Homeಅಂಕಣಗಳುಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

- Advertisement -
- Advertisement -

ಎಲ್ಲಾ ಮುಗದ ಮ್ಯಾಲ ಬರತಾರ. ಬೇಕಾದವರನ್ನ ಸಟಕ್ಕನ ಹಿಡೀತಾರ. ಬ್ಯಾಡಾದವರು ಕಣ್ಣೆದುರಿಗೆ ಇದ್ದರೂ ನೋಡದಂಗ ಇರತಾರ. ಎಲ್ಲಾ ಗೊತ್ತಿದ್ದೂ ತಪ್ಪು ಮಾಡತಾರೋ, ಅಥವಾ ಅವರಿಗೆ ತಿಳಿಯಂಗಿಲ್ಲೋ? ಸ್ವಂತ ಬುದ್ಧಿಯಿಂದ ಮಾಡತಾರೋ ಅಥವಾ ಯಾರದರ ಒತ್ತಡದಾಗ ಮಾಡತಾರೋ?

ಈ ಪ್ರಶ್ನೆಗಳಿಗೆ ಉತ್ತರ ಸರಳ. ಅವರು ದಡ್ಡರೇನಲ್ಲ. ಕಾಲಕ್ಕೆ ತಕ್ಕ ಹಂಗ ಬದಲಾಗೋ ಬುದ್ಧಿವಂತರು. ಆದರ ಅವರಿಗೆ ಸ್ವತಂತ್ರ ಇಲ್ಲ. ಅವರು ಆಳುವವರ ಹಂಗಿಗೆ ಬಿದ್ದವರು. ರಾಜಕೀಯ ಕಾರಣಕ್ಕಾಗಿ ನಿರ್ಧಾರ ಬದಲಿಸೋರು. ಅವರ ಕೆಲಸ ವೃತ್ತಿಪರತೆಗೆ ತಕ್ಕಂಗ ಅಲ್ಲ. ಅವರ ನಿಯತ್ತು ವಸ್ತು ನಿಷ್ಠ ಅಲ್ಲ. ವ್ಯಕ್ತಿ ನಿಷ್ಠ.
ಯಾಕ ಹಿಂಗ?

ಯಾಕಂದರ ಅವರು ರಾಜಕಾರಣಿಗಳ ಮುಲಾಜಿನ್ಯಾಗ ಇರತಾರ. ಅವರ ವರ್ಗಾವಣೆ- ನೇಮಕ- ಬದಲಾವಣೆಗೆ ಅವರು ಅಧಿಕಾರಿಗಳ ಕಡೆ ಹೋಗಂಗಿಲ್ಲ, ಎಮ್ಮೆಲ್ಲೆ ಸಾಹೇಬರ ಕಡೆ ಹೋಗತಾರ. ಅವರು ಹೂಂ ಅಂದರ ಇರತಾರ, ಇಲ್ಲಾ ಅಂದರ ಹೋಗತಾರ. ಅವರಿಗೆ ಬೇಕಾದಲ್ಲೆ, ಬೇಕಾಷ್ಟು ದಿನಾ ಇರತಾರ. ಅವರ ಮನಸು ತಗದರ ಹೋಗತಾರ.

ಹಿಂಗಿರುವಾಗ ಶಾಸಕರು ತಮ್ಮ ಕ್ಷೇತ್ರದ ಅನಭಿಷಕ್ತ ದೊರೆಯಾಗತಾರ. ದ್ವೇಷದ ರಾಜಕಾರಣ ಮಾಡತಾರ. ಬೇಕಾದವರನ್ನ ಒದ್ದ ಒಳಗ ಹಾಕಸತಾರ. ಬ್ಯಾಡಾದವರನ್ನ ಊರಾಗ ಮೆರಸತಾರ. ಒಮ್ಮೆ ಏನಾತಪಾ ಅಂದರ ಒಬ್ಬ ಪ್ರಭಾವಿ ರಾಜಕಾರಣಿಯ ಕ್ಷೇತ್ರದೊಳಗ ಒಂದು ಅತ್ಯಾಚಾರ ಪ್ರಕರಣ ಆತು. ಅದರ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಬ್ಯಾರೆ ಬ್ಯಾರೆ ಕೋಮಿನವರು ಇದ್ದರು. ಆರೋಪಿ ಶಾಸಕರ ಕೋಮಿನವರು ಆಗಿದ್ದರು. ಮುಂದ ಜಗಳ ಆಗತದ ಅಂತ ಹೇಳಿ ಶಾಸಕರು ತಲಿ ಓಡಿಸಿದರು. ಪೊಲೀಸ ಇನ್ಸಪೆಕ್ಟರ್‍ನ ಕರದು ಪ್ರಕರಣ ಬದಲಾವಣೆ ಮಾಡಿಸಿದರು. ಅತ್ಯಾಚಾರವನ್ನ ಗುಂಪು ಅತ್ಯಾಚಾರ ಅಂತ ಬದಲಾಯಿಸಲಾತು. ಸಂತ್ರಸ್ತೆಯ ಜಾತಿಯ ಹುಡುಗನೊಬ್ಬನ ಹೆಸರು ಅದರಾಗ ಸೇರಿಸಲಾಯಿತು. ಸಾರ್ವಜನಿಕ ಶಾಂತಿಗೆ ಭಂಗ ಬರಲಾರದಂಗ ಮಾಡೇವಿ ಅಂತ ಶಾಸಕರು ಹೇಳಿಕೊಂಡು ಅಡ್ಡಾಡಿದರು. ಸತ್ಯ ಏನಂದರ ಹೊಸದಾಗಿ ಹೆಸರು ಸೇರಿಸಿದ ಹುಡುಗ ಆ ಊರು ಬಿಟ್ಟು 20 ವರ್ಷ ಆಗಿತ್ತು. ಆತ ಕೆಲಸ ಹುಡುಕಿಕೊಂಡು ಬಾಂಬೆಗೆ ಹೋಗಿದ್ದ. ಅವನಿಗೆ ಈ ಪ್ರಕರಣದ ಬಗ್ಗೆ ಗೊತ್ತ ಇರಲಿಲ್ಲ.

