Homeಕರ್ನಾಟಕದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

- Advertisement -
- Advertisement -

ಪುಟಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್‌

ಇಂದಿನ ರಾಜ್ಯಾಡಳಿತದ ಸಾಂಸ್ಥಿಕತೆಯು ರೂಪುಗೊಂಡಿರುವುದು ಅಂದಿನ ಬುಡಕಟ್ಟು ಸಮುದಾಯಗಳ ಸಮಾಧಿಗಳ ಮೇಲೆ. ಈ ಸ್ಪಷ್ಟತೆಯ ಅರಿವಿನ ಮೇಲೆಯೇ ದೇವಿಪ್ರಸಾದ್ ಚಟ್ಟೋಪಾಧ್ಯಾಯ ಭಾರತದಲ್ಲಿ ಬುಡಕಟ್ಟುಗಳ ಸಂಸ್ಕೃತಿ ಮತ್ತು ಸಮಾಜದ ಆಳ, ಎತ್ತರಗಳನ್ನು ಶೋಧಿಸುತ್ತಾ ಹೋಗುತ್ತಾರೆ.

ಬಹಳ ಮುಖ್ಯವಾಗಿ ವೈದಿಕ ಸಮುದಾಯದಿಂದ ಇಂದು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿರುವ ಅನೇಕ ಪರಿಕಲ್ಪನೆಗಳ ಸಾಮಾಜಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಚರಿತ್ರೆಯನ್ನು ನಿಖರ ಮಾಹಿತಿಗಳ ಮೂಲಕ ಅರಿವಿಗೆ ಗ್ರಾಸ ಒದಗಿಸುತ್ತಾರೆ.

ಲೋಕಾಯತ, ಹೆಸರೇ ಧ್ವನಿಸುವಂತೆ, ಕೃತಿಯು ಬರೀ ಭೌತವಾದಕ್ಕೆ ಸೀಮಿತವಾಗುವುದಿಲ್ಲ. ಇಂದಿನ ಭಾರತದಲ್ಲಿ ಪ್ರಚಲಿತದಲ್ಲಿರುವ ಅನೇಕಾನೇಕ ಪರಿಕಲ್ಪನೆಗಳ ಉಗಮ, ಬೆಳವಣಿಗೆ ಮತ್ತು ರೂಪಾಂತರಗೊಂಡಿರುವುದರ ಬಗ್ಗೆ ಯಾವುದೇ ಸೃಜನಶೀಲ ಕಾದಂಬರಿಗಿಂತ ರೋಚಕತೆಯನ್ನು ನೀಡುತ್ತದೆ. ನಾವು ಯಾವುದನ್ನೋ ತಲೆತಲಾಂತರಗಳಿಂದ ಶ್ರೇಷ್ಠವೆಂದೋ, ಪವಿತ್ರವೆಂದೋ ಶ್ರದ್ಧೆಯಿಂದ ನಂಬಿಕೊಂಡು ಬಂದಿರುವುದು, ಅದೇ ನಾವು ಯಾವುದನ್ನು ಕನಿಷ್ಟ ಅಥವಾ ನೀಚ ಎಂದು ಅಂದುಕೊಂಡಿದ್ದೇವೋ, ಅದೇ ಆ ಪಾವಿತ್ರ‍್ಯತೆಯ ಉಗಮವೆಂದು ತಿಳಿದಾಗ ಅಚ್ಚರಿಯಾಗುತ್ತದೆ.

ಅತಿ ಮುಖ್ಯವಾಗಿ ಯಾವ ರಾಕ್ಷಸರನ್ನು ಕ್ರೂರಿಗಳೆಂದು, ದುಷ್ಟರೆಂದು ಪೌರಾಣಿಕ ಕಥನಗಳು ವಿವರಿಸಿಕೊಂಡು ಮತ್ತು ನಂಬಿಸಿಕೊಂಡು ಬಂದಿದ್ದವೋ ಅದಕ್ಕೆ ವ್ಯತಿರಿಕ್ತವಾಗಿ ಅವರು ಅರಣ್ಯಕರೆಂದು, ಬುಡಕಟ್ಟಿನವರೆಂದು ತಿಳಿದುಬರುತ್ತದೆ. ಜೊತೆಗೆ ಅವರ ಅಸ್ತಿತ್ವಕ್ಕಾಗಿ ಮತ್ತು ಉಳಿವಿಗಾಗಿ ಮಾಡಿದಂತಹ ಅನಿವಾರ್ಯದ ಕದನಗಳು, ಪ್ರತಿಭಟನೆಗಳೆಲ್ಲಾ ಇಂದು ಪೀಡೆಗಳನ್ನಾಗಿ ಬಿಂಬಿಸಿರುವ ಕಾರಣಗಳು ಸ್ಪಷ್ಟವಾಗುತ್ತದೆ.

ಇನ್ನು ಧಾರ್ಮಿಕವಾಗಿ ಗುರುತಿಸಲ್ಪಡುವ ಗೋತ್ರಗಳು ಟೋಟಮ್ ಅಥವಾ ಪ್ರಾಣಿ ಲಾಂಛನದ ಬುಡಕಟ್ಟು ಅಧ್ಯಯನಗಳ ಕಡೆಗೆ ಹೊರಳುತ್ತವೆ. ಅಲ್ಲೇ ಸ್ವಾರಸ್ಯವೂ ಇರುವುದು. ಕಶ್ಯಪ, ಗೌತಮ, ಭಾರಧ್ವಜ ಇತ್ಯಾದಿ ಬ್ರಾಹ್ಮಣ ಗೋತ್ರದವರ ಮೂಲ ಆಮೆ, ಗೂಬೆ ಮತ್ತು ಇತರ ಕಾಡಿನ ಪ್ರಾಣಿ, ಪಕ್ಷಿ ಮತ್ತು ಮರಗಿಡಗಳ ಗುರುತುಗಳನ್ನು ಹೊಂದಿರುವ ಬುಡಕಟ್ಟು ಪಂಗಡಗಳು.

