆತು. ಅದರ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಬ್ಯಾರೆ ಬ್ಯಾರೆ ಕೋಮಿನವರು ಇದ್ದರು. ಆರೋಪಿ ಶಾಸಕರ ಕೋಮಿನವರು ಆಗಿದ್ದರು. ಮುಂದ ಜಗಳ ಆಗತದ ಅಂತ ಹೇಳಿ ಶಾಸಕರು ತಲಿ ಓಡಿಸಿದರು. ಪೊಲೀಸ ಇನ್ಸಪೆಕ್ಟರ್‍ನ ಕರದು ಪ್ರಕರಣ ಬದಲಾವಣೆ ಮಾಡಿಸಿದರು. ಅತ್ಯಾಚಾರವನ್ನ ಗುಂಪು ಅತ್ಯಾಚಾರ ಅಂತ ಬದಲಾಯಿಸಲಾತು. ಸಂತ್ರಸ್ತೆಯ ಜಾತಿಯ ಹುಡುಗನೊಬ್ಬನ ಹೆಸರು ಅದರಾಗ ಸೇರಿಸಲಾಯಿತು. ಸಾರ್ವಜನಿಕ ಶಾಂತಿಗೆ ಭಂಗ ಬರಲಾರದಂಗ ಮಾಡೇವಿ ಅಂತ ಶಾಸಕರು ಹೇಳಿಕೊಂಡು ಅಡ್ಡಾಡಿದರು. ಸತ್ಯ ಏನಂದರ ಹೊಸದಾಗಿ ಹೆಸರು ಸೇರಿಸಿದ ಹುಡುಗ ಆ ಊರು ಬಿಟ್ಟು 20 ವರ್ಷ ಆಗಿತ್ತು. ಆತ ಕೆಲಸ ಹುಡುಕಿಕೊಂಡು ಬಾಂಬೆಗೆ ಹೋಗಿದ್ದ. ಅವನಿಗೆ ಈ ಪ್ರಕರಣದ ಬಗ್ಗೆ ಗೊತ್ತ ಇರಲಿಲ್ಲ.

ಆತ ಪ್ರಕರಣ ನಡದ ದಿವಸ ಊರಾಗ ಇರಲಿಲ್ಲ ಅಂದದ್ದಕ್ಕ, ಮತ್ತು ಇತರ ಕಾರಣಗಳಿಗೆ ಆ ಪ್ರಕರಣ ಬಿದ್ದು ಹೋತು. ನಿಜವಾದ ಆರೋಪಿ ಹೊರಗ ಬಂದ.

ಇಷ್ಟೆಲ್ಲಾ ಯಾಕ ಆತು ಅಂದರ ಆ ಇನ್ಸಪೆಕ್ಟರ್ ಆ ಶಾಸಕರ ಶಿಫಾರಸಿನ ಮೇಲೆ ಆ ಪೊಲೀಸ ಠಾಣೆಗೆ ಬಂದಿದ್ದ. ಆತ ಕಾನೂನಿಗೆ – ವ್ಯವಸ್ಥೆಗೆ- ಹಿರಿಯ ಅಧಿಕಾರಿಗಳ ಸಕಾರಣ ಸಲಹೆಗೆ ತಲೆ ಬಾಗದೇ ತನ್ನನ್ನು ತಂದ ಶಾಸಕರಿಗೆ ತಲೆ ಬಾಗಿದ. ಹಿಂಗ ಮಾಡೋ ಶಿಫಾರಸಿಗೆ ಮಿನಿಟ್ ಸಿಸ್ಟಂ ಅಂತ ಹೆಸರು. ಅದು ಹೋಗದ ಹೊರತು ಆ ಇಲಾಖೆ ಉದ್ಧಾರ ಸಾಧ್ಯ ಇಲ್ಲ ಅಂತ ತಿಳಿದವರ ಅಂಬೋಣ.

ಈ ಶಿಫಾರಸು ಮಾಡಬಾರದು ಅಂತ ಒಂದು ಕಾನೂನು ಅದ. ಅದು ಎಲ್ಲಿಂದ ಬಂತಪಾ ಅಂದರ, ಸುಪ್ರೀಂ ಕೋರ್ಟಿನ ಆದೇಶದಿಂದಾ ಬಂತು.