ಆತ ಪ್ರಕರಣ ನಡದ ದಿವಸ ಊರಾಗ ಇರಲಿಲ್ಲ ಅಂದದ್ದಕ್ಕ, ಮತ್ತು ಇತರ ಕಾರಣಗಳಿಗೆ ಆ ಪ್ರಕರಣ ಬಿದ್ದು ಹೋತು. ನಿಜವಾದ ಆರೋಪಿ ಹೊರಗ ಬಂದ.

ಇಷ್ಟೆಲ್ಲಾ ಯಾಕ ಆತು ಅಂದರ ಆ ಇನ್ಸಪೆಕ್ಟರ್ ಆ ಶಾಸಕರ ಶಿಫಾರಸಿನ ಮೇಲೆ ಆ ಪೊಲೀಸ ಠಾಣೆಗೆ ಬಂದಿದ್ದ. ಆತ ಕಾನೂನಿಗೆ – ವ್ಯವಸ್ಥೆಗೆ- ಹಿರಿಯ ಅಧಿಕಾರಿಗಳ ಸಕಾರಣ ಸಲಹೆಗೆ ತಲೆ ಬಾಗದೇ ತನ್ನನ್ನು ತಂದ ಶಾಸಕರಿಗೆ ತಲೆ ಬಾಗಿದ. ಹಿಂಗ ಮಾಡೋ ಶಿಫಾರಸಿಗೆ ಮಿನಿಟ್ ಸಿಸ್ಟಂ ಅಂತ ಹೆಸರು. ಅದು ಹೋಗದ ಹೊರತು ಆ ಇಲಾಖೆ ಉದ್ಧಾರ ಸಾಧ್ಯ ಇಲ್ಲ ಅಂತ ತಿಳಿದವರ ಅಂಬೋಣ.

ಈ ಶಿಫಾರಸು ಮಾಡಬಾರದು ಅಂತ ಒಂದು ಕಾನೂನು ಅದ. ಅದು ಎಲ್ಲಿಂದ ಬಂತಪಾ ಅಂದರ, ಸುಪ್ರೀಂ ಕೋರ್ಟಿನ ಆದೇಶದಿಂದಾ ಬಂತು.

ಪದ್ಮಶ್ರೀ ಪ್ರಕಾಶ ಸಿಂಗ ಅವರು 1996 ದಾಗ ಉತ್ತರ ಪ್ರದೇಶದ ಪೊಲೀಸ್ ಮಹಾ ನಿರ್ದೇಶಕರಾಗಿ ನಿವೃತ್ತರಾದರು. ಅದೇ ವರ್ಷ ಅವರು ಸುಪ್ರೀಂಕೋರ್ಟಿನ್ಯಾಗ ಒಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟಿನಿಂದ 2007ದಾಗ ಒಂದು ತೀರ್ಪು ಬಂತು. ಅದರ ಪ್ರಕಾರ ಪೊಲೀಸ ವ್ಯವಸ್ಥೆಯ ರಾಜಕೀಕರಣ ನಿಲ್ಲಬೇಕು. ಪೊಲೀಸರ ವರ್ಗಾವರ್ಗಿ, ವಿವಿಧ ಸ್ಥಾನಗಳಿಗೆ ನೇಮಕ ಮುಂತಾದವು ಕೇವಲ ಅವರವರ ಸಾಮಥ್ರ್ಯದ ಮ್ಯಾಲ ಇರಬೇಕು. ಅವರ ರಾಜಕೀಯ ನಿಲುವುಗಳಿಗೆ ತಕ್ಕಂಗ ಇರಬಾರದು. ಇದನ್ನ ಸಾಧಿಸಲಿಕ್ಕೆ ವಲಯ ಹಾಗೂ ರಾಜ್ಯ ಮಟ್ಟದಾಗ ಹಿರಿಯ ಅಧಿಕಾರಿಗಳ ಸಮಿತಿ ನೇಮಕ ಮಾಡಬೇಕು, ಮಾನವ ಸಂಪನ್ಮೂಲಕ್ಕ ಸಂಬಂಧಪಟ್ಟಂಗ, ವರ್ಗಾವರ್ಗಿ ಸಂಬಂಧಪಟ್ಟಂಗ ಎಲ್ಲಾ ನಿರ್ಧಾರ ಅವರ ತೊಗೋಬೇಕು ಅಂತ ತೀರ್ಪು ಬಂತು. ಯಾವುದೇ ಅಧಿಕಾರಿನ ಎರಡು ವರ್ಷಕ್ಕಿಂತ ಕಮ್ಮಿ ಸಮಯದಾಗ ವರ್ಗ ಮಾಡಬಾರದು ಅಂತ ಆದೇಶ ಬಂತು.