ಹಾಗೆಯೇ ತಾಯಾಳಿಕೆಯ ಜಾಡು ಹಿಡಿದು ಗೌರಿಯ ಸ್ತ್ರೀ ತತ್ವದ ಎಳೆಗಳಿಂದ ವ್ರತ ಮತ್ತು ವ್ರಾತ್ಯ ಇತ್ಯಾದಿಗಳ ತಿಳಿವಳಿಕೆ ನೀಡುತ್ತಾ ಕೃಷಿಯನ್ನು ಆರಂಭ ಮಾಡಿದ್ದು ಹೆಂಗಸು ಎಂಬ ಅಂಶವನ್ನು ಹೊರಗೆಡವುತ್ತಾರೆ.

ಆದಿಪೂಜಿತ ಗಣಪತಿಯ ಗಾಣಪತ್ಯದ ರಹಸ್ಯವನ್ನು ಹೊರಗೆಡವುತ್ತಾರೆ. ವಿನಾಯಕನ ಬಗ್ಗೆ ಏನೆಲ್ಲಾ ಭಯಭಕ್ತಿಗಳನ್ನು ಇಟ್ಟುಕೊಂಡಿರುವ ಜನರಿಗೆ ಇದೇ ವಿನಾಯಕ ದುಃಸ್ವಪ್ನದ ಕುರುಹಾಗಿದ್ದರ ಬಗ್ಗೆ ಬೆಚ್ಚಿಬೀಳಿಸದೇ ಇರದು. ಇಂದು ಗಣಪತಿಯ ಬಗ್ಗೆ ಏನೇನೆಲ್ಲಾ ಶುಭ ಎಂದು ಕಾಣುತ್ತೇವೋ ಅದೆಲ್ಲವೂ ಅರಣ್ಯಕಗಳಲ್ಲಿ, ಯಾಜ್ಞವಲ್ಯ ಸ್ಮೃತಿಯಲ್ಲಿ, ಬ್ರಾಹ್ಮಣಗಳಲ್ಲಿ ಅಷ್ಟೇ ಅಶುಭವಾಗಿ, ಕೀಳಾಗಿ ಕಾಣುತ್ತಿದ್ದ ಉಲ್ಲೇಖಗಳನ್ನು ಕಾಣಿಸುತ್ತಾರೆ.

ಮಾನವಶಾಸ್ತ್ರೀಯ ಅಧ್ಯಯನಕ್ಕೆ ನೆರವಾಗುತ್ತಲೇ ಭಾರತದ ಧಾರ್ಮಿಕ, ಆಧ್ಯಾತ್ಮಿಕ, ತಾತ್ವಿಕ, ಸಾಂಸ್ಕೃತಿಕ ಚರಿತ್ರೆಗಳನ್ನು ಇಂದು ಯಾವ ಪ್ರತಿಕೃತಿಗಳಲ್ಲಿ ಕಾಣುತ್ತಿದ್ದೇವೆ ಎಂಬ ಅರಿವು ಮೂಡಿಸುವ ಮಹಾನ್ ವಿದ್ವಾಂಸ ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ಬರಿಯ ಪೌರಾಣಿಕತೆಯ ಆಯಾಮದಿಂದಷ್ಟೇ ಧಾರ್ಮಿಕತೆಯ ಶ್ರದ್ಧೆಯನ್ನು ಕಟ್ಟಿಕೊಂಡವರಿಗೆ ಲೋಕಾಯತ ಗಾಬರಿ ಬೀಳಿಸದೇ ಇರದು. ಆದರೆ ಯಾವುದೇ ಸಂಪ್ರದಾಯ, ಆಚರಣೆ ಮತ್ತು ಧಾರ್ಮಿಕ ವಿಧಿವಿಧಾನಗಳ ಜಾಡು ಹಿಡಿದು ಹೊರಟರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚರಿತ್ರೆಗಳು ಒಂದಷ್ಟು ಧೂಳೊದರಿಕೊಂಡು ಬೆಳಕಿಗೆ ಬರುತ್ತವೆ. ಅದು ಅದೇ ಪರಿಕಲ್ಪನೆಗಳ ಆಧಾರದಲ್ಲಿ ಇಂದು ನಡೆಯುತ್ತಿರುವ ಶೋಷಣೆಗಳೂ ಅರಿವಿಗೆ ನಿಲುಕುತ್ತವೆ. ಪೌರಾಣಿಕ ಕಥನಗಳ ರೂಪಕಗಳನ್ನು ತಿಳಿಯಲು, ಒಗಟುಗಳನ್ನು ಬಿಡಿಸಲು ನೆರವಾಗುತ್ತವೆ.

ಲೋಕಾಯತದ ಪುಟಪುಟವೂ ಸಾಂಸ್ಕೃತಿಕ ಚರಿತ್ರೆ ಮತ್ತು ಒಳನೋಟಗಳ ಬಳುವಳಿಗಳೇ.

ನವಕರ್ನಾಟಕ ಪ್ರಕಾಶನದಲ್ಲಿ ಈ ಕೃತಿ ಕನ್ನಡದಲ್ಲಿಯೂ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...