ಪದ್ಮಶ್ರೀ ಪ್ರಕಾಶ ಸಿಂಗ ಅವರು 1996 ದಾಗ ಉತ್ತರ ಪ್ರದೇಶದ ಪೊಲೀಸ್ ಮಹಾ ನಿರ್ದೇಶಕರಾಗಿ ನಿವೃತ್ತರಾದರು. ಅದೇ ವರ್ಷ ಅವರು ಸುಪ್ರೀಂಕೋರ್ಟಿನ್ಯಾಗ ಒಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟಿನಿಂದ 2007ದಾಗ ಒಂದು ತೀರ್ಪು ಬಂತು. ಅದರ ಪ್ರಕಾರ ಪೊಲೀಸ ವ್ಯವಸ್ಥೆಯ ರಾಜಕೀಕರಣ ನಿಲ್ಲಬೇಕು. ಪೊಲೀಸರ ವರ್ಗಾವರ್ಗಿ, ವಿವಿಧ ಸ್ಥಾನಗಳಿಗೆ ನೇಮಕ ಮುಂತಾದವು ಕೇವಲ ಅವರವರ ಸಾಮಥ್ರ್ಯದ ಮ್ಯಾಲ ಇರಬೇಕು. ಅವರ ರಾಜಕೀಯ ನಿಲುವುಗಳಿಗೆ ತಕ್ಕಂಗ ಇರಬಾರದು. ಇದನ್ನ ಸಾಧಿಸಲಿಕ್ಕೆ ವಲಯ ಹಾಗೂ ರಾಜ್ಯ ಮಟ್ಟದಾಗ ಹಿರಿಯ ಅಧಿಕಾರಿಗಳ ಸಮಿತಿ ನೇಮಕ ಮಾಡಬೇಕು, ಮಾನವ ಸಂಪನ್ಮೂಲಕ್ಕ ಸಂಬಂಧಪಟ್ಟಂಗ, ವರ್ಗಾವರ್ಗಿ ಸಂಬಂಧಪಟ್ಟಂಗ ಎಲ್ಲಾ ನಿರ್ಧಾರ ಅವರ ತೊಗೋಬೇಕು ಅಂತ ತೀರ್ಪು ಬಂತು. ಯಾವುದೇ ಅಧಿಕಾರಿನ ಎರಡು ವರ್ಷಕ್ಕಿಂತ ಕಮ್ಮಿ ಸಮಯದಾಗ ವರ್ಗ ಮಾಡಬಾರದು ಅಂತ ಆದೇಶ ಬಂತು.

ಇದನ್ನ ಒಂದು ವರ್ಷದ ತನಕಾ ಕಟ್ಟುನಿಟ್ಟಿನ ಆದೇಶ ಅಂತ ಹೇಳಿ ಪಾಲಸಬೇಕು. ನಂತರ ಇದೇ ಮಾದರಿಯ ಕಾನೂನು ರಾಜ್ಯ ಶಾಸನಸಭೆಯೊಳಗ ಪಾಸು ಮಾಡಬೇಕು ಅಂತ ಆತು. ಅದಕ್ಕ ಕರ್ನಾಟಕದ ಘನ ಸರಕಾರ ಪಟಕ್ಕನ `ಎಸ್ ಸರ್’ ಅಂತ ಹೇಳಿತು. `ಹಂಗ ಮಾಡತೇವಿ’ ಅಂತ ಹೇಳಿ ಬರವಣಿಗೆಯೊಳಗ ಮಾತು ಕೊಟ್ಟಿತು.
ಮೊದಲ ಎರಡು ವರ್ಷ ಅಜಯ ಕುಮಾರ ಸಿಂಗ ಪೊಲೀಸ ಮಹಾ ನಿರ್ದೇಶಕರು ಇದ್ದರು, ಎಸ್‌. ಎಮ್ ಜಾಮದಾರ ಗೃಹ ಇಲಾಖೆ ಕಾರ್ಯದರ್ಶಿ ಇದ್ದರು. ಆವಾಗ ಎಲ್ಲಾ ಸುಪ್ರೀಂಕೊರ್ಟಿನ ಆದೇಶ ಪ್ರಕಾರ ನಡೀತು. ಸಿಂಗ ನಿವೃತ್ತರಾದರು, ಜಾಮದಾರ ಅವರು ವರ್ಗಾವಣೆ ಆದರು. ಆ ನಂತರ ಬಂದ ಹಿರಿಯ ಅಧಿಕಾರಿಗಳಿಗೆ ಅದು ಇಷ್ಟ ಇರಲಿಲ್ಲ. ಅವರು ಮತ್ತ ಮೊದಲಿನ ಹಂಗ ರಾಜಕೀಯ ನಾಯಕರ ಮಾತು ಕೇಳಿ ವರ್ಗಾವಣೆ ಶುರು ಮಾಡಿದರು.

ಈಗ ಮತ್ತ ಹಂಗ ಆಗೇದ. ದೆಹಲಿಯ ಜೆಎನ್‍ಯುದಾಗ, ಜಾಮಿಯಾದಾಗ, ಉತ್ತರ ಪ್ರದೇಶದಾಗ, ಬೀದರಿನ ಶಾಹೀನ ಸಾಲಿ ಪ್ರಕರಣದಾಗ, ಪೊಲೀಸರು ವಸ್ತುನಿಷ್ಠವಾಗಿ ನಡೆದುಕೊಳ್ಳದೇ ವ್ಯಕ್ತಿ ನಿಷ್ಠವಾಗಿ ನಡೆದುಕೊಂಡಿದ್ದಕ್ಕ ಅವರು ತಪ್ಪು ಮಾಡಲಾರದ ಸಜ್ಜನರ ವಿರುದ್ಧವಾಗಿ, ಅಪರಾಧಿಗಳ ಪರವಾಗಿ ನಡಕೊಂಡಾರ.

ಯಾಕಂದರ ನಾವು ಸುಪ್ರೀಂಕೋರ್ಟನ್ನ ನಮಗ ಬೇಕಂದಾಗ ಉಪಯೋಗಿಸತೇವಿ. ನಮಗ ಅನುಕೂಲ ಇದ್ದಾಗ ಪಾಲಸತೇವಿ, ಇಲ್ಲದಾಗ ಬಿಡತೇವಿ ಅದಕ್ಕ ಇಷ್ಟಲ್ಲಾ ರಂಜ್-ತಂಜ್ ಆಗಲಿಕ್ಕೆ ಹತ್ತೇದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...