ಇದನ್ನ ಒಂದು ವರ್ಷದ ತನಕಾ ಕಟ್ಟುನಿಟ್ಟಿನ ಆದೇಶ ಅಂತ ಹೇಳಿ ಪಾಲಸಬೇಕು. ನಂತರ ಇದೇ ಮಾದರಿಯ ಕಾನೂನು ರಾಜ್ಯ ಶಾಸನಸಭೆಯೊಳಗ ಪಾಸು ಮಾಡಬೇಕು ಅಂತ ಆತು. ಅದಕ್ಕ ಕರ್ನಾಟಕದ ಘನ ಸರಕಾರ ಪಟಕ್ಕನ `ಎಸ್ ಸರ್’ ಅಂತ ಹೇಳಿತು. `ಹಂಗ ಮಾಡತೇವಿ’ ಅಂತ ಹೇಳಿ ಬರವಣಿಗೆಯೊಳಗ ಮಾತು ಕೊಟ್ಟಿತು.
ಮೊದಲ ಎರಡು ವರ್ಷ ಅಜಯ ಕುಮಾರ ಸಿಂಗ ಪೊಲೀಸ ಮಹಾ ನಿರ್ದೇಶಕರು ಇದ್ದರು, ಎಸ್‌. ಎಮ್ ಜಾಮದಾರ ಗೃಹ ಇಲಾಖೆ ಕಾರ್ಯದರ್ಶಿ ಇದ್ದರು. ಆವಾಗ ಎಲ್ಲಾ ಸುಪ್ರೀಂಕೊರ್ಟಿನ ಆದೇಶ ಪ್ರಕಾರ ನಡೀತು. ಸಿಂಗ ನಿವೃತ್ತರಾದರು, ಜಾಮದಾರ ಅವರು ವರ್ಗಾವಣೆ ಆದರು. ಆ ನಂತರ ಬಂದ ಹಿರಿಯ ಅಧಿಕಾರಿಗಳಿಗೆ ಅದು ಇಷ್ಟ ಇರಲಿಲ್ಲ. ಅವರು ಮತ್ತ ಮೊದಲಿನ ಹಂಗ ರಾಜಕೀಯ ನಾಯಕರ ಮಾತು ಕೇಳಿ ವರ್ಗಾವಣೆ ಶುರು ಮಾಡಿದರು.

ಈಗ ಮತ್ತ ಹಂಗ ಆಗೇದ. ದೆಹಲಿಯ ಜೆಎನ್‍ಯುದಾಗ, ಜಾಮಿಯಾದಾಗ, ಉತ್ತರ ಪ್ರದೇಶದಾಗ, ಬೀದರಿನ ಶಾಹೀನ ಸಾಲಿ ಪ್ರಕರಣದಾಗ, ಪೊಲೀಸರು ವಸ್ತುನಿಷ್ಠವಾಗಿ ನಡೆದುಕೊಳ್ಳದೇ ವ್ಯಕ್ತಿ ನಿಷ್ಠವಾಗಿ ನಡೆದುಕೊಂಡಿದ್ದಕ್ಕ ಅವರು ತಪ್ಪು ಮಾಡಲಾರದ ಸಜ್ಜನರ ವಿರುದ್ಧವಾಗಿ, ಅಪರಾಧಿಗಳ ಪರವಾಗಿ ನಡಕೊಂಡಾರ.

ಯಾಕಂದರ ನಾವು ಸುಪ್ರೀಂಕೋರ್ಟನ್ನ ನಮಗ ಬೇಕಂದಾಗ ಉಪಯೋಗಿಸತೇವಿ. ನಮಗ ಅನುಕೂಲ ಇದ್ದಾಗ ಪಾಲಸತೇವಿ, ಇಲ್ಲದಾಗ ಬಿಡತೇವಿ ಅದಕ್ಕ ಇಷ್ಟಲ್ಲಾ ರಂಜ್-ತಂಜ್ ಆಗಲಿಕ್ಕೆ ಹತ್ತೇದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...